ನಟಿ ರಮ್ಯಾರನ್ನು ಬಿಜೆಪಿಗೆ ಆಹ್ವಾನಿಸುವಷ್ಟು ನಮ್ಮ ಪಾರ್ಟಿ ಬರಗೆಟ್ಟಿಲ್ಲ‌ : ಸಚಿವ ಆರ್ ಅಶೋಕ

Date:

Advertisements

ನಟಿ ರಮ್ಯಾರನ್ನು ಬಿಜೆಪಿಗೆ ಆಹ್ವಾನಿಸುವಷ್ಟು ನಮ್ಮ ಪಾರ್ಟಿ ಬರಗೆಟ್ಟಿಲ್ಲ‌. ಮಾಜಿ ಸಿಎಂ ಜಗದೀಶ್ ಶೆಟ್ಟರ್, ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಅವರಿಗೇ ಟಿಕೆಟ್ ಕೊಟ್ಟಿಲ್ಲ. ಇನ್ನು ರಮ್ಯಾಗೆ ಕರೆದು ಸಚಿವ ಸ್ಥಾನ ಕೊಡ್ತೀವಾ? ಎಂದು ಸಚಿವ ಆರ್ ಅಶೋಕ ಹೇಳಿದರು.

ʼಬಿಜೆಪಿಗೆ ಬನ್ನಿ ನಾಳೆಯೇ ನಿಮ್ಮನ್ನು ಮಂತ್ರಿ ಮಾಡುತ್ತೇವೆʼ ಎಂದು ಬಿಜೆಪಿ ನಾಯಕರು ಆಹ್ವಾನಿಸಿದ್ದಾರೆ ಎಂದು ಸ್ವತಃ ರಮ್ಯಾ ಈ ವಿಚಾರ ಬಹಿರಂಗಪಡಿಸಿದ್ದಾರೆ. ರಮ್ಯಾ ಅವರ ಈ ಹೇಳಿಕೆಗೆ ಸಚಿವ ಆರ್ ಅಶೋಕ್ ಭಾನುವಾರ ತಿರುಗೇಟು ನೀಡಿದ್ದಾರೆ.

ಇಂಗ್ಲಿಷ್‌ ಸುದ್ದಿವಾಹಿನಿಯ ಕಾರ್ಯಕ್ರಮವೊಂದರಲ್ಲಿ ಶನಿವಾರ ಮಾತನಾಡಿದ್ದ ರಮ್ಯಾ, “ನಾನು ಕೆಲವು ಬಾರಿ ಕಾಂಗ್ರೆಸ್‌ ವಿರುದ್ಧ ಮಾತನಾಡಿದ್ದಾಗ ಬಿಜೆಪಿಯಿಂದ ಆಫರ್‌ ಬಂದಿತ್ತು. ಆದರೆ, ನಾನು ಯಾವುದೇ ಭಿನ್ನಭಿಪ್ರಾಯ ಕಾರಣಕ್ಕೆ ಬಿಜೆಪಿಗೆ ಹೋಗಲಿಲ್ಲ. ಹಾಗಂತ ನನಗೆ ಬಿಜೆಪಿ ಮೇಲೆ ದ್ವೇಷ ಇಲ್ಲ. ಆದರೆ, ಅವರ ಕೆಲವೊಂದು ಸಿದ್ಧಾಂತಗಳಿಗೆ ನನ್ನ ವಿರೋಧವಿದೆ” ಎಂದು ಹೇಳಿಕೊಂಡಿದ್ದರು.

Advertisements

ಮುಂದುವರಿದು, “ಮಾಜಿ ಸಿಎಂ ಎಚ್‌ ಡಿ ಕುಮಾರಸ್ವಾಮಿ ಅವರನ್ನು ಆಕಸ್ಮಿಕವಾಗಿ ಭೇಟಿಯಾದಾಗ, ʼನೀವು ಏಕೆ ರಾಜಕೀಯವನ್ನು ಬಿಟ್ರಿ? ಮತ್ತೆ ರಾಜಕೀಯಕ್ಕೆ ಬನ್ನಿ, ನಿಮಗೆ ಸಾಮರ್ಥ್ಯವಿದೆ. ರಾಜಕೀಯ ಕ್ಷೇತ್ರವನ್ನು ಬಿಡಬೇಡಿʼ ಎಂದು ಸಲಹೆ ನೀಡಿದ್ದರು” ಎಂದು ರಮ್ಯಾ ಹೇಳಿದ್ದರು.

“ಕಾಂಗ್ರೆಸ್‌ ಈ ಬಾರಿ ಆರು ಕ್ಷೇತ್ರಗಳ ಟಿಕೆಟ್‌ ಅನ್ನು ನನಗೆ ಆಫರ್‌ ಮಾಡಿತ್ತು. ಆದರೆ, ನಾನು ಇನ್ನೂ ತಯಾರಾಗಿಲ್ಲ. ಚುನಾವಣೆಗೆ ನಿಲ್ಲಲು ಗ್ರೌಂಡ್‌ನಲ್ಲಿ ಕೆಲಸ ಮಾಡಬೇಕು. ಅದಕ್ಕೆ ಸಂಪೂರ್ಣ ಸಮಯ ವಿನಿಯೋಗಿಸಬೇಕು. ಅದು ಈಗ ನನಗೆ ಸಾಧ್ಯವಿಲ್ಲ. ನಾನು ಸ್ಪರ್ಧಿಸದೇ ಪಕ್ಷಕ್ಕೆ ಬೆಂಬಲ ನೀಡುತ್ತೇನೆ. ಪಕ್ಷಕ್ಕಾಗಿ ದುಡಿಯುತ್ತೇನೆ” ಎಂದು ಹೇಳಿದ್ದೇನೆ ಎಂದು ರಮ್ಯಾ ತಿಳಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

ದಾವಣಗೆರೆ | ಕೆ.ಎನ್‌. ರಾಜಣ್ಣ, ನಾಗೇಂದ್ರರ ಮರಳಿ ಸಂಪುಟ ಸೇರ್ಪಡೆಗೆ ವಾಲ್ಮೀಕಿ ಸಮಾಜ ಆಗ್ರಹ

"ಇತ್ತೀಚೆಗೆ ಚುನಾವಣೆ ಆಯೋಗದ ವಿರುದ್ಧ ಕಾಂಗ್ರೆಸ್ ಆರೋಪಕ್ಕೆ ವ್ಯತಿರಿಕ್ತ ಹೇಳಿಕೆ ನೀಡಿ...

Download Eedina App Android / iOS

X