ಹರಿಯಾಣ| ಹೊತ್ತಿ ಉರಿದ ಬಸ್; 8 ಮಂದಿ ಸಜೀವ ದಹನ, 20 ಜನರಿಗೆ ಗಾಯ

Date:

Advertisements

ಹರಿಯಾಣದ ನುಹ್ ಜಿಲ್ಲೆಯ ತೌರು ಬಳಿ ಶನಿವಾರ ಮುಂಜಾನೆ ಚಲಿಸುತ್ತಿದ್ದ ಬಸ್‌ಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಕನಿಷ್ಠ 8 ಮಂದಿ ಸಜೀವ ದಹನಗೊಂಡಿದ್ದಾರೆ.

ಬಸ್‌ನಲ್ಲಿ 64 ಮಂದಿ ಪ್ರಯಾಣಿಸುತ್ತಿದ್ದರು ಎಂದು ವರದಿಯಾಗಿದ್ದು, ಈ ಪೈಕಿ 20 ಮಂದಿಗೆ ಗಾಯವಾಗಿದೆ ಎಂದು ವರದಿಯಾಗಿದೆ. ಇನ್ನೂ ಹಲವಾರು ಮಂದಿಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.


ಕುಂಡ್ಲಿ-ಮನೇಸರ್-ಪಲ್ವಾಲ್ (ಕೆಎಂಪಿ) ಎಕ್ಸ್‌ಪ್ರೆಸ್‌ವೇಯಲ್ಲಿ ಮುಂಜಾನೆ 2 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ.

Advertisements

ಇದನ್ನು ಓದಿದ್ದೀರಾ?  ಬೆಂಗಳೂರು | ಕಾರುಗಳ ನಡುವೆ ಢಿಕ್ಕಿ ಯುವತಿ ಸಜೀವ ದಹನ; ಗಾಯಗೊಂಡಿದ್ದ ಮೂವರು ಸಾವು

ಬಸ್‌ನಲ್ಲಿ ಪಂಜಾಬ್‌ನ ಹೋಶಿಯಾರ್‌ಪುರ ಮತ್ತು ಲುಧಿಯಾನ ನಿವಾಸಿಗಳಿದ್ದರು. ಈ ಪ್ರಯಾಣಿಕರು ಮಥುರಾ ಮತ್ತು ವೃಂದಾವನಕ್ಕೆ ಪ್ರಯಾಣಿಸಿ ವಾಪಸ್ ಬರುತ್ತಿದ್ದರು ಎಂದು ವರದಿಯಾಗಿದೆ. ಇವರೆಲ್ಲರೂ ಸಂಬಂಧಿಕರು ಎಂದು ಪೊಲೀಸರು ತಿಳಿಸಿದ್ದಾರೆ.

“ನಾವು ವೃಂದಾವನದಿಂದ ವಾಪಸ್ ಬರುತ್ತಿದ್ದೆವು. ಬಸ್‌ಗೆ ಬೆಂಕಿ ಹತ್ತಿಕೊಂಡಿದ್ದು ಹೇಗೆ ಎಂದು ನಮಗೆ ತಿಳಿದಿಲ್ಲ. ಹತ್ತು ಜನರು ಸಾವನ್ನಪ್ಪಿದ್ದಾರೆ. ನಾವು 64 ಜನರು ಬಸ್‌ನಲ್ಲಿದ್ದೆವು” ಎಂದು ಗಾಯಾಳು ಮೀನಾ ರಾಣಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X