ವಿಜಯಪುರ | ಜಂಬಗಿ ಕೆರೆಗೆ ನೀರು ಹರಿಸಲು ರೈತರ ಆಗ್ರಹ; ಧರಣಿ

Date:

Advertisements

ವಿಜಯಪುರ ಜಿಲ್ಲೆಯ ಜಂಬಗಿ ಕೆರೆಗೆ ಕಗ್ಗೋಡು ಕರೆಯಿಂದ ನೀರು ಹರಿಸಬೇಕೆಂದು ರೈತರು ಆಗ್ರಹಿಸಿದ್ದಾರೆ. ರೈತರ ಒತ್ತಾಯಕ್ಕೆ ಅಧಿಕಾರಿಗಳು ಒಪ್ಪದ ಹಿನ್ನೆಲೆ ಧರಣಿ ನಡೆಸುತ್ತಿದ್ದಾರೆ.

ಗುರುವಾರ, ಜಂಬಗಿ ಕೆರೆ ಸುತ್ತಮುತ್ತಲಿನ ಗ್ರಾಮಗಳ ವಿಜಯಪುರಲ್ಲಿ ರೈತರು ಧರಣಿ ಆರಂಭಿಸಿದ್ದರು. ಅಧಿಕಾರಿಗಳು ಮಾತುಕತೆಗೆ ಕರೆದ ಹಿನ್ನೆಲೆ ಧರಣಿಯನ್ನು ಸ್ಥಗಿತಗೊಳಿಸಿ, ಶುಕ್ರವಾರ ಸಭೆಗೆ ಹಾಜರಾಗಿದ್ದರು. ಆದರೆ, ಜಂಬಗಿ ಕೆರೆಗೆ ಕಗ್ಗೋಡು ಕರೆಯಿಂದ ನೀರು ಹರಿಸಲು ಉಪ ವಿಭಾಗಾಧಿಕಾರಿ ಶ್ವೇತಾ ಬೀಡೆಕರ, ತಹಸೀಲ್ದಾ‌ರ್ ಕವಿತಾ ಒಪ್ಪದ ಹಿನ್ನೆಲೆಯಲ್ಲಿ ಶುಕ್ರವಾರದಿಂದ ಮತ್ತೆ ಧರಣಿ ಮುಂದುವರೆಸಿದ್ದಾರೆ.

ಕಗ್ಗೋಡ ಕೆರೆಯಿಂದ 6-7 ಕಿ.ಮೀ ಅಂತರದಲ್ಲಿ ಜಂಬಗಿ ಕೆರೆ ಇದೆ. ಹೀಗಾಗಿ, ಹಳ್ಳದ ಮೂಲಕ ನೀರು ಹರಿಸಿದರೆ, ಶೀಘ್ರವೇ ಕರೆ ತುಂಬುತ್ತದೆ ಎಂಬುದು ರೈತರ ವಾದ. ಆದರೆ, ಸಭೆಯಲ್ಲಿ ಅಧಿಕಾರಿಗಳು ರಾಂಪೂರ ವಿಭಾಗದಿಂದ ಜಂಬಗಿ ಕೆರೆಗೆ ನೀರು ಹರಿಸುವುದಾಗಿ ಹೇಳುತ್ತಿದ್ದಾರೆ.

Advertisements

ಅಧಿಕಾರಗಳ ನಿಲುವಿಗೆ ವಿರೋಧ ವ್ಯಕ್ತಪಡಿಸಿರುವ ರೈತರು, ರಾಂಪೂರ ವಿಭಾಗದಿಂದ ನೀರು ಹರಿಸಿದರೆ ಜಂಬಗಿ ಕೆರೆಗೆ ಸಮರ್ಪಕವಾಗಿ ನೀರು ತಲುಪುವುದಿಲ್ಲ. ಹೀಗಾಗಿ,ಕಗ್ಗೋಡ ಕೆರೆಯಿಂದ ನೀರು ಹರಿಸಿದರೆ, ಮಾತ್ರವೇ ಶಾಶ್ವತ ಪರಿಹಾರ ದೊರೆಯುತ್ತದೆ ಎಂದಿದ್ದಾರೆ.

ಧರಣಿಯಲ್ಲಿ ಮಾತನಾಡಿದ ರೈತ ಮುಖಂಡ ಮಹಾದೇವಪ್ಪ ತೇಲಿ, “ರಾಂಪೂರ ವ್ಯಾಪ್ತಿಯ ಕಾಲುವೆಯಿಂದ ನೀರು ಹರಿಸಿ, ಈ ಬಾರಿ ಕೆರೆ ತುಂಬುವುದು ಅಸಾಧ್ಯ. ಆದರೆ, ಸಮೀಪದ ಕಗ್ಗೋಡ ಕೆರೆಯಿಂದ ಹಳ್ಳದ ಮೂಲಕ ನೀರು ಹರಿಸಿದರೆ, ಕೇವಲ 6-7 ಕಿ.ಮೀ. ಅಂತರದಲ್ಲಿರುವ ಜಂಬಗಿ ಕೆರೆಗೆ ಸರಾಗವಾಗಿ ನೀರು ಹರಿದು ಬರುತ್ತದೆ, ಕೆರೆ ತುಂಬುತ್ತದೆ. ಇಳಿಜಾರು ಮಾರ್ಗದಲ್ಲಿ ಹಳ್ಳ ಹರಿಯುವುದರಿಂದ ವಿಶೇಷವಾಗಿ ಯಾವುದೇ ಖರ್ಚಿಲ್ಲದೇ ಜಂಬಗಿ ಕೆರೆ ತುಂಬಿಸಬಹುದು” ಎಂದಿದ್ದಾರೆ.

ಧರಣಿಯಲ್ಲಿ ರೈತ ಮುಖಂಡ ಪ್ರಕಾಶ ತೇಲಿ, ಗ್ರಾಪಂ ಅಧ್ಯಕ್ಷ ಶ್ರೀಶೈಲ ಮಸೂತಿ, ಆಹೇರಿ ಗ್ರಾಪಂ ಮಾಜಿ ಅಧ್ಯಕ್ಷ ಬಸವರಾಜ ಗಾಣಗೇರ, ಪ್ರಭು ಕಾರಜೋಳ, ಜಯಸಿಂಗರಜಪೂತ, ಚಿನ್ನಪ್ಪವಾಡೇದ, ಅನಮೇಶ ಜಮಖಂಡಿ, ನಿಜಲಿಂಗಪ್ಪ ತೇಲಿ, ಬಸನಗೌಡ ಬಿರಾದಾರ, ಮಲ್ಲಿಕಾರ್ಜುನ ನಾಗರಾಣ, ಬಸವಂತ ತೇಲಿ ಸೇರಿದಂತೆ ಅನೇಕರು ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಳ್ಳಾರಿ | ನಶಿಸಿ ಹೋಗುತ್ತಿರುವ ತೊಗಲುಗೊಂಬೆ ಪ್ರದರ್ಶನ ಉಳಿಸಿ ಬೆಳೆಸಬೇಕು: ಜೋಳದರಾಶಿ ತಿಮ್ಮಪ್ಪ

ನಶಿಸಿ ಹೋಗುತ್ತಿರುವ ತೊಗಲು ಗೊಂಬೆ ಪ್ರದರ್ಶನ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ...

ಭಟ್ಕಳ | ಮಗಳ ಅಶ್ಲೀಲ ವಿಡಿಯೊ ವೈರಲ್ ಮಾಡುವುದಾಗಿ ಬೆದರಿಕೆ: ಮೂವರ ಬಂಧನ

ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ನಗರದ ಕಿದ್ವಾಯಿ ರಸ್ತೆಯೊಂದರ ತರಕಾರಿ ವ್ಯಾಪಾರಿಯನ್ನು...

ಮಂಗಳೂರು | ಸ್ನಾತಕೋತ್ತರದತ್ತ ಮುಖಮಾಡದ ಪದವೀಧರರು: ಪ್ರವೇಶಾತಿ ಗಡುವು ವಿಸ್ತರಣೆ

ನಾಲ್ಕು ದಶಕಗಳಷ್ಟು ಹಳೆಯದಾದ ಮಂಗಳೂರು ವಿಶ್ವವಿದ್ಯಾಲಯ(MU), ನಿರೀಕ್ಷಿತ ಸಂಖ್ಯೆಯ ಪ್ರವೇಶಗಳನ್ನು ಪಡೆಯಲು...

ತುಮಕೂರು | ಅಧಿವೇಶನದಲ್ಲಿ ಆರ್‌ಎಸ್ಎಸ್ ಗೀತೆ : ಡಿಕೆಶಿ ವಿರುದ್ಧ ಕೆ. ಎನ್ ರಾಜಣ್ಣ ವಾಗ್ದಾಳಿ

ಡಿ.ಕೆ.ಶಿವಕುಮಾ‌ರ್ ಅಧಿವೇಶನದಲ್ಲಿ ಆರ್‌ಎಸ್ಎಸ್ ಗೀತೆ ಹಾಡಿದ ಬಗ್ಗೆ  ಮಾಜಿ ಸಚಿವ ಕೆ...

Download Eedina App Android / iOS

X