‘ಬ್ರಾಂಡ್ ಮೋದಿ’ಗೆ ಜನರಿಂದಲೇ ಸವಾಲು: ಪ್ರಶಾಂತ್ ಕಿಶೋರ್

Date:

Advertisements

“ಪ್ರಧಾನಿ ನರೇಂದ್ರ ಮೋದಿಯವರಿಗೆ ಯಾವುದೇ ರಾಜಕೀಯ ಪಕ್ಷ ಅಥವಾ ನಾಯಕರು ಸವಾಲು ಹಾಕದಿದ್ದರೆ, ಜನರೇ ಸವಾಲು ಹಾಕುತ್ತಿದ್ದಾರೆ” ಎಂದು ರಾಜಕೀಯ ತಂತ್ರಜ್ಞ ಪ್ರಶಾಂತ್ ಕಿಶೋರ್ ಹೇಳಿದರು.

ಸುದ್ದಿವಾಹಿನಿ ಆರ್‌ಟಿವಿಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಪ್ರಶಾಂತ್ ಕಿಶೋರ್, “ಈ ಚುನಾವಣೆಯಲ್ಲಿ ಬ್ರಾಂಡ್ ಮೋದಿ ಅಜೇಯರಲ್ಲ ಎಂಬುದು ಜನರಿಗೆ ತಿಳಿದಿದೆ. ಹಾಗಂತ ಪ್ರಧಾನಿ ಮೋದಿಗೆ ಯಾರೂ ಸವಾಲು ಹಾಕಲು ಸಾಧ್ಯವಿಲ್ಲ ಎಂದಲ್ಲ. ಯಾವುದೇ ರಾಜಕೀಯ ಪಕ್ಷ ಅಥವಾ ನಾಯಕರು ಪ್ರಧಾನಿ ಮೋದಿಗೆ ಸವಾಲು ಹಾಕಲಿ ಅಥವಾ ಹಾಕದಿರಲಿ, ಜನರು ಅವರಿಗೆ ಸವಾಲು ಹಾಕುತ್ತಿದ್ದಾರೆ” ಎಂದು ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ?  ಪ್ರಶಾಂತ್ ಕಿಶೋರ್ ಚುನಾವಣಾ ಸಮೀಕ್ಷೆ ಸುಳ್ಳಾಗಿಲ್ಲವೇ, ಇದು ಬಿಜೆಪಿಯ ಮೈಂಡ್‌ ಗೇಮ್‌ ಅಲ್ಲವೇ?

Advertisements

“60 ಕೋಟಿಗೂ ಹೆಚ್ಚು ಜನರು ದಿನಕ್ಕೆ ನೂರು ರೂಪಾಯಿಗಿಂತ ಹೆಚ್ಚು ಸಂಪಾದನೆ ಮಾಡಲಾಗದ ಸ್ಥಿತಿ ದೇಶದಲ್ಲಿದೆ. ಇಂತಹ ದೇಶದಲ್ಲಿ ಸರ್ಕಾರದ ವಿರುದ್ಧ ಇರುವ ವಿಪಕ್ಷವನ್ನು ಎಂದಿಗೂ ದುರ್ಬಲಗೊಳಿಸಲಾಗುವುದಿಲ್ಲ. ಆ ಪ್ರಯತ್ನವನ್ನು ಮಾಡುವ ತಪ್ಪನ್ನು ಎಂದಿಗೂ ಮಾಡಬಾರದು. ವಿಪಕ್ಷಗಳು ದುರ್ಬಲವಾಗಬಹುದು. ಆದರೆ ಸರ್ಕಾರಕ್ಕೆ ಇರುವ ವಿರೋಧಗಳು ದುರ್ಬಲವಾಗುವುದಿಲ್ಲ” ಎಂದು ಅಭಿಪ್ರಾಯಿಸಿದರು.

“ಇಲ್ಲಿ [ಭಾರತ] ಶೇಕಡ 50ರಷ್ಟು ಮತಗಳನ್ನು ಪಡೆಯಲು ಸಾಧ್ಯವಿಲ್ಲ. 100 ಜನರು ಮತ ಚಲಾಯಿಸಿದರೆ, ಕೇವಲ 40 ಜನರು ಮಾತ್ರ ಪ್ರಧಾನಿ ಮೋದಿಯನ್ನು ಬೆಂಬಲಿಸುತ್ತಾರೆ. 60-62 ಜನರು ಅತೃಪ್ತಿಯಾಗಿಯೇ ಇರುತ್ತಾರೆ. ಪ್ರಧಾನಿ ಮೋದಿ ಮತ್ತು ಬಿಜೆಪಿ ಮುಂದೆ ಸವಾಲುಗಳಿವೆ. ಗ್ರಾಮೀಣ ಸಂಕಷ್ಟ ದೇಶದ ಅತೀ ಪ್ರಮುಖ ಸಮಸ್ಯೆ. ಇಷ್ಟೆಲ್ಲ ಆದ ಬಳಿಕವೂ ಬಿಜೆಪಿ ಗೆದ್ದರೆ ವಿಪಕ್ಷಗಳು ಸಾಕಷ್ಟು ಬಲವಾಗಿಲ್ಲ, ವಿಶ್ವಾಸಾರ್ಹವಾಗಿಲ್ಲ ಎಂದರ್ಥವೇ ಹೊರತು, ಎಲ್ಲರೂ ಮೋದಿ ಸರ್ಕಾರದಿಂದ ಸಂತೋಷವಾಗಿದ್ದಾರೆ ಎಂದು ಅರ್ಥವಲ್ಲ” ಎಂದರು.

ಇದನ್ನು ಓದಿದ್ದೀರಾ?  ಪ್ರಶಾಂತ್ ಕಿಶೋರ್ ಚುನಾವಣಾ ಭವಿಷ್ಯ ‘ಹಾಸ್ಯಾಸ್ಪದ, ಬಿಜೆಪಿ ಪ್ರಾಯೋಜಿತ’ ಎಂದ ಕಾಂಗ್ರೆಸ್

ಬ್ಯ್ರಾಂಡ್ ಮೋದಿ ಪತನ

ಪ್ರಶಾಂತ್ ಕಿಶೋರ್ 2024ರ ಚುನಾವಣೆಯಲ್ಲಿ ಪಿಎಂ ಮೋದಿ ಶಕ್ತಿಯನ್ನು ಬ್ಯ್ರಾಂಡ್ ಮೋದಿ ಎಂದು ಕರೆದಿದ್ದು 2014 ರ ಚುನಾವಣೆಗೆ ಹೋಲಿಸಿದ್ದಾರೆ. “2024ರಲ್ಲಿ ಮತ ಹಾಕಲು ಬೇರೆ ಯಾರೂ ಇಲ್ಲ ಎಂಬ ಭಾವನೆ ಜನರಲ್ಲಿದೆ. ಬ್ರ್ಯಾಂಡ್ ಮೋದಿ ದುರ್ಬಲವಾಗುತ್ತಿದೆ. ಬ್ರಾಂಡ್ ಮೋದಿ ಶಕ್ತಿ ಕುಸಿಯುತ್ತಿದೆ. ರಾಮಮಂದಿರದ ಹೆಸರಿನಲ್ಲಿ ಬಿಜೆಪಿ ಒಂದು ಹೆಚ್ಚುವರಿ ಮತವನ್ನೂ ಪಡೆಯುತ್ತಿಲ್ಲ” ಎಂದು ಅಭಿಪ್ರಾಯಿಸಿದ್ದಾರೆ.

 

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಬಿಐ ಅಧಿಕಾರಿಗಳಂತೆ ನಟಿಸಿ 2.3 ಕೋಟಿ ರೂ. ದೋಚಿದ್ದ ಗ್ಯಾಂಗ್: ಇಬ್ಬರ ಬಂಧನ

ಕೇಂದ್ರ ತನಿಖಾ ದಳ (ಸಿಬಿಐ) ಅಧಿಕಾರಿಗಳಂತೆ ನಟಿಸಿ ಉದ್ಯಮಿಯೊಬ್ಬರ ಕಚೇರಿಯಿಂದ ಗ್ಯಾಂಗ್...

ಬೀದಿ ನಾಯಿಗಳಿಗೆ ಲಸಿಕೆ ಹಾಕಿದ ನಂತರ ಅದೇ ಸ್ಥಳಕ್ಕೆ ತಂದು ಬಿಡಬೇಕು: ಸುಪ್ರೀಂ ಕೋರ್ಟ್‌

ಬೀದಿ ನಾಯಿಗಳಿಗೆ ಸಂಬಂಧಿಸಿದ್ದಂತೆ ಆಗಸ್ಟ್ 11ರ ಆದೇಶವನ್ನು ಮಾರ್ಪಡಿಸಿದ ಸುಪ್ರೀಂ...

ವಿವಾದಾತ್ಮಕ ಯೂಟ್ಯೂಬರ್ ಎಲ್ವಿಶ್ ಮನೆ ಮೇಲೆ ಗುಂಡಿನ ದಾಳಿ: ಎನ್‌ಕೌಂಟರ್ ಮಾಡಿ ಆರೋಪಿ ಬಂಧನ

ಬಲಪಂಥೀಯ, ವಿವಾದಾತ್ಮಕ ಯೂಟ್ಯೂಬರ್ ಮತ್ತು ಬಿಗ್ ಬಾಸ್ ವಿಜೇತ ಎಲ್ವಿಶ್ ಯಾದವ್‌...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

Download Eedina App Android / iOS

X