ಕಣ್ಣಿನ ಶಸ್ತ್ರಚಿಕಿತ್ಸೆ ಬಳಿಕ ಯುಕೆಯಿಂದ ಹಿಂದಿರುಗಿದ ರಾಘವ್ ಚಡ್ಡಾ; ಕೇಜ್ರಿವಾಲ್‌ ನಿವಾಸಕ್ಕೆ ಭೇಟಿ

Date:

Advertisements

ಆಮ್ ಆದ್ಮಿ ಪಕ್ಷದ (ಎಎಪಿ) ಸಂಸದ ರಾಘವ್ ಚಡ್ಡಾ ಅವರು ಕಣ್ಣಿನ ಶಸ್ತ್ರಚಿಕಿತ್ಸೆಗೆ ಒಳಗಾಗಿ ಯುಕೆಯಿಂದ ಹಿಂದಿರುಗಿದ್ದು ಅಬಕಾರಿ ನೀತಿ ಹಗರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನಿವಾಸಕ್ಕೆ ಭೇಟಿ ನೀಡಿದ್ದಾರೆ.

ಸುಮಾರು ಒಂದು ತಿಂಗಳ ನಂತರ ರಾಘವ್ ಚಡ್ಡಾ ಈಗ ಬಹಿರಂಗವಾಗಿ ಕಾಣಿಸಿಕೊಂಡಿದ್ದಾರೆ. ರಾಘವ್ ಚಡ್ಡಾ ಅವರು ತನ್ನ ಕಣ್ಣಿನ ದೃಷ್ಟಿಯನ್ನು ಸಂಪೂರ್ಣವಾಗಿ ಕಳೆದುಕೊಳ್ಳುವ ಗಂಭೀರ ಸ್ಥಿತಿ ಎದುರಾಗಿತ್ತು ಎಂದು ವರದಿಯಾಗಿದೆ.

ಯುನೈಟೆಡ್ ಕಿಂಗ್‌ಡಮ್‌ನಲ್ಲಿ ಈ ತಿಂಗಳ ಆರಂಭದಲ್ಲಿ ಚಡ್ಡಾ ಅವರು ತುರ್ತು ಕಣ್ಣಿನ ಶಸ್ತ್ರಚಿಕಿತ್ಸೆ-ವಿಟ್ರೆಕ್ಟಮಿ-ಗೆ ಒಳಗಾಗಿದ್ದರು. ಅರವಿಂದ್ ಕೇಜ್ರಿವಾಲ್ ಅವರ ಬಂಧನದ ಸಂದರ್ಭದಲ್ಲಿ ಚಡ್ಡಾ ಅವರ ಗೈರುಹಾಜರಿಯ ಬಗ್ಗೆ ಸಾಕಷ್ಟು ಊಹಾಪೋಹಗಳು ಹರಿದಾಡಿದ್ದವು.

Advertisements

ಇದನ್ನು ಓದಿದ್ದೀರಾ?  ಶಸ್ತ್ರಚಿಕಿತ್ಸೆಗಾಗಿ ಯುಕೆಯಲ್ಲಿರುವ ರಾಘವ್ ಚಡ್ಡಾ, ದೃಷ್ಟಿ ಕಳೆದುಕೊಳ್ಳುವ ಗಂಭೀರ ಸ್ಥಿತಿಯಿತ್ತು: ದೆಹಲಿ ಸಚಿವ

ಅಬಕಾರಿ ನೀತಿ ಪ್ರಕರಣದ ಆರೋಪಪಟ್ಟಿಯಲ್ಲಿ ರಾಘವ್ ಚಡ್ಡಾ ಹೆಸರೂ ಇದೆ ಎಂದು ಹೇಳಲಾಗಿತ್ತು. ಇದಾದ ಬಳಿಕ ಚಡ್ಡಾ ನಾಪತ್ತೆಯಾದರೆ ಎಂದು ಪ್ರಶ್ನಿಸಲಾಗುತ್ತಿತ್ತು. ಆದರೆ ಎಎಪಿ ನಾಯಕರು ಪತ್ರಿಕಾಗೋಷ್ಠಿಯಲ್ಲಿ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸುತ್ತಾ ಸ್ಪಷ್ಟನೆಯನ್ನು ನೀಡಿದ್ದರು.

ರಾಘವ್ ಚಡ್ಡಾ ಅವರು ಚುನಾವಣಾ ಪ್ರಚಾರಕ್ಕೆ ಗೈರುಹಾಜರಾಗಿರುವ ಬಗ್ಗೆ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವ ಸೌರಭ್ ಭಾರದ್ವಾಜ್, “ರಾಘವ್ ಚಡ್ಡಾ ಕಣ್ಣುಗಳಲ್ಲಿ ಸಮಸ್ಯೆ ಕಾಣಿಸಿಕೊಂಡಿದೆ. ಅದಾದ ಬಳಿಕ ಚಿಕಿತ್ಸೆ ಪಡೆಯಲು ಯುಕೆಗೆ ಅವರು ತೆರಳಿದರು. ಸ್ಥಿತಿ ಗಂಭೀರವಾಗಿದ್ದು, ಸಕಾಲಿಕ ಚಿಕಿತ್ಸೆ ನೀಡದಿದ್ದರೆ ಕುರುಡುತನದ ಸಾಧ್ಯತೆಯಿದೆ ಎಂದು ನನಗೆ ತಿಳಿಸಲಾಗಿತ್ತು” ಎಂದು ಏಪ್ರಿಲ್ ಕೊನೆಯಲ್ಲಿ ಹೇಳಿದ್ದಾರೆ.

ಇದನ್ನು ಓದಿದ್ದೀರಾ? ದೆಹಲಿ ಅಬಕಾರಿ ನೀತಿ ಪ್ರಕರಣ | ಇ.ಡಿ ಆರೋಪ ಪಟ್ಟಿಯಲ್ಲಿ ರಾಘವ್ ಚಡ್ಡಾ ಹೆಸರು ಉಲ್ಲೇಖ

“ರಾಘವ್ ಚಡ್ಡಾ ಶೀಘ್ರವಾಗಿ ಚೇತರಿಸಿಕೊಳ್ಳಬೇಕೆಂದು ನಾನು ಬಯಸುತ್ತೇನೆ. ಅವರು ಗುಣಮುಖರಾದ ತಕ್ಷಣ ಭಾರತಕ್ಕೆ ಹಿಂದಿರುಗಲಿದ್ದಾರೆ. ಬಳಿಕ ಪಕ್ಷದ ಪ್ರಚಾರದಲ್ಲಿ ಸೇರಲಿದ್ದಾರೆ” ಎಂದು ಸೌರಭ್ ಭಾರದ್ವಾಜ್ ತಿಳಿಸಿದ್ದರು.

 

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈದಿನ ವಿಶೇಷ | ಧರ್ಮಸ್ಥಳ: ಉತ್ತರ ನೀಡಿದ ಗೃಹ ಸಚಿವರು; ಈಗಲೂ ಉಳಿದ ಹಲವು ಪ್ರಶ್ನೆಗಳು

ಸದನದಲ್ಲಿ ನಿಂತು ಷಡ್ಯಂತ್ರ ಎನ್ನುವವರಿಗೆ, ಎಸ್‌ಐಟಿ ರಚನೆಯಾಗಿದ್ದೇಕೆ? ಕಾನೂನು ಏನು ಹೇಳುತ್ತೆ?...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

Download Eedina App Android / iOS

X