100 ಕೋಟಿ ಆಫರ್ ಆರೋಪ: ‘ವಕೀಲ ದೇವರಾಜೇಗೌಡ ಮೆಂಟಲ್ ಕೇಸ್’ ಎಂದ ಡಿಸಿಎಂ ಡಿ ಕೆ ಶಿವಕುಮಾರ್‌

Date:

Advertisements

“ಪ್ರಜ್ವಲ್ ರೇವಣ್ಣ ಅವರ ಪೆನ್‌ಡ್ರೈವ್ ಪ್ರಕರಣದಲ್ಲಿ ನಾಲ್ಕು ಮಂತ್ರಿಗಳ ಕಮಿಟಿ ಮಾಡಿ, ಪೆನ್‌ಡ್ರೈವ್‌ ರೆಡಿ ಮಾಡಿದ್ದೇ ಡಿ.ಕೆ.ಶಿವಕುಮಾರ್‌. ಎಲ್.ಆರ್. ಶಿವರಾಮೇಗೌಡ ಮೂಲಕ 100 ಕೋಟಿ ರೂಪಾಯಿ ಆಫರ್ ಮಾಡಿದ್ದರು” ಎಂದು ವಕೀಲ ಹಾಗೂ ಬಿಜೆಪಿ ಮುಖಂಡ ದೇವರಾಜೇಗೌಡ ಮೇ 17ರಂದು ಹಾಸನದಲ್ಲಿ ನೀಡಿದ್ದ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಡಿಸಿಎಂ ಡಿ ಕೆ ಶಿವಕುಮಾರ್, “ಈ ಆರೋಪ ಆಧಾರಹಿತ. ದೇವರಾಜೇಗೌಡ ಓರ್ವ ಮೆಂಟಲ್ ಕೇಸ್. ತಲೆ ಕೆಟ್ಟಿದೆ. ಆತನ ಆರೋಪಕ್ಕೆ ನಾನು ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ” ಎಂದು ತಿಳಿಸಿದ್ದಾರೆ.

ಬೆಂಗಳೂರಿನ ಸದಾಶಿವ ನಗರದಲ್ಲಿರುವ ತಮ್ಮ ನಿವಾಸದಲ್ಲಿ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ನಾನು 100 ಕೋಟಿ ರೂ. ಆಫರ್ ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತಕ್ಕೆ ದೂರು ಕೊಡಲಿ. ರಾಷ್ಟ್ರೀಯ, ರಾಜ್ಯ ಮಾಧ್ಯಮಗಳು ಆರೋಪಿಯ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಬಾರದು” ಎಂದರು.

“ದೇವರಾಜೇಗೌಡ ಏನು ಬೇಕಾದರೂ ಮಾತನಾಡಿಕೊಳ್ಳಲಿ. ಆತನ ತಲೆ ಕೆಟ್ಟಿದೆ. ನಾನು ಯಾರ ಜೊತೆಯಲ್ಲೂ ಮಾತನಾಡಿಲ್ಲ. ನನ್ನ ಹತ್ತಿರ ಯಾವುದಕ್ಕೂ ನೂರಾರು ಜನ ಬರುತ್ತಿರುತ್ತಾರೆ. ಬರುವವರನ್ನು ಸ್ಕ್ಯಾನ್‌ ಮಾಡಲು ಆಗುತ್ತಾ” ಎಂದು ಡಿ ಕೆ ಶಿವಕುಮಾರ್‌ ಪ್ರಶ್ನಿಸಿದರು.

Advertisements

ಇದನ್ನು ಓದಿದ್ದೀರಾ? ಪ್ರಜ್ವಲ್ ಪ್ರಕರಣ | ನಾಲ್ಕು ಮಂತ್ರಿಗಳ ಕಮಿಟಿ ಮಾಡಿ, ಪೆನ್‌ಡ್ರೈವ್‌ ರೆಡಿ ಮಾಡಿದ್ದೇ ಡಿಕೆಶಿ: ದೇವರಾಜೇಗೌಡ ಹೊಸ ಆರೋಪ

“ಕೆಲವರಿಗೆ ನನ್ನ ಹೆಸರನ್ನ ಉಪಯೋಗಿಸಿಕೊಂಡರೆ ಮಾರ್ಕೆಟ್ ಸಿಗುತ್ತದೆ ಎಂದುಕೊಂಡಿದ್ದಾರೆ. ಅದಕ್ಕಾಗಿ ನನ್ನ ಹೆಸರನ್ನು ಬಳಸಿಕೊಳ್ಳುತ್ತಿರುತ್ತಾರೆ. ದೇವರಾಜೇಗೌಡ ಮೆಂಟಲ್ ಕೇಸ್. ಯಾರೋ ಏನೋ ಹೇಳಿದ್ರು ಎಂದುಕೊಂಡು ನಾನು ತಲೆ ಕೆಡಿಸಿಕೊಳ್ಳಲ್ಲ. 100 ಕೋಟಿ ಆಫರ್‌ಗೆ ಏನಾದರೂ ಸಾಕ್ಷ್ಯ ಇದ್ದರೆ ಆಗಬಹುದು. ಇಂತಹ ಆರೋಪಗಳು ಬಂದಾಗ ಅದನ್ನು ಸರಿಯಾಗಿ ತಿಳಿದುಕೊಳ್ಳದೆ ವರದಿ ಮಾಡುವ ಮಾಧ್ಯಮಗಳ ಬಗ್ಗೆ ನನಗೆ ಅನುಕಂಪ ಆಗ್ತಾ ಇದೆ. ಇದರಲ್ಲಿ ಏನಾದರೂ ಸತ್ಯ ಇದೆಯೇ, ಇಲ್ಲವೇ ಎಂಬುದನ್ನು ತಿಳಿದುಕೊಳ್ಳಬೇಕಾದದ್ದು ಮಾಧ್ಯಮಗಳ ಜವಾಬ್ದಾರಿ” ಎಂದು ಡಿಸಿಎಂ ಡಿ ಕೆ ಶಿವಕುಮಾರ್‌ ಕಿವಿಮಾತು ಹೇಳಿದರು.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಪ್ಲಾನ್ ಬಿ ಬಗೆಗಿನ ಮಾತು ಮತ್ತು ನಾಯಕನ ಹಿಂದಿನ ನಾಯಕ

“ಎಲ್ಲರೂ ಪೆನ್ ಡ್ರೈವ್ ಬಗ್ಗೆ ಮಾತನಾಡುತ್ತಿದ್ದಾರೆ. ಆದರೆ ಸಂತ್ರಸ್ತೆಯರ ಬಗ್ಗೆ ಯಾರೂ ಮಾತನಾಡುತ್ತಿಲ್ಲ ಯಾಕೆ? ಈ ವಿಚಾರದಲ್ಲಿ ನಾನು ಹೆಚ್ಚು ಏನೂ ಮಾತನಾಡುವುದಿಲ್ಲ. ರಾಜ್ಯದಲ್ಲಿ ಮಳೆ, ಬೆಳೆಯಾಗಲಿ ಎಂದು ಎಲ್ಲರೂ ಪ್ರಾರ್ಥಿಸಿ” ಎಂದು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಮನವಿ ಮಾಡಿದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

Download Eedina App Android / iOS

X