ಪ್ರಜ್ವಲ್ ಲೈಂಗಿಕ ಹಗರಣ | ಸಿಬಿಐ ತನಿಖೆಗೆ ನೀಡಲು ಬಿಜೆಪಿ ಅಧ್ಯಕ್ಷ ವಿಜಯೇಂದ್ರ ಒತ್ತಾಯ

Date:

Advertisements

ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಎನ್ನಲಾದ ಲೈಂಗಿಕ ಹಗರಣದಲ್ಲಿ ಪ್ರಮುಖ ನಾಯಕರ ಹೆಸರು ಇರುವುದರಿಂದ ವಿಶೇಷ ತನಿಖಾ ತಂಡವು (ಎಸ್‌ಐಟಿ) ಪಾರದರ್ಶಕವಾಗಿ ತನಿಖೆ ಮಾಡಲು ಸಾಧ್ಯವಿಲ್ಲ. ಹೀಗಾಗಿ, ತನಿಖೆಯನ್ನು ತಡ ಮಾಡದೆ ಸಿಬಿಐಗೆ ವಹಿಸಬೇಕು” ಎಂದು ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿವೈ ವಿಜಯೇಂದ್ರ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಕರ್ನಾಟಕ ಸರ್ಕಾರ ಪ್ರಕರಣವನ್ನು ಸಿಬಿಐಗೆ ವಹಿಸಬೇಕು” ಎಂದು ಆಗ್ರಹಿಸಿದ್ದಾರೆ.

“ಹಗರಣದ ಸಂತ್ರಸ್ತರಿಗೆ ನ್ಯಾಯ ಸಿಗಬೇಕು. ಹಗರಣದಲ್ಲಿ ಪ್ರಮುಖ ನಾಯಕರ ಹೆಸರು ಹೇಳಲಾಗುತ್ತಿದೆ. ಈ ಪ್ರಕರಣದಲ್ಲಿ ಎಸ್‌ಐಟಿ ನ್ಯಾಯ ನೀಡಲು ಸಾಧ್ಯವಿಲ್ಲ. ರಾಜ್ಯ ಸರ್ಕಾರ ಈ ತನಿಖೆಯನ್ನು ಸಿಬಿಐಗೆ ವಹಿಸಬೇಕು” ಎಂದಿದ್ದಾರೆ.

Advertisements

“ಹಗರಣದ ಬಗ್ಗೆ ಬಿಜೆಪಿಯ ನಿಲುವು ಸ್ಪಷ್ಟವಾಗಿದೆ. ದಿನದಿಂದ ದಿನಕ್ಕೆ ಹೊಸ ಹೊಸ ಅಂಶಗಳು ಹೊರಬರುತ್ತಿವೆ. ವಿಡಿಯೋಗಳು ಹೊರಬರುವಲ್ಲಿ ರಾಜ್ಯ ಸರ್ಕಾರದ ಪ್ರಮುಖ ನಾಯಕರ ಪಾತ್ರದ ಬಗ್ಗೆ ಕೇಳಿಬರುತ್ತಿದೆ. ಈ ಹಗರಣದಲ್ಲಿ ನಾನು ಯಾರನ್ನೂ ಬೆಂಬಲಿಸುವುದಿಲ್ಲ. ರಾಜಕೀಯ ಉದ್ದೇಶಕ್ಕಾಗಿ ಹಗರಣವನ್ನು ಬಳಸುವುದನ್ನು ನಿಲ್ಲಿಸಬೇಕು. ಸಂತ್ರಸ್ತರಿಗೆ ನ್ಯಾಯ ಸಿಗಬೇಕು. ಪ್ರಕರಣವು ತಾರ್ಕಿಕ ಅಂತ್ಯ ಕಾಣಬೇಕೆಂದರೆ, ಸಿಬಿಐ ತನಿಖೆಗೆ ನೀಡಬೇಕು” ಎಂದು ವಿಜಯೇಂದ್ರ ಹೇಳಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ವಿದ್ಯಾರ್ಥಿನಿ ಕೊಲೆ, ಬೆಂಕಿ ಹಚ್ಚಿ ಸುಟ್ಟ ಅಪರಾಧಿಗಳಿಗೆ ಗಲ್ಲುಶಿಕ್ಷೆ ವಿಧಿಸಲು ಎಸ್ ಎಫ್ ಐ ಆಗ್ರಹ

ಚಿತ್ರದುರ್ಗದ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಬಳಿ ಹಿರಿಯೂರು ತಾಲೂಕಿನ 19 ವರ್ಷದ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಆಹ್ವಾನ ಸಂಪೂರ್ಣ ಸುಳ್ಳು: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಈ ಬಾರಿಯ ದಸರಾ ಉದ್ಘಾಟನೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯನ್ನು ಆಹ್ವಾನಿಸಲಾಗಿದೆ...

Download Eedina App Android / iOS

X