ಚೆನ್ನೈ ಸೋಲಿಸಿ ಆರ್‌ಸಿಬಿ ಪ್ಲೇ ಆಫ್‌ಗೆ: ಮುಗಿಲು ಮುಟ್ಟಿದ ಅಭಿಮಾನಿಗಳ ಸಂಭ್ರಮಾಚರಣೆ

Date:

Advertisements

ಪ್ಲೇ-ಆಫ್‌ ಪ್ರವೇಶ ಕಾರಣಕ್ಕೆ ಕೊನೆ ಕ್ಷಣದವರೆಗೂ ರೋಚಕತೆಯಿಂದ ಕೂಡಿದ್ದ ಚೆನ್ನೈ ಸೂಪರ್‌ ಕಿಂಗ್ಸ್‌ ವಿರುದ್ಧದ ಪಂದ್ಯದಲ್ಲಿ ಗೆದ್ದು ಬೀಗಿದ ರಾಯಲ್ ಚಾಲೆಂಜರ್ಸ್‌ ಬೆಂಗಳೂರು ತಂಡವು, ರಾಯಲ್‌ ಆಗಿ ಪ್ಲೇ-ಆಫ್‌ಗೆ ಎಂಟ್ರಿ ಕೊಟ್ಟಿದೆ. ಈ ಸಲ ಕಪ್‌ ನಮ್ದು ಎಂದು ಅಭಿಮಾನಿಗಳು ಸಂಭ್ರಮಿಸುತ್ತಿದ್ದಾರೆ.

ಇಲ್ಲಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್‌ ಪದ್ಯದಲ್ಲಿ ಚೆನ್ನೈ ವಿರುದ್ಧ ಆರ್‌ಸಿಬಿ 27 ರನ್‌ಗಳ ಗೆಲುವು ದಾಖಲಿಸಿತು. ಒಂದು ವೇಳೆ ಪಂದ್ಯ ಸೋತು 201 ರನ್‌ ಗಳಿಸಿದ್ದರೂ ಚೆನ್ನೈ ಪ್ಲೇ-ಆಫ್‌ ಪ್ರವೇಶಿಸಲು ಸಾಧ್ಯವಾಗುತ್ತಿತ್ತು. ಆದರೆ ಆರ್‌ಸಿಬಿ ಬೌಲರ್‌ಗಳ ಉತ್ತಮ ಪ್ರದರ್ಶನದಿಂದ ಚೆನ್ನೈ ಪ್ಲೇ-ಆಫ್‌ ಕನಸಿಗೂ ತಣ್ಣೀರು ಬಿದ್ದಿತು. ಕೇವಲ 10 ರನ್‌ಗಳ ಅಂತರದಲ್ಲಿ ಗಾಯಕ್‌ವಾಡ್‌ ಪಡೆ ಪ್ಲೇ-ಆಫ್‌ನಿಂದ ಮುಗ್ಗರಿಸಿತು.

ಆರ್‌ಸಿಬಿ ಪ್ಲೇ ಆಫ್ ಪ್ರವೇಶಿಸುತ್ತಿದ್ದಂತೆಯೇ ರಸ್ತೆಗಿಳಿದಿರುವ ಅಭಿಮಾನಿಗಳು, ಪಟಾಕಿಗಳನ್ನು ಸಿಡಿಸುವ ಮೂಲಕ ಕಪ್ ಗೆದ್ದಷ್ಟೇ ಸಂಭ್ರಮಾಚರಣೆ ನಡೆಸುತ್ತಿದ್ದಾರೆ.

Advertisements

ಬೆಂಗಳೂರು, ಮಂಗಳೂರು ಸೇರಿದಂತೆ ದೇಶ ಹಾಗೂ ಕರ್ನಾಟಕದ ಹಲವೆಡೆ ಅಭಿಮಾನಿಗಳು ರಸ್ತೆಗೆ ಇಳಿದು, ಖುಷಿಯಿಂದ ನೃತ್ಯ ಮಾಡಿ, ಸಂಭ್ರಮಿಸಿದರು. ಒಂದು ಕಡೆ ಆರ್‌ಸಿಬಿ ಅಭಿಮಾನಿಗಳು ಕುಣಿದು ಕುಪ್ಪಳಿಸುತ್ತಿದ್ದರೆ, ಚೆನ್ನೈ ಹಾಗೂ ಧೋನಿ ಅಭಿಮಾನಿಗಳು ಕಣ್ಣೀರು ಹಾಕುತ್ತಿದ್ದಾರೆ.

ಇದನ್ನು ಓದಿದ್ದೀರಾ? ಫೀನಿಕ್ಸ್‌ನಂತೆ ಎದ್ದು ಬಂದ ಆರ್‌ಸಿಬಿ ಪ್ಲೇ-ಆಫ್‌ಗೆ; ಸಿಎಸ್‌ಕೆ ಮನೆಗೆ

ಕೆಲವು ಮಂದಿ ಸಂಭ್ರಮಾಚರಣೆಯ ವಿಡಿಯೋಗಳನ್ನು ಪೋಸ್ಟ್ ಮಾಡಿ, ಆರ್‌ಸಿಬಿಯ ಅಭಿಮಾನಿಗಳು ಪ್ಲೇ ಆಫ್‌ಗೆ ಹೋದದ್ದನ್ನು ಇಷ್ಟೊಂದು ಸಂಭ್ರಮಾಚರಣೆ ಮಾಡುತ್ತಿರುವುದನ್ನು ನೋಡಿದರೆ, ಒಂದು ವೇಳೆ ಫೈನಲ್ ಪ್ರವೇಶಿಸಿ, ಕಪ್ ಗೆದ್ದರೆ ಹೇಗಿರಬಹುದು” ಎಂದು ಆಶ್ಚರ್ಯ ವ್ಯಕ್ತಪಡಿಸುತ್ತಿದ್ದಾರೆ.

ಆರ್‌ಸಿಬಿಗೆ ಅಭಿನಂದನೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

ಸಿಎಂ ಸಿದ್ದರಾಮಯ್ಯ ಇಂದಿನ ಪಂದ್ಯವನ್ನು ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ತೆರಳಿ, ವೀಕ್ಷಿಸಿದ್ದರು. ಆರ್‌ಸಿಬಿ ಗೆದ್ದು, ಪ್ಲೇ ಆಫ್‌ ಪ್ರವೇಶಿಸುತ್ತಿದ್ದಂತೆಯೇ ಅಭಿನಂದನೆ ಸಲ್ಲಿಸಿದರಲ್ಲದೇ, ‘ಇದು ಆರ್‌ಸಿಬಿಯ ಹೊಸ ಅಧ್ಯಾಯ’ ಎಂದು ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

 

 

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸರ್ಕಾರಿ ಶಾಲೆ ಮಕ್ಕಳಿಗೆ ಸುಸಜ್ಜಿತ ವ್ಯವಸ್ಥೆ ಸಿಕ್ಕರೆ ಅತ್ಯುನ್ನತ ಸಾಧನೆ, ಸಾಮರ್ಥ್ಯ ಅನಾವರಣ

"ಖಾಸಗಿ ಶಾಲೆಗಳಲ್ಲಿ ಓದುವ ಮಕ್ಕಳಿಗಿಂತ ಸರ್ಕಾರಿ ಶಾಲೆಗಳ ಮಕ್ಕಳು ಯಾವುದರಲ್ಲಿಯೂ ಕಡಿಮೆ...

ಸಾಗರ್ ಧನಕರ್ ಹತ್ಯೆ ಪ್ರಕರಣ: ಕುಸ್ತಿಪಟು ಸುಶೀಲ್ ಕುಮಾರ್ ಜಾಮೀನು ರದ್ದು

ಜೂನಿಯರ್ ರಾಷ್ಟ್ರೀಯ ಕುಸ್ತಿ ಚಾಂಪಿಯನ್ ಸಾಗರ್ ಧನಕರ್ ಹತ್ಯೆ ಪ್ರಕರಣದ ಪ್ರಮುಖ...

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

Download Eedina App Android / iOS

X