ಬೀದರ್‌ | ಜನವಾಡ ಗ್ರಾಪಂ ಪಿಡಿಒ ವರ್ಗಾವಣೆಗೆ ಸದಸ್ಯರ ಆಗ್ರಹ

Date:

Advertisements

ಒಂಬತ್ತು ತಿಂಗಳಿಂದ ಸಾಮಾನ್ಯ ಸಭೆ ನಡೆಸದೇ ಸರಕಾರದ ನಿಯಮಗಳನ್ನು ಗಾಳಿಗೆ ತೂರಿ ತೆರಿಗೆ ಹಣ ಹಾಗೂ 15ನೇ ಹಣಕಾಸು ಯೋಜನೆಯ ಲಕ್ಷಾಂತರ ರೂ. ಅವ್ಯವಹಾರ ನಡೆಸಿದ ಜನವಾಡ ಗ್ರಾಮ ಪಂಚಾಯತ್ ಪಿಡಿಒ ಸವಿತಾ ಹಿರೇಮಠ ಅವರನ್ನು ವರ್ಗಾಯಿಸುವಂತೆ ಸದಸ್ಯರು ಒತ್ತಾಯಿಸಿದ್ದಾರೆ.

ಈ ಸಂಬಂಧ ಜನವಾಡ ಗ್ರಾಮ ಪಂಚಾಯತ್ ಉಪಾಧ್ಯಕ್ಷ ತುಕರಾಮ ಜಗದಾಳೆ ಸೇರಿದಂತೆ 17 ಜನ ಸದಸ್ಯರು ಜಿಲ್ಲಾ ಪಂಚಾಯತ್‌ ಮುಖ್ಯ ನಿರ್ವಾಹಕ ಅಧಿಕಾರಿಗಳಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದರು.

“ಬೀದರ್‌ ತಾಲೂಕಿನ ಜನವಾಡಾ ಗ್ರಾಮ ಪಂಚಾಯತ್ ಪಿಡಿಓ ಸವಿತಾ ಹಿರೇಮಠ ಅವರು 9 ತಿಂಗಳಿಂದ ಗ್ರಾಪಂ ಸಾಮಾನ್ಯ ಸಭೆ ಮಾಡಲಾರದೇ ತೆರಿಗೆ ಹಣ ಮತ್ತು 15ನೇ ಹಣಕಾಸು ಯೋಜನೆಯ ಲಕ್ಷಾಂತರ ಹಣವನ್ನು ಕುಡಿಯುವ ನೀರು, ಸ್ವಚ್ಛತೆ ಕಾಮಗಾರಿ ಹೆಸರಿನಲ್ಲಿ ಕಬಳಿಸಿದ್ದಾರೆ. ಸದಸ್ಯರ ಗಮನಕ್ಕೆ ತರಲಾರದೇ ಡಿಜಿಟಲ್‌ ಖಾತಾ ನಮೂನೆ 11-A ಅಕ್ರಮವಾಗಿ ತೆಗೆದುಕೊಟ್ಟು ಸರ್ಕಾರದ ಬೊಕ್ಕಸಕ್ಕೆ ನಷ್ಟ ಉಂಟು ಮಾಡಿದ್ದಾರೆ” ಎಂದು ಆರೋಪಿಸಿದರು.

Advertisements

“15ನೇ ಹಣಕಾಸಿನ ಕ್ರಿಯಾ ಯೋಜನೆ ಸಿದ್ಧಪಡಿಸಲು ಉಪಾಧ್ಯಕ್ಷ ಹಾಗೂ ಸರ್ವ ಸದಸ್ಯರು ಹಲವು ಬಾರಿ ಮನವಿ ಮಾಡಿದರೂ ಕ್ಯಾರೇ ಎನ್ನದೆ ಮನಬಂದಂತೆ ಕಾರ್ಯನಿರ್ವಹಿಸುತ್ತಿದ್ದಾರೆ. ಮೂರು ಬಾರಿ ಗ್ರಾಪಂ ಸಭೆ ನಡೆಸಲು ನೋಟಿಸ್ ನೀಡಿದ್ದರೂ ಕುಂಟು ನೆಪ ಹೇಳಿ ರದ್ದುಪಡಿಸಿದ್ದಾರೆ. ಇದರಿಂದ ಗ್ರಾಮ ಪಂಚಾಯಿತಿ ಅಭಿವೃದ್ಧಿಗೆ ಹಿನ್ನಡೆಯಾಗುತ್ತಿದೆ” ಎಂದು ದೂರಿದರು.

“ಗ್ರಾಮ ಪಂಚಾಯಿತಿಯಲ್ಲಿ ಅವ್ಯವಹಾರ ನಡೆಸಿದ ಪಿಡಿಓ ಸವಿತಾ ಹಿರೇಮಠ ಅವರನ್ನು ಸೇವೆಯಿಂದ ವರ್ಗಾಯಿಸುವಂತೆ ಕಳೆದ ಮಾರ್ಚ್‌ 7ರಂದು ಜಿಲ್ಲಾ ಪಂಚಾಯತ್‌ ಸಿಇಒ ಅವರಿಗೆ ಮನವಿ ಪತ್ರವನ್ನು ಸಲ್ಲಿಸಲಾಗಿತ್ತು. ಆದರೆ ಯಾವುದೇ ಕ್ರಮ ಜರುಗಿಸಿಲ್ಲ. ಈಗಲಾದರೂ ಇದನ್ನು ಗಂಭೀರವಾಗಿ ಪರಿಗಣಿಸಿ ಸದರಿ ಪಿಡಿಒಗೆ ವರ್ಗಾಯಿಸಿ, ಅವರ ವಿರುದ್ಧ ಸೂಕ್ತ ತನಿಖೆ ನಡೆಸಿ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಮೇ 20ರಂದು ಗ್ರಾಮ ಪಂಚಾಯತ್ ಕಚೇರಿಗೆ ಮುತ್ತಿಗೆ ಹಾಕಿ ಧರಣಿ ಸತ್ಯಾಗ್ರಹ ನಡೆಸಲಾಗುವುದು” ಎಂದು ಎಚ್ಚರಿಸಿದರು.

ಈ ಸುದ್ದಿ ಓದಿದ್ದೀರಾ? ಫೀನಿಕ್ಸ್‌ನಂತೆ ಎದ್ದು ಬಂದ ಆರ್‌ಸಿಬಿ ಪ್ಲೇ-ಆಫ್‌ಗೆ: ಚೆನ್ನೈ ಸೂಪರ್ ಕಿಂಗ್ಸ್‌ ಮನೆಗೆ

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್‌ ಸದಸ್ಯರಾದ ಸುರೇಖಾ ಸಂತೋಷ, ಶಬಾನಾ ಬೇಗಂ ಸಿರಾಜೋದ್ದಿನ್‌, ಎಂಡಿ ಲತೀಫ್‌ ಖುರೇಷಿ, ಮುಕೇಶ ದೀಲಿಪಕುಮಾರ, ಸುಮನ ಗಣಪತಿ, ರೀನಾ ವಿಜಯಕುಮಾರ, ಚಮನ್ ಸಿಂಗ ಮಹಾವೀರ, ಪ್ರೀತಿ ದಾದಾರಾವ, ಲಕ್ಷ್ಮಣ ಶಂಕರ, ರಘುನಾಥ ಶಂಕರ, ಪ್ರಭಾವತಿ ಅಶೋಕ, ರಾಧಾಬಾಯಿ ಸಂಜುಕುಮಾರ, ಲಕ್ಷ್ಮೀಬಾಯಿ ಸುಭಾಷ, ರಮೇಶ ಗಣಪತಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X