ಉತ್ತರ ಪ್ರದೇಶ | ವ್ಯಕ್ತಿಯೋರ್ವನ ಬ್ಯಾಂಕ್ ಖಾತೆಗೆ 9,900 ಕೋಟಿ ರೂ. ಜಮೆ; ಬೆರಗಾದ ಖಾತೆದಾರ

Date:

Advertisements

ಉತ್ತರ ಪ್ರದೇಶದ ಭದೋಹಿ ಜಿಲ್ಲೆಯ ವ್ಯಕ್ತಿಯೊಬ್ಬರ ಬ್ಯಾಂಕ್ ಖಾತೆಗೆ ಬರೋಬ್ಬರಿ 9,900 ಕೋಟಿ ರೂಪಾಯಿ ಜಮೆಯಾಗಿರುವ ಘಟನೆ ನಡೆದಿದೆ. ಸಾಫ್ಟ್‌ವೇರ್ ದೋಷದಿಂದಾಗಿ ಈ ಘಟನೆ ಸಂಭವಿಸಿದೆ ಎಂದು ವರದಿಯಾಗಿದೆ.

ಭಾನು ಪ್ರಕಾಶ್ ಎಂಬವರು ಬರೋಡಾ ಯುಪಿ ಬ್ಯಾಂಕ್‌ನಲ್ಲಿರುವ ತನ್ನ ಬ್ಯಾಂಕ್ ಖಾತೆಯ ಮೊತ್ತವನ್ನು ಪರಿಶೀಲಿಸಿದ್ದು, ಅವರ ಖಾತೆಗೆ ಬರೋಬ್ಬರಿ 99,99,94,95,999.99 ರೂಪಾಯಿ (9,900 ಕೋಟಿ ರೂಪಾಯಿ) ಜಮೆಯಾಗಿದೆ. ಇಷ್ಟು ಮೊತ್ತ ತನ್ನ ಬ್ಯಾಂಕ್ ಖಾತೆಯಲ್ಲಿ ಇರುವುದನ್ನು ನೋಡಿ ಬೆರಗಾಗಿದ್ದಾರೆ. ಕೂಡಲೇ ಬ್ಯಾಂಕ್‌ಗೆ ಮಾಹಿತಿ ನೀಡಿದ್ದಾರೆ.

ಇದನ್ನು ಓದಿದ್ದೀರಾ?  ವಿಜಯಪುರ | ಅಂಗನವಾಡಿ ನೌಕರರ ಹೋರಾಟ; ಖಾತೆಗೆ ಜಮೆಯಾಯಿತು 2019ರ ಗೌರವ ಧನ

Advertisements

ಭಾನು ಪ್ರಕಾಶ್ ಅವರ ಖಾತೆಯು ಕಿಸಾನ್ ಕ್ರೆಡಿಟ್ ಕಾರ್ಡ್ (ಕೆಸಿಸಿ) ಸಾಲದ ಖಾತೆಯಾಗಿದ್ದು, ಬ್ಯಾಂಕ್ ಈ ಖಾತೆಯನ್ನು ಎನ್‌ಪಿಎ ಖಾತೆಯಾಗಿ ತಪ್ಪಾಗಿ ಮಾಡಿಕೊಂಡಿದೆ. ಸಾಫ್ಟ್‌ವೇರ್ ದೋಷದಿಂದಾಗಿ ಅವರ ಖಾತೆ ಹಣ ವರ್ಗಾವಣೆ ಆಗಿದೆ ಎಂದು ಬ್ಯಾಂಕ್ ಸ್ಪಷ್ಟಪಡಿಸಿದೆ.

“ಬ್ಯಾಂಕ್‌ನ ಸಾಫ್ಟ್‌ವೇರ್‌ನಲ್ಲಿನ ಗ್ಲಿಚ್‌ನಿಂದಾಗಿ ಇದು ನಡೆದಿದೆ. ಈ ಗ್ಲಿಚ್‌ನಿಂದಾಗಿ ಖಾತೆಯಲ್ಲಿ ಭಾರೀ ಪ್ರಮಾಣದ ಹಣ ಇದ್ದಂತೆ ಕಂಡಿದೆ” ಎಂದು ಬ್ಯಾಂಕಿನ ಶಾಖಾ ವ್ಯವಸ್ಥಾಪಕ ರೋಹಿತ್ ಗೌತಮ್ ಹೇಳಿದ್ದಾರೆ.

“ಖಾತೆಯನ್ನು ಎನ್‌ಪಿಎ ಸ್ಟೇಟಸ್‌ಗೆ ಲಿಂಕ್ ಮಾಡಿದ ಸಾಫ್ಟ್‌ವೇರ್ ದೋಷದಿಂದಾಗಿ ಬ್ಯಾಂಕ್ ಖಾತೆಯಲ್ಲಿ ಅಷ್ಟೊಂದು ಹಣ ಇದ್ದಂತೆ ಕಂಡು ಬಂದಿದೆ ಎಂದು ನಾವು ಭಾನು ಪ್ರಕಾಶ್ ಅವರಿಗೆ ತಿಳಿಸಿದ್ದೇವೆ. ಈ ತಪ್ಪನ್ನು ತಿದ್ದುಪಡಿ ಮಾಡಲು ಕ್ರಮವನ್ನು ಕೈಗೊಳ್ಳಲಾಗಿದೆ. ಹಣ ದುರುಪಯೋಗವಾಗದಂತೆ ನೋಡಿಕೊಳ್ಳಲು ಖಾತೆಯನ್ನು ಫ್ರೀಝ್ ಮಾಡಲಾಗಿದೆ” ಎಂದು ತಿಳಿಸಿದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

Download Eedina App Android / iOS

X