ಬೆಂಗಳೂರು | ಸೈಬರ್ ಕ್ರೈಂಗಾಗಿ ಭಾರತೀಯ ಸಿಮ್‌ ಖರೀದಿ; ವಿದೇಶಕ್ಕೆ ಸಿಮ್ ರವಾನೆ ಮಾಡುತ್ತಿದ್ದವನ ಬಂಧನ

Date:

Advertisements

ಸೈಬರ್ ಕ್ರೈಂಗಾಗಿ ಭಾರತೀಯ ಸಿಮ್‌ಗಳನ್ನು ಖರೀದಿ ಮಾಡಿ ಅಕ್ರಮವಾಗಿ ವಿದೇಶಕ್ಕೆ ರವಾನೆ ಮಾಡುತ್ತಿದ್ದ ಆರೋಪಿಯನ್ನು ಸದ್ಯ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಪೊಲೀಸರು ಬಂಧಿಸಿದ್ದಾರೆ.

ನಾರಾ ಶ್ರೀನಿವಾಸ್ ರಾವ್ ಬಂಧಿತ ಆರೋಪಿ. ಈತ ಮೂಲತಃ ಆಂಧ್ರಪ್ರದೇಶದ ವಿಶಾಖಪಟ್ಟಣದವನು. ಬಂಧಿತ ಆರೋಪಿ ಭಾರತದ ಸಿಮ್‌ಗಳನ್ನು ಖರೀದಿ ಮಾಡಿ ಪಾರ್ಸಲ್ ಮುಖಾಂತರ ಅಕ್ರಮವಾಗಿ ವಿದೇಶಕ್ಕೆ ತೆಗೆದುಕೊಂಡು ಹೋಗಲು ಪ್ರಯತ್ನ ಮಾಡುತ್ತಿದ್ದನು.

ಈ ವೇಳೆ, ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್‌ ಅಧಿಕಾರಿಗಳು ಪರಿಶೀಲನೆ ನಡೆಸಿದಾಗ ಸಿಮ್‌ಗಳು ಪತ್ತೆಯಾಗಿದ್ದು, ಸೈಬರ್‌ ಕ್ರೈಂ ಮಾಡುವ ಜಾಲದ ಬಗ್ಗೆ ಕಂಡು ಹಿಡಿದಿದ್ದಾರೆ.

Advertisements

ಒಂದು ಪಾರ್ಸಲ್​ನಲ್ಲಿ 24, ಮತ್ತೊಂದರಲ್ಲಿ 111 ಸಿಮ್​​ಗಳನ್ನು ಅಕ್ರಮವಾಗಿ ಸಾಗಣೆ ಮಾಡಲಾಗುತ್ತಿತ್ತು. ಚೆನ್ನೈನ ಸೈಯದ್​​​​​ ಎಂಬಾತನಿಗೆ ಸೇರಿದ ಕೊರಿಯರ್​​ ಕಂಪನಿ ಮೂಲಕ ಪಾರ್ಸಲ್ ಬುಕ್ ಆಗಿತ್ತು.

ಏನಿದು ಸಿಮ್‌ ಅಕ್ರಮ ಸಾಗಾಟ?

ಆರೋಪಿಗಳು ಭಾರತೀಯ ಸಿಮ್‌ಗಳನ್ನು ಖರೀದಿ ಮಾಡಿ ಅಕ್ರಮವಾಗಿ ತೈವಾನ್ ಮತ್ತು ಕಾಂಬೋಡಿಯಾ ಸೇರಿದಂತೆ ಇನ್ನಿತರ ದೇಶಗಳಿಗೆ ಸಾಗಾಟ ಮಾಡುತ್ತಾರೆ.

ವಿದೇಶದಲ್ಲಿ ಕುಳಿತು ಈ ಸಿಮ್‌ಗಳನ್ನು ಬಳಸಿ ಬ್ಯಾಂಕ್‌ ಖಾತೆ, ವಾಟ್ಸ್‌ಆಪ್ ಅಕೌಂಟ್ ಓಪನ್ ಮಾಡಿಕೊಳ್ಳುತ್ತಾರೆ. ಬಳಿಕ, ಭಾರತದಲ್ಲಿನ ಜನರಿಗೆ ಪಾರ್ಟ್ ಟೈಂ ಕೆಲಸ ಕೊಡಿಸುವುದಾಗಿ ಹೇಳಿ ಜನರಿಂದ ಹಣ ಲೂಟಿ ಮಾಡುತ್ತಾರೆ. ಇಲ್ಲದಿದ್ದರೇ, ಷೇರು ಮಾರ್ಕೆಟ್​ನಲ್ಲಿ ಹೂಡಿಕೆ ಮಾಡಿ ಅಂತ ಆಫರ್ ಕೊಟ್ಟು ವಂಚನೆ ಮಾಡುತ್ತಿದ್ದಾರೆ.

ಈ ದಂಧೆಯ ಮುಖ್ಯ ಕಿಂಗ್‌ಪಿನ್ ಹೈದರಾಬಾದ್​ ಮೂಲದ ವ್ಯಕ್ತಿ. ಈತ ವಿಯೆಟ್ನಾಂನಲ್ಲಿ ಕುಳಿತುಕೊಂಡು ಎಲ್ಲವನ್ನು ನೋಡಿಕೊಳ್ಳುತ್ತಿದ್ದನು. ಪೊಲೀಸರು ಎರಡು ಪ್ರತ್ಯೇಕ ಪ್ರಕರಣ ದಾಖಲಿಸಿಕೊಂಡಿದ್ದು, ಸದ್ಯ ಒಂದು ಪ್ರಕರಣದಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ರಾಜ್ಯದಲ್ಲಿ ಮಳೆ ಅಬ್ಬರ; ಹಲವೆಡೆ ಮಳೆ ಅವಾಂತರ

ಅಕ್ರಮ ಚಿನ್ನ ಸಾಗಾಟ; ನಾಲ್ವರು ವಶಕ್ಕೆ

ಬಟ್ಟೆಗಳಲ್ಲಿ ಅಡಗಿಸಿಟ್ಟುಕೊಂಡು ಅಕ್ರಮವಾಗಿ ಚಿನ್ನ ಸಾಗಿಸುತ್ತಿದ್ದ ಮಹಿಳೆ ಸೇರಿದಂತೆ ನಾಲ್ವರು ಆರೋಪಿಗಳನ್ನು ಕಸ್ಟಮ್ಸ್​ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಬರೋಬ್ಬರಿ ₹1.96 ಕೋಟಿ ಮೌಲ್ಯದ 2.814 ಕೆಜಿ ಚಿನ್ನವನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್​ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.

ದುಬೈನಿಂದ ಬೆಂಗಳೂರಿಗೆ ಬಂದಿಳಿದ ಪ್ರಯಾಣಿಕರು ಬ್ಯಾಗ್​​ನಲ್ಲಿನ ಜೀನ್ಸ್ ಪ್ಯಾಂಟ್, ಟೀ ಶರ್ಟ್​​​ಗಳಲ್ಲಿ ಪೌಡರ್​ ರೂಪದ ಚಿನ್ನವನ್ನು ಇಟ್ಟುಕೊಂಡು ಅಕ್ರಮವಾಗಿ ಸಾಗಿಸಲು ಯತ್ನಿಸಿದ್ದರು. ಆದರೆ, ಕಸ್ಟಮ್ಸ್ ಅಧಿಕಾರಿಗಳ ತಪಾಸಣೆ ನಡೆಸುತ್ತಿದ್ದ ವೇಳೆ ಸಿಕ್ಕಿಬಿದ್ದಿದ್ದಾರೆ.

ವಿಮಾನದಲ್ಲಿ ಕಾಣಿಸಿಕೊಂಡ ಹೊಗೆ; ತುರ್ತು ಭೂಸ್ಪರ್ಶ

ಕೊಚ್ಚಿಗೆ ತೆರಳುತ್ತಿದ್ದ ಏರ್ಇಂಡಿಯಾ ವಿಮಾನದಲ್ಲಿ ಹೊಗೆ ಕಾಣಿಸಿಕೊಂಡಿದ್ದರಿಂದ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶವಾಗಿದೆ. ​

AI 1132 ಏರ್ಇಂಡಿಯಾ ವಿಮಾನ ರಾತ್ರಿ 11.20ಕ್ಕೆ ಬೆಂಗಳೂರಿನಿಂದ ಕೇರಳದ ಕೊಚ್ಚಿಗೆ ತೆರಳಲು ಟೇಕ್​​ ಆಫ್ ಆಗಿತ್ತು. ಆದರೆ, ವಿಮಾನದಲ್ಲಿ ಏಕಾಏಕಿ ಹೊಗೆ ಕಾಣಿಸಿಕೊಂಡಿದೆ.

ಕೂಡಲೇ, ಎಚ್ಚೆತ್ತ ಪೈಲಟ್​​ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿಯೇ ಎಮರ್ಜೆನ್ಸಿ ಲ್ಯಾಂಡ್ಮಾಡಿದರು. ಇದರಿಂದ ಭಾರೀ ಅನಾಹುತ ತಪ್ಪಿದೆ. ವಿಮಾನ ಭೂ ಸ್ಪರ್ಶವಾಗುತ್ತಿದ್ದಂತೆ ಅಗ್ನಿಶಾಮಕ ಸಿಬ್ಬಂದಿ ಕೂಡಲೇ ಬೆಂಕಿಯನ್ನು ನಂದಿಸಿದ್ದಾರೆ. ವಿಮಾನದಲ್ಲಿದ್ದ ಸಿಬ್ಬಂದಿ ಸೇರಿ 170 ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ. ಯಾವುದೆ ಪ್ರಾಣಾಪಾಯ ಸಂಭವಿಸಿಲ್ಲ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ | ಬಿಜೆಪಿ ಮತಗಳ್ಳತನ ವಿರುದ್ಧ ವ್ಯಾಪಕ ಹೋರಾಟ: ಮಾಜಿ ಸಚಿವ ವಿನಿಯಕುಮಾರ್

ಬಿಜೆಪಿ ಮತಗಳ್ಳತನ ನಡೆಸಿ ಚುನಾವಣೆ ಅಕ್ರಮ ಎಸಗಿರುವ ಬಗ್ಗೆ ವ್ಯಾಪಕವಾಗಿ ಹೋರಾಟ...

ಶಿವಮೊಗ್ಗ | KSRTC ನಗರ ಸಾರಿಗೆ ಬಸ್ ಮಲವಗೊಪ್ಪದ, ಚೆನ್ನಬಸವೇಶ್ವರ ದೇವಸ್ಥಾನ ಬಳಿ ಕಡ್ಡಾಯ ನಿಲುಗಡೆಗೆ ಆದೇಶ

ಶಿವಮೊಗ್ಗ, ಸಾರ್ವಜಕನಿಕ ಪ್ರಯಾಣಿಕರು/ಶಾಲಾ-ಕಾಲೇಜು ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಶಿವಮೊಗ್ಗ-ಭದ್ರಾವತಿ ಮಾರ್ಗದಲ್ಲಿ ಕಾರ್ಯಾಚರಣೆಯಾಗುವ ನಗರ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ಮೈಸೂರು | ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದ ಅತ್ತಿಗೋಡು ಸರ್ಕಾರಿ ಪ್ರೌಢಶಾಲೆ

ಕರ್ನಾಟಕದಲ್ಲಿ ಸರ್ಕಾರಿ ಶಾಲೆಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಸಾಕಷ್ಟು ಸವಾಲುಗಳನ್ನು ಸಹ ಎದುರಿಸುತ್ತಿದೆ....

Download Eedina App Android / iOS

X