ಸಿಸೋಡಿಯಾ ಇಲ್ಲಿ ಇದ್ದಿದ್ದರೆ ನನಗೆ ಈ ರೀತಿ ಆಗುತ್ತಿರಲಿಲ್ಲ: ಸ್ವಾತಿ ಮಲಿವಾಲ್

Date:

Advertisements

ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರು ಈಗ ಜೈಲಿನಿಂದ ಹೊರಗೆ ಇದ್ದಿದ್ದರೆ ನಾನು ಇಂತಹ ವಿವಾದದಲ್ಲಿ ಸಿಲುಕಬೇಕಾಗಿರಲಿಲ್ಲ ಎಂದು ಎಎಪಿ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಭಾನುವಾರ ಹೇಳಿದ್ದಾರೆ.

ಈ ಬಗ್ಗೆ ಎಕ್ಸ್‌ನಲ್ಲಿ ಸ್ವಾತಿ ಮಲಿವಾಲ್ ಪೋಸ್ಟ್ ಮಾಡಿದ್ದಾರೆ. “ನಿರ್ಭಯಾಗೆ ನ್ಯಾಯ ಕೊಡಿಸಲು ನಾವೆಲ್ಲ ಬೀದಿಗಿಳಿಯುತ್ತಿದ್ದ ಕಾಲವಿತ್ತು, ಇಂದು 12 ವರ್ಷಗಳ ನಂತರ ಸಿಸಿಟಿವಿ ದೃಶ್ಯಾವಳಿಗಳನ್ನು ಕಣ್ಮರೆಯಾಗಿಸಿ ಫೋನ್ ಫಾರ್ಮಾಟ್ ಮಾಡಿದ ಆರೋಪಿಯನ್ನು ರಕ್ಷಿಸಲು ನಾವೆಲ್ಲರೂ ಬೀದಿಗಿಳಿದಿದ್ದೇವೆಯೇ” ಎಂದು ಸ್ವಾತಿ ಮಲಿವಾಲ್ ಪ್ರಶ್ನಿಸಿದ್ದಾರೆ.

“ಅವರು (ಎಎಪಿ) ಮನೀಶ್ ಸಿಸೋಡಿಯಾ ಅವರಿಗಾಗಿ ಇಷ್ಟು ಬಲ ಪ್ರಯೋಗ ಮಾಡುತ್ತಿದ್ದರು ಎಂದು ನಾನು ಬಯಸುತ್ತೇನೆ. ಸಿಸೋಡಿಯಾ ಇಲ್ಲಿ ಇದ್ದಿದ್ದರೆ ಬಹುಶಃ ವಿಷಯ ಇಷ್ಟು ಕೆಟ್ಟದಾಗುತ್ತಿರಲಿಲ್ಲ” ಎಂದು ಎಕ್ಸ್‌ ಪೋಸ್ಟ್‌ನಲ್ಲಿ ಸ್ವಾತಿ ಬರೆದುಕೊಂಡಿದ್ದಾರೆ.

Advertisements

ಇದನ್ನು ಓದಿದ್ದೀರಾ?  ದೆಹಲಿ ಅಬಕಾರಿ ನೀತಿ ಪ್ರಕರಣ | ಸಿಸೋಡಿಯಾ ಜಾಮೀನು ಅರ್ಜಿ; ಸಿಬಿಐ, ಇಡಿಗೆ ಹೈಕೋರ್ಟ್ ನೋಟಿಸ್

ಮೇ 13 ರಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಆಪ್ತ ಸಹಾಯಕ ಬಿಭವ್ ಕುಮಾರ್ ಅವರು ತನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಸ್ವಾತಿ ಮಲಿವಾಲ್ ಆರೋಪಿಸಿದ್ದಾರೆ. ಸದ್ಯ ಈ ಪ್ರಕಣದಲ್ಲಿ ಬಂಧನಕ್ಕೆ ಒಳಗಾಗಿರುವ ಬಿಭವ್ ಐದು ದಿನಗಳ ಪೊಲೀಸ್ ಕಸ್ಟರಿಯಲ್ಲಿದ್ದಾರೆ.

ಶನಿವಾರ ತಡರಾತ್ರಿ ನಡೆದ ವಿಚಾರಣೆ ವೇಳೆ ದೆಹಲಿ ಪೊಲೀಸರು ತೀಸ್ ಹಜಾರಿ ನ್ಯಾಯಾಲಯಕ್ಕೆ ಸಿಎಂ ಗೃಹ ಸಿಬ್ಬಂದಿ ಒದಗಿಸಿದ್ದ ಸಿಸಿಟಿವಿ ದೃಶ್ಯಾವಳಿಗಳು ಬ್ಲ್ಯಾಕ್ ಆಗಿರುವುದು ಕಂಡು ಬಂದಿದೆ ಎಂದು ತಿಳಿಸಿದ್ದಾರೆ.

ಕುಮಾರ್ ತಮ್ಮ ಮೊಬೈಲ್ ಫೋನ್ ನೀಡಿದ್ದರೂ ಪಾಸ್‌ವರ್ಡ್ ನೀಡಿಲ್ಲ. ಇದಲ್ಲದೆ, ಅವರು ಈಗಾಗಲೇ ಒಂದು ದಿನದ ಹಿಂದೆ ತನ್ನ ಫೋನ್ ಅನ್ನು ಫಾರ್ಮ್ಯಾಟ್ ಮಾಡಿದ್ದಾರೆ ಎಂದು ಪೊಲೀಸರು ಆರೋಪಿಸಿದ್ದಾರೆ.

ಅಬಕಾರಿ ಹಗರಣಕ್ಕೆ ಸಂಬಂಧಿಸಿದಂತೆ ಸಿಸೋಡಿಯಾ ಅವರನ್ನು 2023 ಫೆಬ್ರವರಿ 26 ರಂದು ಸಿಬಿಐ ಬಂಧಿಸಿತ್ತು. ಅಂದಿನಿಂದ ಬಂಧನದಲ್ಲಿಯೇ ಇದ್ದಾರೆ.

 

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

  1. Manish Sisodia is in judicial custody on account of the excise case. It’s wishful thinking on her part to think that he would have helped her. Currently only Vandana Singh from her party is directly supporting her.

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

Download Eedina App Android / iOS

X