ನೀತಿ ಸಂಹಿತೆ ಉಲ್ಲಂಘನೆ: ಜಮ್ಮು ಮತ್ತು ಕಾಶ್ಮೀರದ 40 ಸರ್ಕಾರಿ ನೌಕರರ ವಿರುದ್ಧ ಕ್ರಮ

Date:

Advertisements

ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಮಾದರಿ ನೀತಿ ಸಂಹಿತೆ ಉಲ್ಲಂಘಿಸಿದ್ದಕ್ಕಾಗಿ 40 ಸರ್ಕಾರಿ ನೌಕರರ ವಿರುದ್ಧ ಕ್ರಮ ಕೈಗೊಂಡಿರುವುದಾಗಿ ಜಮ್ಮು ಮತ್ತು ಕಾಶ್ಮೀರ ಚುನಾವಣಾ ಇಲಾಖೆ ತಿಳಿಸಿದೆ.

ನಾಲ್ಕು ಉದ್ಯೋಗಿಗಳನ್ನು ಅಮಾನತುಗೊಳಿಸಲಾಗಿದ್ದು ಒಬ್ಬರನ್ನು ಉದ್ಯೋಗದಿಂದಲೇ ತೆಗೆದುಹಾಕಲಾಗಿದೆ. ಇನ್ನೊಬ್ಬರ ವಿರುದ್ಧ ಶಿಸ್ತು ಕ್ರಮವನ್ನು ಪ್ರಾರಂಭಿಸಲಾಗಿದೆ. ಉಳಿದಂತೆ 34 ಮಂದಿಯ ವಿರುದ್ಧ ವಿಚಾರಣೆಯನ್ನು ಪ್ರಾರಂಭಿಸಲಾಗಿದೆ.

ಇದನ್ನು ಓದಿದ್ದೀರಾ?  ಲೋಕಸಭೆ ಚುನಾವಣೆ | 370ನೇ ವಿಧಿ ರದ್ಧತಿ ಮೋದಿಯವರ ಸಾಧನೆಯಾಗಿದ್ದರೆ, ಕಾಶ್ಮೀರದಲ್ಲಿ ಬಿಜೆಪಿ ಯಾಕೆ ಕಣದಲ್ಲಿಲ್ಲ?

Advertisements

ಶ್ರೀನಗರ ಜಿಲ್ಲೆಯಿಂದ ಅತಿ ಹೆಚ್ಚು ನೀತಿ ಸಂಹಿತೆ ಉಲ್ಲಂಘನೆ ನಡೆದಿದೆ. ಕುಲ್ಗಾಮ್ ಮತ್ತು ರಾಜೌರಿ ಎರಡನೇ ಅತಿ ಹೆಚ್ಚು ನೀತಿ ಸಂಹಿತೆ ಉಲ್ಲಂಘನೆ ನಡೆದಿರುವ ಸ್ಥಳವಾಗಿದೆ. ಮೂರನೇ ಸ್ಥಾನದಲ್ಲಿ ಉಧಮ್‌ಪುರ ಮತ್ತು ಗಂದರ್‌ಬಾಲ್ ಜಿಲ್ಲೆಗಳಿದೆ. ಇನ್ನು ಕಿಶ್ತ್ವಾರ್, ಬಂಡಿಪೋರಾ, ರಿಯಾಸಿ ಮತ್ತು ಸಾಂಬಾ ಜಿಲ್ಲೆಗಳಲ್ಲಿ ಅತಿ ಕಡಿಮೆ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳು ದಾಖಲಾಗಿದೆ.

ಕುಪ್ವಾರದಲ್ಲಿ ಇಬ್ಬರು, ಗಂದರ್‌ಬಲ್‌ನಲ್ಲಿ ಒಬ್ಬರು ಮತ್ತು ದೋಡಾ ಜಿಲ್ಲೆಯಲ್ಲಿ ಒಬ್ಬರನ್ನು ವಿಚಾರಣೆ ನಡೆಯುವವರೆಗೂ ಅಮಾನತುಗೊಳಿಸಲಾಗಿದೆ. ರಾಜಕೀಯ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವ ಕಾರಣ ಒಬ್ಬ ಉದ್ಯೋಗಿಯ ವಿರುದ್ಧ ಶಿಸ್ತು ಕ್ರಮಕ್ಕೆ ಶಿಫಾರಸು ಮಾಡಲಾಗಿದೆ.

ಇದನ್ನು ಓದಿದ್ದೀರಾ?  ಜಮ್ಮು ಕಾಶ್ಮೀರ| ಭಯೋತ್ಪಾದಕ ದಾಳಿ; ಬಿಜೆಪಿಯ ಮಾಜಿ ಸರಪಂಚ ಹತ್ಯೆ, ಪ್ರವಾಸಿಗರಿಗೆ ಗಾಯ

ಹೆಚ್ಚುವರಿಯಾಗಿ, ರಾಜಕೀಯ ಚಟುವಟಿಕೆಗಳಲ್ಲಿ ತೊಡಗಿದ್ದಕ್ಕಾಗಿ ಒಬ್ಬ ಚೌಕಿದಾರನನ್ನು ಸೇವೆಯಿಂದ ವಜಾಗೊಳಿಸಲಾಗಿದೆ. ದೂರುಗಳ ಆಧಾರದಲ್ಲಿ ಈ ಎಲ್ಲ ನೌಕರರ ವಿರುದ್ಧ ಕ್ರಮವನ್ನು ಪ್ರಾರಂಭಿಸಲಾಗಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

Download Eedina App Android / iOS

X