ಮತ ಹಾಕದವರಿಗೆ ತೆರಿಗೆ ಹೆಚ್ಚಿಸಿ ಶಿಕ್ಷೆ ನೀಡಿ: ನಟ ಪರೇಶ್ ರಾವಲ್ ಸಲಹೆ

Date:

Advertisements

ದೇಶದಲ್ಲಿ ಲೋಕಸಭೆ ಚುನಾವಣೆಯ ಐದನೇ ಹಂತದ ಮತದಾನ ನಡೆಯುತ್ತಿದ್ದು, ಬಾಲಿವುಡ್ ಹಿರಿಯ ನಟ ಪರೇಶ್ ರಾವಲ್ ಸೋಮವಾರ ಬೆಳಗ್ಗೆ ಮುಂಬೈನ ಮತಗಟ್ಟೆಯಲ್ಲಿ ಮತ ಚಲಾಯಿಸಿದ್ದಾರೆ.

ಮತದಾನ ಮಾಡಿದ ನಂತರ, ರಾವಲ್ ಅವರು ಮಾಧ್ಯಮಗಳೊಂದಿಗೆ ಮಾತನಾಡಿದ್ದು ಚುನಾವಣೆಯಲ್ಲಿ ಭಾಗವಹಿಸುವ ಮಹತ್ವವನ್ನು ಒತ್ತಿ ಹೇಳಿದರು.

“ನೀವು ಸರ್ಕಾರ ಅದನ್ನು ಮಾಡಿಲ್ಲ, ಇದನ್ನು ಮಾಡಿಲ್ಲ ಎಂದು ಹೇಳುತ್ತೀರಿ. ನೀವು ಇಂದು ಮತದಾನ ಮಾಡದಿದ್ದರೆ, ಅದಕ್ಕೆ ನೀವು ಜವಾಬ್ದಾರರಾಗಿರುತ್ತೀರಿ, ಸರ್ಕಾರವಲ್ಲ” ಎಂದು ನಟ ಪರೇಶ್ ರಾವಲ್ ತಿಳಿಸಿದರು.

Advertisements

ಇದನ್ನು ಓದಿದ್ದೀರಾ?  ನೀವು ಮನುಷ್ಯನಾಗಿರಲೇ ಅಯೋಗ್ಯ: ಪ್ರಧಾನಿ ಮೋದಿ ವಿರುದ್ಧ ನಟ ಕಿಶೋರ್ ಕುಮಾರ್ ಗರಂ

ಹಾಗೆಯೇ ನಾಗರಿಕರು ತಮ್ಮ ಕರ್ತವ್ಯಗಳು ಪಾಲಿಸುವ ಜವಾಬ್ದಾರಿಯನ್ನು ಹೊರುವಂತೆ ಮನವಿ ಮಾಡಿದ ಅವರು, ಇದೇ ಸಂದರ್ಭದಲ್ಲಿ ಮತ ಚಲಾವಣೆ ಮಾಡದವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಮತದಾನಕ್ಕೆ ಗೈರು ಹಾಜರಾಗುವವರಿಗೆ ದಂಡ ವಿಧಿಸುವಂತೆಯೂ ಸೂಚಿಸಿದರು. “ಮತ ಚಲಾಯಿಸದವರಿಗೆ ತೆರಿಗೆ ಹೆಚ್ಚಳ ಅಥವಾ ಇತರ ಶಿಕ್ಷೆಯಂತಹ ಕೆಲವು ನಿಬಂಧನೆಗಳು ಇರಬೇಕು” ಎಂದು ಅಭಿಪ್ರಾಯಿಸಿದರು.

ಮುಂಬೈನ ಆರು ಲೋಕಸಭಾ ಸ್ಥಾನಗಳಿಗೆ 5ನೇ ಹಂತಕ್ಕೆ ಚುನಾವಣೆ ನಡೆಯುತ್ತಿದೆ. ಇಂದು ಮುಂಬೈ ಉತ್ತರ, ಮುಂಬೈ ವಾಯುವ್ಯ, ಮುಂಬೈ ಈಶಾನ್ಯ, ಮುಂಬೈ ಉತ್ತರ ಮಧ್ಯ, ಮುಂಬೈ ದಕ್ಷಿಣ ಮತ್ತು ಮುಂಬೈ ದಕ್ಷಿಣ ಸೆಂಟ್ರಲ್‌ನಲ್ಲಿ ಮತದಾನ ನಡೆಯುತ್ತಿದೆ.

ಇದನ್ನು ಓದಿದ್ದೀರಾ?  ಆಂಧ್ರಪ್ರದೇಶ | ನೀತಿ ಸಂಹಿತೆ ಉಲ್ಲಂಘನೆ, ನಟ ಅಲ್ಲು ಅರ್ಜುನ್‌ ವಿರುದ್ಧ ಪ್ರಕರಣ ದಾಖಲು

ಅಕ್ಷಯ್ ಕುಮಾರ್, ಶಾಹಿದ್ ಕಪೂರ್, ಸನ್ಯಾ ಮಲ್ಹೋತ್ರಾ, ರಾಜ್‌ಕುಮಾರ್ ರಾವ್, ಕರೀನಾ ಕಪೂರ್, ಸೈಫ್ ಅಲಿ ಖಾನ್, ವರುಣ್ ಧವನ್, ಅಮಿರ್ ಖಾನ್, ಕಿರಣ್ ರಾವ್, ಮತ್ತು ಜಾನ್ವಿ ಕಪೂರ್ ಸೇರಿದಂತೆ ಹಲವಾರು ಬಾಲಿವುಡ್ ಸೆಲೆಬ್ರಿಟಿಗಳು ಮುಂಬೈನ ತಮ್ಮ ತಮ್ಮ ಮತಗಟ್ಟೆಗಳಲ್ಲಿ ಮತ ಚಲಾಯಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

Download Eedina App Android / iOS

X