ಕೊಪ್ಪಳ | 25, 26ರಂದು 10ನೇ ಮೇ ಸಾಹಿತ್ಯ ಸಮ್ಮೇಳನ: ಬಸವರಾಜ್ ಸೂಳಿಬಾವಿ

Date:

Advertisements

ಮೇ 25, 26ರಂದು ಕೊಪ್ಪಳ ನಗರದ ಹೊಸಪೇಟೆ ರಸ್ತೆಯ ಶಿವಶಾಂತವೀರ ಮಂಗಲ ಭವನದಲ್ಲಿ 10ನೇ ಮೇ ಸಾಹಿತ್ಯ ಸಮ್ಮೇಳನ ಹಮ್ಮಿಕೊಳ್ಳಲಾಗಿದೆ ಎಂದು ಪ್ರಗತಿಪರ ಚಿಂತಕ ಹಾಗೂ ಲಡಾಯಿ ಪ್ರಕಾಶನದ ಬಸವರಾಜ್ ಸೂಳಿಬಾವಿ ಹೇಳಿದರು.

ನಗರದ ಪತ್ರಿಕಾ ಭವನದಲ್ಲಿ ಸೋಮವಾರದಂದು ಸುದ್ದಿಗೋಷ್ಟಿ ಉದ್ದೇಶಿಸಿ ಮಾತನಾಡಿ, “ಮೇ ಸಾಹಿತ್ಯ ಮೇಳ ಬಳಗದ 10ನೇ ಸಾಹಿತ್ಯ ಸಮ್ಮೇಳನವು ಈ ಬಾರಿ ಹೈದರಾಬಾದ್ ಕರ್ನಾಟಕದ ವಿಶಿಷ್ಟ ಪರಂಪರೆಗಳ ನೆಲೆವೀಡಾದ ಕೊಪ್ಪಳದಲ್ಲಿ ನಡೆಯಲಿದ್ದು, ಎರಡು ದಿನಗಳ ಕಾಲ ಕಾರ್ಯಕ್ರಮದಲ್ಲಿ ಸಂವಿಧಾನ ಭಾರತ, ಧರ್ಮ ರಾಜಕಾರಣ ಎಂಬ ಮಹತ್ವದ ವಿಷಯದ ಸೂಕ್ತ ಚರ್ಚೆ, ಸಂವಾದ ನಡೆಯಲಿದೆ” ಎಂದು ಹೇಳಿದರು.

“ನಾಡಿನ ಹಲವು ಭಾಗಗಳಿಂದ ಬರುವ ಸಾಹಿತ್ಯಾಸಕ್ತರು, ಸಂವಿಧಾನ ಪ್ರೇಮಿಗಳು, ಸಮಾಜ ಸೌಹಾರ್ಧಕ್ಕೆ ದುಡಿಯುತ್ತಿರುವ ಚೇತನಗಳು, ಜನಪರ ಹೋರಾಟಗಳಲ್ಲಿ ತೊಡಗಿರುವ ಸಂಗಾತಿಗಳು, ಯುವಜನರು ಪಾಲ್ಗೊಳ್ಳಲಿದ್ದಾರೆ. ರಾಜ್ಯ ಮತ್ತು ಹೊರರಾಜ್ಯಗಳ ಸಂಪನ್ಮೂಲ ವ್ಯಕ್ತಿಗಳು ಪಾಲ್ಗೊಳ್ಳುವರು. ಎರಡು ದಿನಗಳ ಮೇಳವನ್ನು ಅರ್ಥಪೂರ್ಣವಾಗಿ ನಡೆಸಲು ನಿಮ್ಮೆಲ್ಲರ ಭಾಗವಹಿಸಿಕೆ ಅತ್ಯಗತ್ಯವಾಗಿದೆ” ಎಂದರು.

Advertisements

ಈ ಸುದ್ದಿ ಓದಿದ್ದೀರಾ? ವಿಜಯಪುರ | ಡೊನೇಷನ್‌ ಹಾವಳಿ ತಡೆಗೆ ದಲಿತ ವಿದ್ಯಾರ್ಥಿ ಪರಿಷತ್‌ ಆಗ್ರಹ

ಬಂಡಾಯ ಸಾಹಿತಿ ಅಲ್ಲಮಪ್ರಭು ಬೆಟ್ಟದೂರು ಮಾತನಾಡಿ, “ಮೇ ಸಾಹಿತ್ಯ ಮೇಳದಲ್ಲಿ 25ರಂದು ಬೆಳಿಗ್ಗೆ 10ಕ್ಕೆ ಬಿ ಆರ್ ತುಬಾಕಿ ಮತ್ತು ದೇವಿಂದ್ರಪ್ಪ ಡೊಳ್ಳಿನ ಪುಸ್ತಕ ಮಳಿಗೆ ಉದ್ಘಾಟನೆಯನ್ನು ಬಳ್ಳಾರಿಯ ಸಿ ಚನ್ನಬಸವಣ್ಣ ನೆರವೇರಿಸುವರು, ಮುಖ್ಯ ಅತಿಥಿಗಳಾಗಿ ಹಿರಿಯ ಸಾಹಿತಿಗಳಾದ ಈರಪ್ಪ ಕಂಬಳಿ ರವಿತೇಜ ಅಬ್ಬಿಗೇರಿ ಪಾಲ್ಗೊಳ್ಳುವರು, ನಂತರ ವಿವಿಧ ಗೋಷ್ಠಿಗಳು ಜರುಗುವವು. 26 ರಂದು ಚಳವಳಿ ಮತ್ತು ಧರ್ಮ ರಾಜಕಾರಣ, ವಿವಿಧ ಗೋಷ್ಠಿಗಳ ನಂತರ ಸಮಾರೋಪ, ಪ್ರಶಸ್ತಿ ಪ್ರದಾನ ಜರುಗುತ್ತದೆ” ಎಂದರು.

ಸುದ್ದಿಗೋಷ್ಟಿಯಲ್ಲಿ ಟಿ ರತ್ನಾಕರ್, ಬಸವರಾಜ್ ಶೀಲವಂತರ್, ಡಿ ಎಂ ಬಡಿಗೇರ್, ಶರಣು ಶೆಟ್ಟರ್ ಇದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

Download Eedina App Android / iOS

X