ಪಾಳೇಗಾರಿಕೆ ಪೋಷಣೆಯ ಕಾಂಗ್ರೆಸ್ ಸರ್ಕಾರದಲ್ಲಿ ರೈತರ ಶೋಷಣೆ ಮಿತಿಮೀರಿದೆ: ವಿಜಯೇಂದ್ರ ಕಿಡಿ

Date:

Advertisements

ಪಾಳೇಗಾರಿಕೆ ರಾಜಕಾರಣದ ಪೋಷಣೆಗೆ ಹೆಸರಾದ ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ರೈತ ಶೋಷಣೆ ಮಿತಿಮೀರುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಕಿಡಿಕಾರಿದ್ದಾರೆ.

ಈ ಕುರಿತು ಎಕ್ಸ್‌ ತಾಣದಲ್ಲಿ ಪೋಸ್ಟ್‌ ಮಾಡಿರುವ ಅವರು, “ಸಚಿವ ಸತೀಶ್‌ ಜಾರಕಿಹೊಳಿ ಅವರು ಪ್ರತಿನಿಧಿಸುವ ಯಮಕನಮರಡಿ ಕ್ಷೇತ್ರ ವ್ಯಾಪ್ತಿಯ ಇಸ್ಲಾಂಪುರ ಗ್ರಾಮದ ರೈತ ತನ್ನ ಕೃಷಿ ಚಟುವಟಿಕೆಯ ಸಲುವಾಗಿ ಮಾಡಿಕೊಂಡಿದ್ದ ಖಾಸಗಿ ಸಾಲ ತೀರಿಸಲಾಗದೇ ಸಾಲಕೊಟ್ಟವರಿಂದ ಪತ್ನಿ, ಪುತ್ರನನ್ನು ನಿಷೇಧಿತ ಜೀತ ಪದ್ಧತಿ ಹಾಗೂ ಅಕ್ರಮ ಗೃಹ ಬಂಧನದ ಶಿಕ್ಷೆ ಅನುಭವಿಸುವ, ಅಪಮಾನ ಹಾಗೂ ಅಸಹಾಯಕ ಪರಿಸ್ಥಿತಿಯಿಂದ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಾಗರಿಕ ಸಮಾಜ ತಲೆತಗ್ಗಿಸುವಂತಾಗಿದೆ” ಎಂದಿದ್ದಾರೆ.

“ಕಾಂಗ್ರೆಸ್‌ ಸರ್ಕಾರದ ಆಡಳಿತ ಕಾಲದಲ್ಲಿ ಈ ರಾಜ್ಯದ ಜನತೆ ಇನ್ನೂ ಏನೇನು ಅನುಭವಿಸಬೇಕೋ? ತಿಳಿಯದಾಗಿದೆ. ಗೂಂಡಾಗಳು, ಮೀಟರ್ ಬಡ್ಡಿ ದಂಧೆಕೋರರು, ಕೊಲೆಗಡುಕರಿಗೆ ಈ ಸರ್ಕಾರದ ಆಡಳಿತ ವ್ಯವಸ್ಥೆ ‘ನೆರಳಿನ ಭಾಗ್ಯ’ ಕಲ್ಪಿಸಿಕೊಡುತ್ತಿದೆ” ಎಂದು ಟೀಕಿಸಿದ್ದಾರೆ.

Advertisements

“ಈ ಸರ್ಕಾರಕ್ಕೆ ನೈತಿಕತೆಯಿದ್ದರೆ ಕೂಡಲೇ ಯಮಕನಮರಡಿ ರೈತನ ಆತ್ಮಹತ್ಯೆ ಪ್ರಕರಣದ ಕುರಿತು ಕಠಿಣ ಕ್ರಮ ಜರುಗಿಸಿ ಮುಂದೆಂದೂ ಇಂತಹ ಹೀನ ಘಟನೆಗಳು ರಾಜ್ಯದಲ್ಲಿ ತಲೆ ಎತ್ತದಂತೆ ಎಚ್ಚರಿಕೆ ವಹಿಸಲಿ, ರೈತ ಸಮೂಹಕ್ಕೆ ಆತ್ಮಸ್ಥೈರ್ಯ ತುಂಬುವ ಕಾರ್ಯಕ್ರಮ ರೂಪಿಸಲಿ, ಮೃತ ರೈತನ ಕುಟುಂಬಕ್ಕೆ ಸೂಕ್ತ ಆರ್ಥಿಕ ನೆರವು ಹಾಗೂ ಭದ್ರತೆ ಒದಗಿಸಲಿ” ಎಂದು ವಿಜಯೇಂದ್ರ ಆಗ್ರಹಿಸಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳ ಪ್ರಕರಣಗಳ ಸಮಗ್ರ ತನಿಖೆಗೆ ಎಡಪಕ್ಷಗಳ ಒತ್ತಾಯ

ಧರ್ಮಸ್ಥಳದಲ್ಲಿ ನಡೆದಿರುವ ವೇದವಲ್ಲಿ, ಪದ್ಮಲತಾ, ನಾರಾಯಣ, ಯಮುನಾ ಮತ್ತು ಸೌಜನ್ಯ, ಮುಂತಾದ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

Download Eedina App Android / iOS

X