ಫೋನ್ ಟ್ಯಾಪಿಂಗ್ ಯಂತ್ರಗಳು ಕರ್ನಾಟಕಕ್ಕೆ ಎಷ್ಟು ಬಂದಿವೆ ಎಂಬುದು ತನಿಖೆಯಾಗಲಿ: ಆರ್.ಅಶೋಕ್

Date:

Advertisements

40-50 ಲಕ್ಷ ಕೊಟ್ಟರೆ ಚೀನಾದಿಂದ ಫೋನ್ ಟ್ಯಾಪಿಂಗ್ ಯಂತ್ರ ಅಕ್ರಮವಾಗಿ ಸಿಗುತ್ತದೆ. ಫೋನ್ ಟ್ಯಾಪಿಂಗ್ ಎಂಬುದೇ ಅಕ್ರಮ. ಚೀನಾದಿಂದ ಖರೀದಿಸಿದ ಫೋನ್ ಟ್ಯಾಪಿಂಗ್ ಯಂತ್ರಗಳು ಕರ್ನಾಟಕಕ್ಕೆ ಎಷ್ಟು ಬಂದಿವೆ? ಯಾರ ಮನೆಯಲ್ಲಿ ಇವೆ? ಎಂಬುದನ್ನು ಪತ್ತೆ ಮಾಡಬೇಕು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌ ಅಶೋಕ್‌ ಹೇಳಿದರು.

ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು, “ವಿರೋಧ ಪಕ್ಷದವರ ಫೋನ್ ಟ್ಯಾಪಿಂಗ್ ಮಾಡುತ್ತಾರೆ ಎಂದು ಪೊಲೀಸ್ ಅಧಿಕಾರಿಗಳು ನನಗೂ ಹೇಳಿದ್ದಾರೆ. ಸರಕಾರ ಫೋನ್ ಟ್ಯಾಪಿಂಗ್ ಮಾಡುತ್ತಿಲ್ಲ ಎಂದಾದರೆ ಇಂಥ ಯಂತ್ರಗಳು ಎಲ್ಲೆಲ್ಲಿ ಇವೆ ಎಂದು ತನಿಖೆ ಮಾಡಲಿ” ಎಂದು ಆಗ್ರಹಿಸಿದರು.

“ಕುಮಾರಸ್ವಾಮಿಯವರು ಅವರಿಗೆ ಇರುವ ಮಾಹಿತಿಯಲ್ಲಿ ಇದನ್ನು ಹೇಳಿದ್ದಾರೆ. ಯಾರೇ ಆಗಲಿ; ಈ ತರ ಫೋನ್ ಟ್ಯಾಪಿಂಗ್ ಮಾಡುವುದು ಅಪರಾಧ. ಅಂಥವರನ್ನೆಲ್ಲ ಜೈಲಿಗೆ ಕಳುಹಿಸಬೇಕು. ಫೋನ್ ಟ್ಯಾಪಿಂಗ್ ಅಕ್ರಮಕ್ಕೆ ಕಡಿವಾಣ ಹಾಕಬೇಕು” ಎಂದರು.

Advertisements

“ಈ ವಿಷಯವನ್ನು ಸರಕಾರವು ಸಿಬಿಐ ತನಿಖೆಗೆ ಒಪ್ಪಿಸಲಿ. ಸರಕಾರ ಇಂಥ ಅಕ್ರಮ ಮಾಡಿಲ್ಲ ಎಂದು ಧೈರ್ಯದಿಂದ ಹೇಳುವುದಾದರೆ ಸಿಬಿಐ ತನಿಖೆ ಮಾಡಿಸಲಿ. ಫೋನ್ ಟ್ಯಾಪಿಂಗ್ ಯಂತ್ರಗಳನ್ನು ಬೇರೆ ದೇಶದಿಂದ ಖರೀದಿಸಿರುವ ಸಾಧ್ಯತೆ ಇದ್ದು, ಇಲ್ಲಿನ ಪೊಲೀಸರು ಏನೂ ಮಾಡಲು ಸಾಧ್ಯವಿಲ್ಲ” ಎಂದು ಹೇಳಿದರು.

ವಿಧಾನ ಪರಿಷತ್‌, 6 ಸ್ಥಾನ ಗೆಲ್ಲುತ್ತೇವೆ

“ಚುನಾವಣೆ ನಡೆಯುತ್ತಿರುವ ವಿಧಾನ ಪರಿಷತ್ತಿನ ಎಲ್ಲ 6 ಸ್ಥಾನಗಳಲ್ಲಿ ಗೆಲ್ಲಲು ಮಾಡಬೇಕಾದ ಪ್ರಯತ್ನದ ಕುರಿತು ಇಂದಿನ ಸಭೆಯಲ್ಲಿ ಚರ್ಚಿಸಲಾಗಿದೆ. ಇಂದು ಬೆಂಗಳೂರು ಪದವೀಧರ ಕ್ಷೇತ್ರ, ಆಗ್ನೇಯ ಶಿಕ್ಷಕರ ಕ್ಷೇತ್ರದ ಪ್ರಮುಖರ ಸಭೆಯು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ನೇತೃತ್ವದಲ್ಲಿ ನಡೆಯಿತು” ಎಂದರು.

“ಬೂತ್‍ನಲ್ಲಿ ಮತದಾರರನ್ನು ಹುಡುಕಿ ಅವರಿಗೆ ನಮ್ಮ ಅಭ್ಯರ್ಥಿಗಳಿಗೆ ಮತ ಹಾಕಲು ವಿನಂತಿಸಬೇಕು. ವಿಧಾನಸಭಾ ಮಟ್ಟದಲ್ಲಿ ಸಭೆ ನಡೆಸಬೇಕೆಂದು ನಿರ್ಧರಿಸಲಾಗಿದೆ. ವಿಧಾನಸಭೆಯಿಂದ ಪರಿಷತ್ತಿಗೆ ಆಯ್ಕೆ ಸಂಬಂಧ ಯಾರು ಅಭ್ಯರ್ಥಿಗಳು ಎಂದು ಕೇಂದ್ರದ ನಾಯಕರು ತೀರ್ಮಾನ ಮಾಡಲಿದ್ದಾರೆ” ಎಂದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

Download Eedina App Android / iOS

X