ಐಪಿಎಲ್ | ಎಸ್‌ಆರ್‌ಎಚ್ ವಿರುದ್ಧ ಭರ್ಜರಿ ಜಯ; 4ನೇ ಬಾರಿಗೆ ಫೈನಲ್ ಪ್ರವೇಶಿಸಿದ ಕೋಲ್ಕತ್ತಾ ನೈಟ್ ರೈಡರ್ಸ್‌

Date:

Advertisements

ಗುಜರಾತ್‌ನ ಅಹ್ಮದಾಬಾದ್‌ನಲ್ಲಿರುವ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಇಂದು ನಡೆದ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಹೈದರಾಬಾದ್ ವಿರುದ್ಧ ಭರ್ಜರಿ ಜಯಗಳಿಸಿರುವ ಶ್ರೇಯಸ್ ಅಯ್ಯರ್ ನೇತೃತ್ವದ ಕೋಲ್ಕತ್ತಾ ನೈಟ್‌ ರೈಡರ್ಸ್‌ ತಂಡ, 4ನೇ ಬಾರಿಗೆ ಐಪಿಎಲ್ ಟೂರ್ನಿಯ ಫೈನಲ್ ಪ್ರವೇಶಿಸಿದೆ.

ಟಾಸ್ ಗೆದ್ದಿದ್ದ ಪ್ಯಾಟ್ ಕಮ್ಮಿನ್ಸ್‌ ನೇತೃತ್ವದ ಸನ್‌ರೈಸರ್ಸ್‌ ಹೈದರಾಬಾದ್ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತ್ತು. ಆದರೆ, ಕೆಕೆಆರ್‌ನ ಸಂಘಟಿತ ಬೌಲಿಂಗ್ ದಾಳಿಗೆ ನಲುಗಿದ ನಡುವೆಯೂ ಕೂಡ ರಾಹುಲ್ ತ್ರಿಪಾಠಿಯವರ ಅರ್ಧಶತಕದ ನೆರವಿನಿಂದ 19.3 ಓವರ್‌ಗಳಲ್ಲಿ ಕೇವಲ 159 ರನ್ ಗಳಿಸುವಷ್ಟರಲ್ಲಿ ಆಲೌಟ್‌ ಆಗಿತ್ತು.

ಈ ಗುರಿಯನ್ನು ಬೆನ್ನಟ್ಟಿದ ಕೆಕೆಆರ್ ತಂಡವು, ವೆಂಕಟೇಶ್ ಅಯ್ಯರ್ ಹಾಗೂ ನಾಯಕ ಶ್ರೇಯಸ್ ಅಯ್ಯರ್ ಅವರ ಸ್ಫೋಟಕ ಅರ್ಧಶತಕದ ನೆರವಿನಿಂದ 13.4 ಓವರ್‌ಗಳಲ್ಲಿ ಕೇವಲ 2 ವಿಕೆಟ್ ಕಳೆದುಕೊಂಡು 164 ರನ್ ಬಾರಿಸುವ ಮೂಲಕ ಗುರಿ ತಲುಪಿತು.

Advertisements

ಶ್ರೇಯಸ್ ಅಯ್ಯರ್ ಅವರು 24 ಎಸೆತಗಳಲ್ಲಿ 5 ಬೌಂಡರಿ ಹಾಗೂ 4 ಸಿಕ್ಸ್‌ನ ನೆರವಿನಿಂದ 58 ರನ್ ಗಳಿಸಿದರೆ, ವೆಂಕಟೇಶ್ ಅಯ್ಯರ್ 28 ಎಸೆತಗಳಲ್ಲಿ 5 ಬೌಂಡರಿ ಹಾಗೂ 4 ಸಿಕ್ಸ್‌ನ ನೆರವಿನಿಂದ 51 ರನ್ ಗಳಿಸಿ, ಔಟಾಗದೇ ಉಳಿದರು. ಉಳಿದಂತೆ ಕೆಕೆಆರ್ ಪರ ಇನ್ನಿಂಗ್ಸ್‌ ಆರಂಭಿಸಿದ ಸುನಿಲ್ ನರೇನ್ 21 ರನ್ ಹಾಗೂ ರಹ್ಮತುಲ್ಲಾ ಗುರ್ಬಾಝ್ 23 ರನ್ ಗಳಿಸಿದರು.

ಸನ್‌ರೈಸರ್ಸ್‌ ಹೈದರಾಬಾದ್ ಪರ ಬೌಲಿಂಗ್‌ನಲ್ಲಿ ಟಿ ನಟರಾಜನ್ ಹಾಗೂ ನಾಯಕ ಪ್ಯಾಟ್ ಕಮ್ಮಿನ್ಸ್‌ ತಲಾ ಒಂದೊಂದು ವಿಕೆಟ್ ಗಳಿಸಿದರು.

ಈ ಗೆಲುವಿನೊಂದಿಗೆ ಬಾಲಿವುಡ್‌ ನಟ ಶಾರೂಖ್ ಖಾನ್ ಮಾಲೀಕತ್ವದ ಕೋಲ್ಕತ್ತಾ ನೈಟ್ ರೈಡರ್ಸ್‌ ತಂಡವು, 4ನೇ ಬಾರಿಗೆ ಐಪಿಎಲ್‌ ಟೂರ್ನಿಯಲ್ಲಿ ಫೈನಲ್‌ಗೆ ಲಗ್ಗೆ ಇಟ್ಟಿದೆ.

ಈ ಮೊದಲು 2012, 2014 ಹಾಗೂ 2021ರಲ್ಲಿ ಫೈನಲ್ ಪ್ರವೇಶಿಸಿತ್ತು. ಈ ಪೈಕಿ 2012ರಲ್ಲಿ ಚೆನ್ನೈಯನ್ನು ಹಾಗೂ 2014ರಲ್ಲಿ ಕಿಂಗ್ಸ್ ಎಲೆವೆನ್ ಪಂಜಾಬ್ ಅನ್ನು ಸೋಲಿಸಿ ಐಪಿಎಲ್ ಟ್ರೋಫಿ ಎತ್ತಿ ಹಿಡಿಯುವ ಮೂಲಕ, ಚಾಂಪಿಯನ್ ಆಗಿತ್ತು.

2021ರಲ್ಲಿ ಕೂಡ ಫೈನಲ್ ಪ್ರವೇಶಿಸಿದ್ದರೂ ಕೂಡ, ಕೋಲ್ಕತ್ತಾ ನೈಟ್ ರೈಡರ್ಸ್‌ ತಂಡವು 27 ರನ್‌ಗಳಿಂದ ಚೆನ್ನೈ ಸೂಪರ್ ಕಿಂಗ್ಸ್ ತಂಡದ ವಿರುದ್ಧ ಸೋಲನುಭವಿಸಿ, ರನ್ನರ್ ಅಪ್ ಆಗಿತ್ತು. ಮೇ 26ರ ಭಾನುವಾರದಂದು ಚೆನ್ನೈಯ ಎಂ ಚಿದಂಬರಂ ಸ್ಟೇಡಿಯಂನಲ್ಲಿ ಫೈನಲ್ ಪಂದ್ಯ ನಡೆಯಲಿದೆ.

ಅದಕ್ಕೂ ಮೊದಲು ನಾಳೆ(ಮೇ 22) ಇದೇ ಮೈದಾನದಲ್ಲಿ ಆರ್‌ಸಿಬಿ ಹಾಗೂ ರಾಜಸ್ಥಾನ್ ರಾಯಲ್ಸ್‌ ನಡುವೆ ಎಲಿಮಿನೇಟರ್ ಪಂದ್ಯ ನಡೆಯಲಿದೆ. ಇದರಲ್ಲಿ ಜಯ ಗಳಿಸಿದವರು, ಮೇ 24ರಂದು ಚೆನ್ನೈನ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯಲಿರುವ ಎರಡನೇ ಕ್ವಾಲಿಫೈಯರ್ ಪಂದ್ಯದಲ್ಲಿ, ಮೊದಲ ಕ್ವಾಲಿಫೈಯರ್‌ನಲ್ಲಿ ಸೋತ ಹೈದರಾಬಾದ್ ತಂಡವನ್ನು ಎದುರಿಸಲಿದ್ದಾರೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಾಗರ್ ಧನಕರ್ ಹತ್ಯೆ ಪ್ರಕರಣ: ಕುಸ್ತಿಪಟು ಸುಶೀಲ್ ಕುಮಾರ್ ಜಾಮೀನು ರದ್ದು

ಜೂನಿಯರ್ ರಾಷ್ಟ್ರೀಯ ಕುಸ್ತಿ ಚಾಂಪಿಯನ್ ಸಾಗರ್ ಧನಕರ್ ಹತ್ಯೆ ಪ್ರಕರಣದ ಪ್ರಮುಖ...

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

ಊಹಾಪೋಹಗಳಿಗೆ ತೆರೆ: ಭಾರತ–ಪಾಕ್‌ ಏಷ್ಯಾಕಪ್‌ ಕ್ರಿಕೆಟ್‌ ಪಂದ್ಯ ರದ್ದಾಗುವುದಿಲ್ಲ

ಪಹಲ್ಗಾಮ್‌ ಉಗ್ರ ದಾಳಿಯ ನಂತರ ಭಾರತ–ಪಾಕಿಸ್ತಾನದ ನಡುವಿನ ಬಿಕ್ಕಟ್ಟು ಹೆಚ್ಚಾದ ಹಿನ್ನೆಲೆಯಲ್ಲಿ...

Download Eedina App Android / iOS

X