ಕಾಂಗ್ರೆಸ್ ಪ್ರಣಾಳಿಕೆ| ಜನರ ದಾರಿ ತಪ್ಪಿಸುತ್ತಿರುವ ‘ಸುಳ್ಳುಗಳ ಸರದಾರ’ ಮೋದಿ: ಖರ್ಗೆ ಟೀಕೆ

Date:

Advertisements

ಪ್ರಧಾನಿ ನರೇಂದ್ರ ಮೋದಿ ಕಾಂಗ್ರೆಸ್ ಪ್ರಣಾಳಿಕೆ ವಿಚಾರದಲ್ಲಿ ಜನರ ದಾರಿ ತಪ್ಪಿಸುತ್ತಿದ್ದಾರೆ ಎಂದು ಆರೋಪಿಸಿದ ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರು, ಪ್ರಧಾನಿ ಮೋದಿ ಅವರನ್ನು “ಸುಳ್ಳುಗಳ ಸರದಾರ” ಎಂದು ಕರೆದಿದ್ದಾರೆ.

ಹರಿಯಾಣದ ಯಮುನಾನಗರ ಜಿಲ್ಲೆಯಲ್ಲಿ ಚುನಾವಣಾ ಪ್ರಚಾರವನ್ನು ನಡೆಸಿದ ಮಾತನಾಡಿದ ಖರ್ಗೆ, “ಕಾಂಗ್ರೆಸ್ ಸಂಪತ್ತನ್ನು ಮರುಹಂಚಿಕೆ ಮಾಡಲು ಮತ್ತು ಮಹಿಳೆಯರ ಮಂಗಳಸೂತ್ರಗಳನ್ನು ಕಿತ್ತುಕೊಳ್ಳಲು ಯೋಜಿಸುತ್ತಿದೆ ಎಂದು ಮೋದಿ ಹೇಳುತ್ತಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನಿಮ್ಮ ಎಲ್ಲಾ ಆಸ್ತಿಯನ್ನು ಕಿತ್ತುಕೊಳ್ಳುತ್ತದೆ ಎಂದು ಮೋದಿ ಹೇಳಿದ್ದಾರೆ. ಆದರೆ ನಾವು ಎಂದಿಗೂ ಈ ಮಾತುಗಳನ್ನು ಹೇಳಿಲ್ಲ” ಎಂದು ತಿಳಿಸಿದರು.

ಇದನ್ನು ಓದಿದ್ದೀರಾ? ಕಾಂಗ್ರೆಸ್ ಪ್ರಣಾಳಿಕೆ ವಿರುದ್ಧ ಅಪಪ್ರಚಾರ: ಬಟಾ ಬಯಲಾಯ್ತು ಬಿಜೆಪಿ ಪಿತೂರಿ! Congress Manifesto

Advertisements

“ಓರ್ವ ಪ್ರಧಾನಿಯಾಗಿ ಈ ರೀತಿ ಸುಳ್ಳುಗಳನ್ನು ಹೇಳಿದರೆ ನಾವು ಏನೆಂದು ಹೇಳುವುದು? ಈ ರೀತಿ ಮಾತನಾಡುವವರಿಗೆ ಮತ್ತೆ ನಾವು ಮತವನ್ನು ನೀಡಬೇಕೆ” ಎಂದು ಪ್ರಶ್ನಿಸಿದ್ದು, “ಈ ರೀತಿ ಸುಳ್ಳು ಹೇಳಿಕೊಂಡೇ ತಿರುಗಾಡುವ ಪ್ರಧಾನಿ ನರೇಂದ್ರ ಮೋದಿ ಅವರು ಸುಳ್ಳುಗಳ ಸರದಾರ” ಎಂದು ಲೇವಡಿ ಮಾಡಿದರು.

“ಇಂಡಿಯಾ ಮೈತ್ರಿಕೂಟವು ಜಾತಿ ಗಣತಿ ಆರಂಭಿಸುವ ಭರವಸೆಯನ್ನು ನೀಡತ್ತದೆ. ಇದು ಸಾರ್ವಜನಿಕರ ಒಳಿತಿಗಾಗಿ ಮಾಡುವುದೇ ಹೊರತು ಯಾರ ಆಸ್ತಿಯನ್ನು ಕೂಡಾ ಕಿತ್ತುಕೊಳ್ಳಲು ಅಲ್ಲ. ಪ್ರಸ್ತುತ ಆರ್‌ಎಸ್‌ಎಸ್‌ ಸಿದ್ಧಾಂತದ ವಿರುದ್ಧವಾಗಿ ಕಾಂಗ್ರೆಸ್‌ನ ಹೋರಾಟ ಇದಾಗಿದೆ” ಎಂದು ತಿಳಿಸಿದರು.

ಇದನ್ನು ಓದಿದ್ದೀರಾ?  ಬಿಜೆಪಿಯಲ್ಲಿ ಆತಂಕ ಸೃಷ್ಟಿಸಿದ ಕಾಂಗ್ರೆಸ್ ಪ್ರಣಾಳಿಕೆ: ಮೆಹಬೂಬಾ ಮುಫ್ತಿ

ಅಂಬಾಲಾ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವರುಣ್ ಚೌಧರಿ ಮತ್ತು ಎಎಪಿಯ ಕುರುಕ್ಷೇತ್ರದ ಅಭ್ಯರ್ಥಿ ಸುಶೀಲ್ ಗುಪ್ತಾ ಈ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಿದ್ದರು. ಹರಿಯಾಣದಲ್ಲಿ ಕಾಂಗ್ರೆಸ್ ಒಟ್ಟು ಒಂಬತ್ತು ಲೋಕಸಭಾ ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದ್ದರೆ, ಇಂಡಿಯಾ ಒಕ್ಕೂಟದ ಆಮ್‌ ಆದ್ಮಿ ಪಕ್ಷ (ಎಎಪಿ) ಕುರುಕ್ಷೇತ್ರದಲ್ಲಿ ಕಣದಲ್ಲಿದೆ. ಇಲ್ಲಿ ಮೇ 25ರಂದು ಚುನಾವಣೆ ನಡೆಯಲಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

Download Eedina App Android / iOS

X