ಬೆಂಗಳೂರು | ಇನ್ಸ್​ಪೆಕ್ಟರ್​, ಎಸಿಪಿಗೆ ಪೊಲೀಸ್​ ಪೇದೆಯಿಂದ ಕೊಲೆ ಬೆದರಿಕೆ; ಪ್ರಕರಣದ ತನಿಖೆ ಸಿಸಿಬಿಗೆ

Date:

Advertisements

ಅಮಾನತು ಶಿಕ್ಷೆಗೆ ಶಿಫಾರಸು ಮಾಡಿದರು ಎಂಬ ಕಾರಣಕ್ಕೆ ಕಾನ್‌ಸ್ಟೆಬಲ್‌ ಒಬ್ಬರು ಇನ್‌ಸ್ಪೆಕ್ಟರ್‌ ಹಾಗೂ ಎಸಿಪಿಗೆ ಕೊಲೆ ಬೆದರಿಕೆ ಹಾಕಿದ ಪ್ರಕರಣದ ತನಿಖೆಯನ್ನು ಸಿಸಿಬಿಗೆ ವರ್ಗಾವಣೆ ಮಾಡಿ ನಗರ ಪೊಲೀಸರು ಆಯುಕ್ತ ಬಿ.ದಯಾನಂದ ಅವರು ಆದೇಶಿಸಿದ್ದಾರೆ.

ಕರ್ತವ್ಯಲೋಪ ಎಸಗಿದ್ದ ಆರೋಪದಲ್ಲಿ ಬಾಣಸವಾಡಿ ಠಾಣೆಯ ಇನ್ಸ್​ಪೆಕ್ಟರ್ ಮತ್ತು ಎಸಿಪಿ ಅವರು ಪೊಲೀಸ್‌ ಪೇದೆಯ ಅಮಾನತಿಗೆ ಶಿಫಾರಸು ಮಾಡಿದ್ದರು. ಇದಕ್ಕೆ ಕೋಪಗೊಂಡ ಪೇದೆ ಚಾಕುವಿನಿಂದ ಇರಿದು ಕೊಲೆ‌ ಮಾಡೋದಾಗಿ ಇನ್ಸ್‌ಪೆಕ್ಟರ್ ಮತ್ತು ಎಸಿಪಿಗೆ ಜೀವ ಬೆದರಿಕೆ ಹಾಕಿದ್ದಾರೆ. ರೇಣುಕಾ ನಾಯಕ್ ಜೀವ ಬೆದರಿಕೆ ಹಾಕಿದ ಪೊಲೀಸ್​ ಪೇದೆ.

ಮೇ 7ರಂದು ಬಾಣಸವಾಡಿ ಠಾಣೆ ವ್ಯಾಪ್ತಿಯಲ್ಲಿ ರೌಡಿಶೀಟರ್ ಕಾರ್ತಿಕೇಯನ್ ಎಂಬಾತನ ಹತ್ಯೆಯಾಗಿತ್ತು. ಆರೋಪಿ ಮಂಜು ಹಾಗೂ ಆತನ ಸಹಚರರನ್ನು ಬಂಧಿಸಿ ವಿಚಾರಣೆ ನಡೆಸಿದಾಗ ಕೃತ್ಯಕ್ಕೆ ಹಳೇ ದ್ವೇಷವೇ ಕಾರಣ ಎಂಬುದು ಗೊತ್ತಾಗಿತ್ತು.

Advertisements

ಹತ್ಯೆಯಾದ ವ್ಯಕ್ತಿಗೂ, ಆರೋಪಿಗಳಿಗೂ ಹಳೇ ದ್ವೇಷವಿದೆ ಎಂಬ ಮಾಹಿತಿ ಠಾಣೆಯ ಕ್ರೈಂ ಸಿಬ್ಬಂದಿ ಮೊದಲೇ ಗೊತ್ತಿದ್ದರೂ, ಹಿರಿಯ ಅಧಿಕಾರಿಗಳ ಗಮನಕ್ಕೆ ತಂದಿರಲಿಲ್ಲ. ಈ ಹಿನ್ನೆಲೆ, ಇನ್‌ಸ್ಪೆಕ್ಟರ್ ಹಾಗೂ ಎಸಿಪಿ ಶಿಫಾರಸಿನ ಮೇರೆಗೆ ಠಾಣೆಯ ಕಾನ್​ಸ್ಟೇಬಲ್‌ಗಳಾದ ಸಂತೋಷ್, ಪುಟ್ಟಸ್ವಾಮಿ ಮತ್ತು ವಿನೋದ್ ಎಂಬವರನ್ನು ಅಮಾನತುಗೊಳಿಸಿ ಪೂರ್ವವಿಭಾಗದ ಡಿಸಿಪಿ ಕುಲದೀಪ್​ ಕುಮಾರ್ ಆರ್​. ಜೈನ್ ಆದೇಶಿಸಿದ್ದರು.

ಪೊಲೀಸ್​ ಪೇದೆ ರೇಣುಕಾ ನಾಯಕ್ ಅವರನ್ನೂ ಅಮಾನತು ಮಾಡುವಂತೆ ಶಿಫಾರಸು ಮಾಡಲಾಗಿತ್ತು. ತನ್ನ ಹೆಸರನ್ನು ಅಮಾನತು ಶಿಕ್ಷೆಗೆ ಶಿಫಾರಸು ಮಾಡಿದ ವಿಚಾರ ತಿಳಿದ ಕಾನ್‌ಸ್ಟೆಬಲ್, ಪಿಐ ಮತ್ತು ಎಸಿಪಿಗೆ ಕರೆ ಮಾಡಿ ಚಾಕುವಿನಿಂದ ಇರಿದು ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದರು.

ಈ ಸುದ್ದಿ ಓದಿದ್ದೀರಾ? ರಾಮೇಶ್ವರಂ ಕೆಫೆಯಲ್ಲಿ ಸ್ಪೋಟ | ಹುಬ್ಬಳ್ಳಿಯ ಸಹೋದರರು ಸೇರಿ 11 ಮಂದಿ ಎನ್‌ಐಎ ವಶಕ್ಕೆ!

ಅದರಿಂದ ವಿಚಲಿತಗೊಂಡ ಪಿಐ ಮತ್ತು ಎಸಿಪಿ ಶಿಫಾರಸು ಪತ್ರ ವಾಪಸ್ ಪಡೆದುಕೊಂಡಿದ್ದರು. ಅಲ್ಲದೇ, ಕಾನ್‌ಸ್ಟೆಬಲ್‌ನನ್ನು 1 ತಿಂಗಳ ಕಡ್ಡಾಯ ರಜೆ ಮೇಲೆ ಕಳುಹಿಸಲಾಗಿತ್ತು. ಇದೇ ಪ್ರಕರಣದ ತನಿಖೆಯನ್ನು ಸಿಸಿಬಿ ವರ್ಗಾವಣೆ ಮಾಡಲಾಗಿದೆ.

ಈ ಪ್ರಕರಣದ ತನಿಖೆಯನ್ನು ಸಿಸಿಬಿಗೆ ವರ್ಗಾಯಿಸಿ ನಗರ ಪೊಲೀಸ್​ ಆಯುಕ್ತ ಬಿ. ​ದಯಾನಂದ್ ಆದೇಶ ಹೊರಡಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X