ನವೀನ್ ಪಟ್ನಾಯಕ್‌ಗೆ ನಿವೃತ್ತಿ ಪಡೆಯಿರಿ ಎಂದ ಅಮಿತ್ ಶಾ, ಪರೋಕ್ಷವಾಗಿ ಮೋದಿಗೆ ಸೂಚನೆ ನೀಡಿದ್ದಾರೆಯೇ?

Date:

Advertisements

ಹೆಚ್ಚು ವಯಸ್ಸಾಗಿರುವ ಒಡಿಶಾ ಮುಖ್ಯಮಂತ್ರಿ ನವೀನ್‌ ಪಟ್ನಾಯಕ್‌ ನಿವೃತ್ತಿ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಮಾತನಾಡಿರುವುದು ಪರೋಕ್ಷವಾಗಿ ಪ್ರಧಾನಿ ನರೇಂದ್ರ ಮೋದಿಗೆ ರಾಜಕೀಯ ನಿವೃತ್ತಿ ತೆಗೆದುಕೊಳ್ಳಿ ಎಂದು ಸೂಚನೆ ನೀಡಿದ್ದಾರೆ ಎಂದು ಕಾಂಗ್ರೆಸ್ ನಾಯಕ ಪಿ ಚಿದಂಬರಂ ಹೇಳಿದ್ದಾರೆ.

ಈ ಬಗ್ಗೆ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಟ್ವೀಟ್‌ ಮಾಡಿರುವ ಕಾಂಗ್ರೆಸ್‌ನ ಹಿರಿಯ ನಾಯಕ ಪಿ ಚಿದಂಬರಂ, 77 ವರ್ಷ ವಯಸ್ಸಾಗಿರುವ ನವೀನ್‌ ಪಟ್ನಾಯಕ್‌ ರಾಜಕೀಯ ನಿವೃತ್ತಿ ಪಡೆದುಕೊಳ್ಳಬೇಕು ಎಂದು ಮಾತನಾಡಿದ್ದಾರೆ. ಈ ರೀತಿ ಮಾತನಾಡಿ 73 ವರ್ಷ 7 ತಿಂಗಳಾಗಿರುವ ಪ್ರಧಾನಿ ನರೇಂದ್ರ ಮೋದಿಗೆ ಪರೋಕ್ಷವಾಗಿ ರಾಜಕೀಯ ನಿವೃತ್ತಿ ಪಡೆಯಿರಿ ಎಂದು ಸೂಚನೆ ನೀಡಿದ್ದಾರೆ ಎಂದಿದ್ದಾರೆ.

ಒಂದು ವೇಳೆ ಕೆಂದ್ರದಲ್ಲಿ ಬಿಜೆಪಿ ಅಧಿಕಾರ ರಚಿಸಿದರೆ ಅಮಿತ್‌ ಶಾ ಅವರು ಪ್ರಧಾನಿ ಹುದ್ದೆಯ ಮೇಲೆ ಕಣ್ಣಿಟ್ಟಿದ್ದಾರೆ. ಬಿಜೆಪಿ ಸರ್ಕಾರ ರಚಿಸದಿದ್ದರೆ ಮೋದಿಗಿಂತ ಅಮಿತ್‌ ಶಾ ಹೆಚ್ಚು ಸಂತೋಷ ಪಡುತ್ತಾರೆ. ಹಾಗೆಯೇ ವಿಪಕ್ಷ ನಾಯಕನ ಸ್ಥಾನದಲ್ಲಿ ಕುಳಿತುಕೊಳ್ಳುತ್ತಾರೆ ಎಂದು ಪಿ ಚಿದಂಬರಂ ತಿಳಿಸಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸರ್ಕಾರಕ್ಕೆ ಒಂದು ವರ್ಷ, ಸಮರ್ಥನೀಯವಲ್ಲದ ನಡೆ

ಇತ್ತೀಚಿಗೆ ಒಡಿಶಾದ ಚುನಾವಣಾ ಪ್ರಚಾರದಲ್ಲಿ ಮಾತನಾಡಿದ್ದ ಅಮಿತ್‌ ಶಾ, ಹೆಚ್ಚು ವಯಸ್ಸಾಗಿ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವ ನವೀನ್‌ ಪಟ್ನಾಯಕ್‌ ನಿವೃತ್ತಿ ಪಡೆಯಬೇಕು. ಸ್ಥಳೀಯ ಬಿಜೆಪಿಯ ನಾಯಕರೊಬ್ಬರು ಅಧಿಕಾರ ರಚಿಸಲಿದ್ದಾರೆ ಎಂದು ಹೇಳಿದ್ದರು.

ಬಿಜೆಪಿ ನೀತಿಯಂತೆ 75 ವರ್ಷ ಮೇಲ್ಪಟ್ಟವರು ರಾಜಕೀಯ ನಿವೃತ್ತಿ ಪಡೆಯಬೇಕು. ಆದರೆ ಇತ್ತೀಚಿಗೆ ಮಾತನಾಡಿದ್ದ ಅಮಿತ್ ಶಾ 75 ವರ್ಷದ ನಂತರವೂ ಮೋದಿ ಪ್ರಧಾನಿಯಾಗಿ ಮುಂದುವರೆಯುತ್ತಾರೆ ಎಂದು ತಿಳಿಸಿದ್ದರು.

ಅಮಿತ್‌ ಶಾ ಹೇಳಿಕೆಯ ವಿರುದ್ಧ ವಾಗ್ದಾಳಿ ನಡೆಸಿದ್ದ ಕಾಂಗ್ರೆಸ್ ಒಳಗೊಂಡ ವಿಪಕ್ಷ ನಾಯಕರು ಬಿಜೆಪಿಯ ನಿವೃತ್ತಿಯ ನೀತಿ ಎಲ್‌ ಕೆ ಅಡ್ವಾಣಿ, ಮುರಳಿ ಮನೋಹರ್ ಜೋಷಿ, ಯಶವಂತ್‌ ಸಿನ್ಹಾ ಸೇರಿದಂತೆ ಕೆಲವರಿಗೆ ಮಾತ್ರ ಸೀಮಿತವೇ ಎಂದು ಪ್ರಶ್ನಿಸಿದ್ದರು. ಕರ್ನಾಟಕ ಮಾಜಿ ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪ ಒಳಗೊಂಡು ಹಲವು ನಾಯಕರನ್ನು 75 ವರ್ಷ ದಾಟಿದ ಕಾರಣದಿಂದ ಅಧಿಕಾರದಿಂದ ಕೆಳಗಿಳಿಸಲಾಗಿತ್ತು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

Download Eedina App Android / iOS

X