ವಿಜಯಪುರ | ಮಾಜಿ ಪ್ರಧಾನಿ ರಾಜೀವ್‌ ಗಾಂಧಿಯವರ ಪುಣ್ಯತಿಥಿ

Date:

Advertisements

ಮಾಜಿ ಪ್ರಧಾನಮಂತ್ರಿ ಇಂದಿರಾ ಗಾಂಧಿಯವರ ನಿಧನದ ಬಳಿಕ ದೇಶದ ಪ್ರಧಾನ ಮಂತ್ರಿ ಜವಾಬ್ದಾರಿ ವಹಿಸಿಕೊಂಡ ರಾಜೀವ್ ಗಾಂಧಿಯವರು ಪಂಚಾಯತ್ ರಾಜ್ ವ್ಯವಸ್ಥೆಯನ್ನು ಜಾರಿಗೆ ತಂದರು. ಇಂದು ನಾವೆಲ್ಲರೂ ಬಳಸುತ್ತಿರುವ ಮೊಬೈಲ್ ಫೋನ್‌ ಪರಿಚಯಿಸಿದ್ದಲ್ಲದೆ ಕಂಪ್ಯೂಟರ್‌ಗಳನ್ನು ಬಳಸಲು ಕಾರಣೀಭೂತರಾದರು. ಅದರಂತೆ 18 ವರ್ಷದ ಯುವಕ ಯುವತಿಯರಿಗೆ ಮತದಾನ ಹಕ್ಕನ್ನು ನೀಡಿದರು. ದೇಶಕ್ಕೆ ಅವರ ಕೊಡುಗೆ ಅಪಾರವಾದದ್ದು ಹಾಗೂ ಮಾದರಿಯಾಗಿದೆ” ಎಂದು ವಿಜಯಪುರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಎಸ್ ಲೋಣಿ ಸ್ಮರಿಸಿದರು.

ವಿಜಯಪುರ ಜಿಲ್ಲಾ ಕಾಂಗ್ರೆಸ್ ಕಾರ್ಯಾಲಯದಲ್ಲಿ ಹಮ್ಮಿಕೊಂಡಿದ್ದ ಭಾರತದ ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರ 33ನೇ ಪುಣ್ಯತಿಥಿ ಕಾರ್ಯಕ್ರಮದಲ್ಲಿ ಮಾತನಾಡಿದರು.

“ತಮಿಳುನಾಡಿನ ಪೆರಂಬೂರಿನಲ್ಲಿ ಎಲ್‌ಟಿಟಿಇ ಉಗ್ರರ ಕೃತ್ಯಕ್ಕೆ ಬಲಿಯಾದರು. ಅವರ ಆದರ್ಶಗಳು, ದೇಶದ ಜನತೆಯ ಬಗೆಗಿನ ಕಾಳಜಿ ಅವಿಸ್ಮರಣೀಯವಾಗಿದೆ. ಅವರೊಬ್ಬ ದೂರದೃಷ್ಟಿಯುಳ್ಳ ನಾಯಕರಾಗಿದ್ದರು” ಎಂದು ಹೇಳಿದರು.

Advertisements

ವಿಜಯಪುರ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ರಾಜು ಆಲಗೂರ, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ವೈಜನಾಥ ಕರ್ಪೂರಮಠ, ಕೆ ಎಫ್ ಅಂಕಲಗಿ, ಡಿ ಎಚ್ ಕಲಾಲ, ಸಾಹೇಬಗೌಡ ಬಿರಾದಾರ ಸೇರಿದಂತೆ ಇತರರು ಮಾತನಾಡಿದರು.

ಈ ಸುದ್ದಿ ಓದಿದ್ದೀರಾ? ಕಲಬುರಗಿ | ತುರ್ತಾಗಿ ಬರಪರಿಹಾರ ಒದಿಗಿಸುವಂತೆ ಅಖಿಲ ಭಾರತ ರೈತ ಕೃಷಿ ಕಾರ್ಮಿಕರ ಸಂಘ ಆಗ್ರಹ

ಕಾರ್ಯಕ್ರಮದಲ್ಲಿ ಕೆಪಿಸಿಸಿ ಸದಸ್ಯ ಅಬ್ದುಲ್‌ ಹಮೀದ ಮುಶ್ರೀಫ್, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರುಗಳಾದ ಚಾಂದಸಾಬ ಗಡಗಲಾವ, ಸುಭಾಷ್ ಕಾಲೇಬಾಗ್, ಮಹಾದೇವಿ ಗೋಕಾಕ, ಜಲನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಾದ ಆರತಿ ಶಹಾಪೂರ, ವಿದ್ಯಾವತಿ ಅಂಕಲಗಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ವಸಂತ ಹೊನಮೊಡೆ, ಚನಬಸಪ್ಪ ನಂದರಗಿ, ತಮ್ಮಣ್ಣ ಮೇಲಿನಕೇರಿ, ಶರಣಪ್ಪ ಯಕ್ಕುಂಡಿ, ಎಂ ಜಿ ಯಂಕಂಚಿ, ದೇಸು ಚವ್ಹಾಣ, ಎಂ ಎಂ ಮುಲ್ಲಾ, ಅಫ್ತಾಬ್ ಖಾದ್ರಿ ಇನಾಮದಾರ, ಅಂಗ ಘಟಕಗಳ ಅಧ್ಯಕ್ಷರುಗಳಾದ ಅಮಿತ ಚವ್ಹಾಣ, ಲಾಲಸಾಬ ಕೊರಬು, ಫಿರೋಜ ಶೇಖ, ಮಹಾದೇವ ಜಾಧವ, ಇಲಿಯಾಸ ಸಿದ್ದಿಕಿ, ಅಬ್ದುಲ್‌ಪೀರಾ ಜಮಖಂಡಿ, ತಾಜುದ್ದೀನ ಖಲೀಫಾ, ಅಬುಬಕರ ಕೆಂಬಾವಿ, ಕಲ್ಲಪ್ಪ ಪರಶೆಟ್ಟಿ, ಮಹ್ಮದ ಮುಲ್ಲಾ, ಕಾಶಿಬಾಯಿ ಹಡಪದ, ಮಹೇಶ ಶಹಾಪೂರ, ಅಂಬಣ್ಣ ಕಲಮನಿ, ಬಾಬುಸಾಬ ಯಾಳವಾರ, ನಾಗರಾಜ ಲಂಬು, ದಿಲೀಪ ಪ್ರಭಾಕರ, ಅಶೋಕ ಕಾಂಬಳೆ ಸೇರಿದಂತೆ ಪಕ್ಷದ ಬಹುತೇಕ ಕಾರ್ಯಕರ್ತರು ಇದ್ದರು.

WhatsApp Image 2025 07 12 at 17.38.34 e1752322718567
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗೇಪಲ್ಲಿ | ನೋಟಿಸ್ ನೀಡದೇ ಕೆಲಸದಿಂದ ತೆಗೆದ ಗಾರ್ಮೆಂಟ್ ಫ್ಯಾಕ್ಟರಿ; ಪ್ರತಿಭಟನೆಗಿಳಿದ ಮಹಿಳಾ ನೌಕರರು

ಬಾಗೇಪಲ್ಲಿ ತಾಲೂಕಿನ ಹೊರವಲಯದ ರಾಷ್ಟ್ರೀಯ ಹೆದ್ದಾರಿ ನಾರೇಪಲ್ಲಿ ಟೋಲ್ ಗೇಟ್ ಬಳಿ...

ಧಾರವಾಡ | ಹಾಳುಬಿದ್ದ ಸಂಶಿ ಎಪಿಎಂಸಿ; ವಾರದ ಸಂತೆ ಸ್ಥಳಾಂತರಿಸಲು ಒತ್ತಾಯ

ಸರ್ಕಾರದ ಮಟ್ಟದಲ್ಲಿ ಆಗುವ ಯೋಜನೆಗಳ ಅನುಷ್ಠಾನ ಮಾಡುವಲ್ಲಿ ನಿರ್ಲಕ್ಷ್ಯ ವಹಿಸುವುದರಿಂದ ಇತ್ತ...

ಹಾಸನ | ಕ್ಯೂಬಾ ದೇಶದ ಸಮಗ್ರ ಅಭಿವೃದ್ಧಿಯಲ್ಲಿ ಫಿಡೆಲ್ ಕ್ಯಾಸ್ಟ್ರೋ ಕೊಡುಗೆ ಅಪಾರ: ಬರಹಗಾರ ರವಿಕುಮಾರ್

ಕೃಷಿ ಪ್ರಧಾನವಾಗಿರುವ ಪುಟ್ಟ ಕ್ಯೂಬಾ ದೇಶವನ್ನು ಎಲ್ಲಾ ಕ್ಷೇತ್ರದಲ್ಲಿ ಅಭಿವೃದ್ಧಿ ಹೊಂದುವಂತೆ...

ಕುಶಾಲನಗರ | ಕೊಡಗು ಪ್ರವೇಶ ನಿರ್ಬಂಧ; ಪುನೀತ್ ಕೆರೆಹಳ್ಳಿಯನ್ನು ಹೊರಹಾಕಿದ ಪೊಲೀಸರು

ಕೊಡಗು ಜಿಲ್ಲೆ, ಕುಶಾಲನಗರಕ್ಕೆ ಆಗಮಿಸಿದ್ದ ರಾಷ್ಟ್ರ ರಕ್ಷಣಾ ಪಡೆಯ ಸಂಸ್ಥಾಪಕ ಪುನೀತ್...

Download Eedina App Android / iOS

X