ಬೆಂಗಳೂರು | ಮೂರು ‘ಫೈವ್ ಸ್ಟಾರ್’ ಹೋಟೆಲ್‍ಗಳಿಗೆ ಬಾಂಬ್ ಬೆದರಿಕೆ; ಹೆಚ್ಚುತ್ತಿರುವ ಪ್ರಕರಣಗಳು

Date:

Advertisements

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬಾಂಬ್ ಬೆದರಿಕೆ ಇಮೇಲ್ ಬರುವುದು ಮುಂದುವರೆದಿದ್ದು, ಮತ್ತೆ ನಗರದ ಮೂರು ‘ಫೈವ್ ಸ್ಟಾರ್’ ಹೋಟೆಲ್​ಗಳಿಗೆ ಇ-ಮೇಲ್ ಮೂಲಕ ಬಾಂಬ್​ ಬೆದರಿಕೆ ಸಂದೇಶ ಬಂದಿದೆ ಎಂದು ವರದಿಯಾಗಿದೆ.

ಎಲೆಕ್ಟ್ರಾನಿಕ್ ಸಿಟಿ ಬಳಿಯ ಒಟೇರಾ ಹೋಟೆಲ್ ಸೇರಿ ಮೂರು ಹೋಟೆಲ್‌ಗಳಿಗೆ ಮೇಲ್ ಮೂಲಕ ಸಂದೇಶ ಬಂದಿದ್ದು, ಗುರುವಾರ ನಸುಕಿನ ಜಾವ 2 ಗಂಟೆ ಸುಮಾರಿಗೆ ಇಮೇಲ್‌ ಬಂದಿದ್ದು, ಹೋಟೆಲ್ ಸಿಬ್ಬಂದಿ ಮೇಲ್ ಪರಿಶೀಲನೆ ಮಾಡಿದಾಗ ಬೆದರಿಕೆ ಸಂದೇಶ ಬೆಳಕಿಗೆ ಬಂದಿದೆ.

ಬೆದರಿಕೆ ಇ-ಮೇಲ್ ಬರುತ್ತಿದ್ದಂತೆ ಹೋಟೆಲ್ ಮಾಲೀಕರು ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಬಾಂಬ್ ಸ್ಕ್ಯಾಡ್‍ಗಳು ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿವೆ.

Advertisements

ಒಟೇರಾ ಹೋಟೆಲ್‌ಗೆ ಬಾಂಬ್ ಸ್ಕ್ವಾಡ್ ಮತ್ತು ಎಲೆಕ್ಟ್ರಾನಿಕ್‌ ಸಿಟಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಇದೊಂದು ಹುಸಿಬಾಂಬ್‌ ಬೆದರಿಕೆ ಅನ್ನೋದು ಬಯಲಾಗಿದೆ.

ಈ ಹಿಂದೆ ಹಲವು ಶಾಲೆಗಳಿಗೆ ಬಾಂಬ್‌ ಬೆದರಿಕೆಯ ಇಮೇಲ್‌ ಕಳುಹಿಸಲಾಗಿತ್ತು. ಈ ವೇಳೆಯೂ ಗಾಬರಿಗೊಂಡಿದ್ದ ಶಾಲಾ ಆಡಳಿತ ಮಂಡಳಿಗಳು ಮಕ್ಕಳನ್ನು ಮನೆಗೆ ಕಳುಹಿಸಿದ್ದವು. ಇತ್ತ ಪೊಲೀಸರು ಹಾಗೂ ಬಾಂಬ್ ಸ್ಕ್ವಾಡ್ ಬಂದು ಪರಿಶೀಲನೆ ನಡೆಸಿದಾಗ ಹುಸಿಬಾಂಬ್‌ ಕರೆ ಎಂದು ಬಯಲಾಗಿತ್ತು.

ಮೇ 13ರಂದು ಅಮೃತಹಳ್ಳಿ ಪೊಲೀಸ್​ ಠಾಣಾ ವ್ಯಾಪ್ತಿಯ ಕೆಂಪಾಪುರದ ಜೈನ್ ಹೆರಿಟೇಜ್ ಶಾಲೆಗೆ ಬಾಂಬ್ ಬೆದರಿಕೆ ಸಂದೇಶ ಬಂದಿತ್ತು. ಅದರ ಮರುದಿನವೇ ಬೆಂಗಳೂರು ದಕ್ಷಿಣ ತಾಲೂಕು ವ್ಯಾಪ್ತಿಯ ಕಗ್ಗಲಿಪುರದ ಕನಕಪುರ ರಸ್ತೆ ಸೋಮನಹಳ್ಳಿ ಬಳಿಯ ಈಡಿಫೈ ಖಾಸಗಿ ಶಾಲೆಗೆ ಬಾಂಬ್ ಬೆದರಿಕೆ ಸಂದೇಶ ಬಂದಿತ್ತು. ಪರಿಶೀಲನೆಯ ನಂತರ ಈ ಎರಡೂ ಬೆದರಿಕೆ ಸಂದೇಶಗಳು ಹುಸಿ ಎಂಬುದು ತಿಳಿದುಬಂದಿತ್ತು.

ಕಳೆದ ತಿಂಗಳು ಜಾಲಹಳ್ಳಿ ಠಾಣೆ ವ್ಯಾಪ್ತಿಯ ಎಚ್‌ಎಂಟಿ ಮೈದಾನ ಬಳಿಯ ಕದಂಬ ಹೋಟೆಲ್ ಸುತ್ತಮುತ್ತ ಬಾಂಬ್ ಇರಿಸಲಾಗಿದೆ ಎಂದು ಜಾಲಹಳ್ಳಿ ಪೊಲೀಸ್ ಠಾಣೆಗೆ ಅನಾಮಧೇಯ ಪತ್ರ ಬಂದಿದ್ದು ಆತಂಕಕ್ಕೆ ಕಾರಣವಾಗಿತ್ತು. ನಂತರ ಅದು ಹುಸಿ ಬೆದರಿಕೆ ಎಂಬುದು ತಿಳಿದುಬಂದಿತ್ತು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಬಿಡಬ್ಲೂಎಸ್‌ಎಸ್‌ಬಿ ಪೈಪ್‌ಲೈನ್ ಕಾಮಗಾರಿ; ಎಲ್ಲೆಲ್ಲಿ ಸಂಚಾರ ನಿರ್ಬಂಧ?

ನಾಲ್ಕು ತಿಂಗಳ ಅವಧಿಯಲ್ಲಿ ನಗರದ ನೂರಾರು ಶಾಲೆಗಳು ಮತ್ತು ಆಸ್ಪತ್ರೆಗಳಿಗೆ ಬಾಂಬ್ ಬೆದರಿಕೆ ಕರೆಗಳಿಗೆ ಸಂಬಂಧಿಸಿದಂತೆ 19 ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ. ಮೇ 13 ಮತ್ತು 14 ರಂದು ಆರು ಆಸ್ಪತ್ರೆಗಳು ಮತ್ತು ಎಂಟು ಶಾಲೆಗಳಿಗೆ ಬೆದರಿಕೆ ಕರೆಗಳು ಬಂದಿವೆ. ಆದರೂ, ಯಾವುದೇ ಪ್ರಕರಣಗಳಲ್ಲಿ ಇದುವರೆಗೆ ಯಾವುದೇ ಶಂಕಿತರನ್ನು ಗುರುತಿಸಲಾಗಿಲ್ಲ.

ದೇಶದಾದ್ಯಂತ ಹುಸಿ ಬಾಂಬ್ ದಾಳಿ ಬೆದರಿಕೆ ಸಂದೇಶಗಳು ಕಳೆದ ಕೆಲವು ತಿಂಗಳುಗಳಲ್ಲಿ ವಿಪರೀತ ಹೆಚ್ಚಾಗಿದೆ. ಇದು ಪೊಲೀಸರನ್ನು ಹಾಗೂ ಸಾರ್ವಜನಿಕರನ್ನು ಆತಂಕಕ್ಕೀಡುಮಾಡಿವೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

Download Eedina App Android / iOS

X