ಬಾಂಗ್ಲಾದೇಶದ ಸಂಸದನ ಹತ್ಯೆಗೆ 5 ಕೋಟಿ ರೂ. ಸುಪಾರಿ: ಪ್ರಕರಣ ಭೇದಿಸಿದ ಪೊಲೀಸರು

Date:

Advertisements

ಕೋಲ್ಕತ್ತಾದಲ್ಲಿ ಹತ್ಯೆಯಾಗಿದ್ದ ಬಾಂಗ್ಲಾದೇಶ ಸಂಸದನ ಪ್ರಕರಣವನ್ನು ಪಶ್ಚಿಮ ಬಂಗಾಳ ಪೊಲೀಸರು ಭೇದಿಸಿದ್ದು, ಘಟನೆಗೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

ಬಾಂಗ್ಲಾದೇಶದ ಸಂಸದ ಅನ್ವರೂಲ್ ಅಜೀಮ್ ಅನರ್ ಅವರನ್ನು ಹತ್ಯೆ ಮಾಡಲು ಸಂಸದರ ಸ್ನೇಹಿತನೊಬ್ಬ 5 ಕೋಟಿ ರೂ. ಸುಪಾರಿ ನೀಡಿದ್ದ ಎಂದು ಪ್ರಾಥಮಿಕ ತನಿಖೆಗಳಿಂದ ತಿಳಿದುಬಂದಿದೆ ಎಂದು ಕೊಲ್ಕತ್ತಾದ ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಅನ್ವರೂಲ್‌ ಮೇ 13ರಂದು ಕೋಲ್ಕತ್ತಾದಲ್ಲಿ ನಾಪತ್ತೆಯಾಗಿ, ಮೇ.23ರಂದು ಕೊಲೆಯಾಗಿದ್ದರು. ಘಟನೆಗೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಲಾಗಿದೆ ಎಂದು ಬಾಂಗ್ಲಾದೇಶದ ಗೃಹ ಸಚಿವ ಅಸಾದುಜ್ಜೀಮಾನ್ ಖಾನ್ ತಿಳಿಸಿದ್ದಾರೆ.

Advertisements

ಪ್ರಕರಣವನ್ನು ತನಿಖೆಗೊಳಪಡಿಸಲು ಪಶ್ಚಿಮ ಬಂಗಾಳ ಪೊಲೀಸ್ ರಾಜ್ಯ ಸಿಐಡಿಗೆ ನೀಡಿತ್ತು.

“ಇದೊಂದು ಪೂರ್ವ ಯೋಜಿತ ಕೃತ್ಯವಾಗಿದೆ. ನೆರೆಯ ದೇಶದ ಸಂಸದರನ್ನು ಹತ್ಯೆ ಮಾಡಲು ದೊಡ್ಡ ಮೊತ್ತವಾದ ಸುಮಾರು 5 ಕೋಟಿ ರೂ.ಗಳನ್ನು ಸಂಸದರ ಸ್ನೇಹಿತನೊಬ್ಬ ಸುಪಾರಿ ನೀಡಿದ್ದ” ಎಂದು ಪೊಲೀಸ್‌ ಅಧಿಕಾರಿ ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಯುಪಿ-ಬಿಹಾರದಲ್ಲಿ ಧೂಳೆಬ್ಬಿಸಿದೆ ʼಖಟಾಖಟ್ ಖಟಾಖಟ್ʼ ಮಹಾಲಕ್ಷ್ಮೀ ಯೋಜನೆ

ಸುಪಾರಿ ನೀಡಿದ ಆರೋಪಿಯು ಅಮೆರಿಕ ಪ್ರಜೆಯಾಗಿದ್ದು, ಕೋಲ್ಕತ್ತಾದಲ್ಲಿ ಸ್ವಂತ ಪ್ಲಾಟ್‌ ಹೊಂದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಿಐಡಿ ಪೊಲೀಸರು ಕೋಲ್ಕತ್ತಾದ ಹೊರವಲಯದಲ್ಲಿರುವ ಆರೋಪಿ ಅಪಾರ್ಟ್‌ಮೆಂಟ್ ಬಳಿ ಕೆಲೆಯಾದ ಸಂಸದರ ರಕ್ತದ ಕಲೆಗಳನ್ನು ಪತ್ತೆ ಹಚ್ಚಿದ್ದಾರೆ. ಭಾರತದಲ್ಲಿ ಚಿಕಿತ್ಸೆ ಪಡೆಯಲು ಬಂಧಿದ್ದ ಬಾಂಗ್ಲಾದೇಶದ ಸಂಸದರಾದ ಅನ್ವರೂಲ್ ಅಜೀಮ್ ಅನರ್ ಮೇ.13 ರಂದು ನಾಮತ್ತೆಯಾಗಿದ್ದರು. ನಮ್ಮ ಫಾರೆನ್ಸಿಕ್‌ ತಂಡ ಅಪರಾಧ ನಡೆದ ಸ್ಥಳದಲ್ಲಿ ಪರಿಶೀಲನೆ ನಡೆಸುತ್ತಿದೆ” ಎಂದು ಸಿಐಡಿ ವಿಭಾಗದ ಐಜಿ ಅಖಿಲೇಶ್ ಚತುರ್ವೇದಿ ತಿಳಿಸಿದ್ದಾರೆ.

ಅನ್ವರೂಲ್‌ ಅವರು ವೈದ್ಯಕೀಯ ಚಿಕಿತ್ಸೆಗೆಂದು ಮೇ 13ರಂದು ಕೋಲ್ಕತ್ತಾಗೆ ಆಗಮಿಸಿದ ನಂತರ ನಾಪತ್ತೆಯಾಗಿದ್ದರು. ಪರಿಚಿತರನ್ನು ಭೇಟಿ ಮಾಡಲು ತೆರಳಿದ್ದವರು ವಾಪಸಾಗಿರಲಿಲ್ಲ. ನಂತರ ಅವರು ನಾಪತ್ತೆಯ ಬಗ್ಗೆ ಸಂಸದರ ಸ್ನೇಹಿತರು ಪೊಲೀಸರಿಗೆ ದೂರು ನೀಡಿದ್ದರು.

ಅನ್ವರೂಲ್‌ ಅವರ ದೇಹ ಛಿದ್ರಗೊಂಡಿದ್ದು,ಸಂಜೀವಾ ಗಾರ್ಡನ್‌ನ ಅಪಾರ್ಟ್‌ಮೆಂಟ್‌ವೊಂದರಲ್ಲಿ ಪೊಲೀಸರು ಪತ್ತೆ ಹಚ್ಚಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭಾರತೀಯರು ಸೇರಿ 5.5 ಕೋಟಿ ವಿದೇಶಿಗರ ವೀಸಾಗಳ ಮರು ಪರಿಶೀಲನೆಗೆ ಟ್ರಂಪ್ ಆಡಳಿತ ನಿರ್ಧಾರ

ಅಮೆರಿಕಾದಲ್ಲಿ ವೀಸಾ ಹೊಂದಿರುವ 5.5 ಕೋಟಿ ವಿದೇಶಿಗರನ್ನು ಅವರ ದಾಖಲೆಗಳಲ್ಲಿ ಯಾವುದೇ...

ವಿವಾದಾತ್ಮಕ ಯೂಟ್ಯೂಬರ್ ಎಲ್ವಿಶ್ ಮನೆ ಮೇಲೆ ಗುಂಡಿನ ದಾಳಿ: ಎನ್‌ಕೌಂಟರ್ ಮಾಡಿ ಆರೋಪಿ ಬಂಧನ

ಬಲಪಂಥೀಯ, ವಿವಾದಾತ್ಮಕ ಯೂಟ್ಯೂಬರ್ ಮತ್ತು ಬಿಗ್ ಬಾಸ್ ವಿಜೇತ ಎಲ್ವಿಶ್ ಯಾದವ್‌...

ಉತ್ತರಾಖಂಡ | ಕಪಾಳ ಮೋಕ್ಷ ಮಾಡಿದ ಶಿಕ್ಷಕನಿಗೆ ಗುಂಡು ಹಾರಿಸಿದ ವಿದ್ಯಾರ್ಥಿ

ತರಗತಿಯಲ್ಲಿ ಕಪಾಳ ಮೋಕ್ಷ ಮಾಡಿದ ಕಾರಣಕ್ಕೆ ಕುಪಿತಗೊಂಡ ವಿದ್ಯಾರ್ಥಿಯೊಬ್ಬ ತನ್ನ ಶಿಕ್ಷಕನ...

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

Download Eedina App Android / iOS

X