ರಾಮೇಶ್ವರಂ ಕೆಫೆಯಲ್ಲಿ ಅವಧಿ ಮೀರಿದ ಆಹಾರ ಪದಾರ್ಥಗಳು: ಆಹಾರ ಗುಣಮಟ್ಟ ಇಲಾಖೆ ದಾಳಿ

Date:

Advertisements

ಬೆಂಗಳೂರು ಮೂಲದ ಹೋಟೆಲ್‌ ರಾಮೇಶ್ವರಂ ಕೆಫೆ ಹೈದರಾಬಾದ್‌ನ ಮೇದಾಪುರ್‌ ಶಾಖೆಯ ಮೇಲೆ ಆಹಾರ ಗುಣಮಟ್ಟ ಇಲಾಖೆ ದಾಳಿ ನಡೆಸಿದ್ದು, ಅವಧಿ ಮೀರಿದ ಆಹಾರ ಪದಾರ್ಥಗಳು, ಯಾವುದೇ ಕಂಪನಿಯ ಗುರುತು ಇಲ್ಲದ ಆಹಾರ ಪಾದಾರ್ಥಗಳು ಕಂಡುಬಂದಿವೆ.

ಆಹಾರ ಗುಣಮಟ್ಟ ಇಲಾಖೆಯು ನಡೆಸಿದ ದಾಳಿಯಲ್ಲಿ ಅವಧಿ ಮೀರಿದ 100 ಕೆಜಿ ಉದ್ದಿನ ಬೇಳೆ, 10 ಕೆ ಜಿ ಮೊಸರು ಹಾಗೂ 8 ಲೀಟರ್‌ ಹಾಲು ಪತ್ತೆಯಾಗಿದೆ. ದಾಳಿಯ ಸಂದರ್ಭದಲ್ಲಿ 450 ಕೆಜಿ ಯಾವುದೇ ಕಂಪನಿಯ ಲೇಬಲ್‌ ಹೊಂದಿರದ ಕಚ್ಚಾ ಅಕ್ಕಿ, 20 ಕೆಜಿ ಅಲಸಂದೆ ಕಾಳು ಹಾಗೂ 300 ಕೆಜಿ ಬೆಲ್ಲವನ್ನು ಕೂಡ ವಶಪಡಿಸಿಕೊಳ್ಳಲಾಗಿದೆ.

ದಾಳಿ ನಡೆಸುವ ಸಂದರ್ಭದಲ್ಲಿ ರಾಮೇಶ್ವರ ಕಫೆಯಲ್ಲಿ ಆಹಾರ ನಿರ್ವಹಣೆಗಾಗಿ ವೈದ್ಯಕೀಯ ದೇಢೀಕರಣ ಪ್ರಮಾಣಪತ್ರ ಕೂಡ ಸಲ್ಲಿಸಲಾಗಿಲ್ಲ. ಕಸದ ಡಬ್ಬಿಯನ್ನು ಕೂಡ ಸರಿಯಾಗಿ ಮುಚ್ಚಿರಲಾಗಿರಲಿಲ್ಲ.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬರವೇ ಬರಲಿ, ನೆರೆಯೇ ಇರಲಿ, ಭರವಸೆಗಳಿಗೆ ಬರವಿಲ್ಲ

ಆಹಾರ ಗುಣಮಟ್ಟ ಇಲಾಖೆಯ ಅಧಿಕಾರಿಗಳು ಇಂದು ಹೈದರಾಬಾದ್‌ನ ಹಲವು ಕಡೆಗಳಲ್ಲಿರುವ ಹೋಟಲ್‌ಗಳ ಮೇಲೆ ದಾಳಿ ನಡೆಸಿದ್ದು, ಬಹುತೇಕ ಹೆಸರುವಾಸಿಯಾದ ಹೋಟಲ್‌ಗಳಲ್ಲಿ ಸ್ವಚ್ಛತೆ ಗುಣಮಟ್ಟವನ್ನು ಕಾಯ್ದುಕೊಂಡಿರಲಿಲ್ಲ. ಸ್ವಚ್ಛತೆ ಕಾಯ್ದುಕೊಳ್ಳದ ಹೋಟಲ್‌ಗಳ ಮಾಲೀಕರಿಗೆ ನೋಟಿಸ್‌ ಜಾರಿಗೊಳಿಸಲಾಗಿದೆ.

ಬೆಂಗಳೂರು ಮೂಲದ ರಾಮೇಶ್ವರಂ ಕೆಫೆ ಈ ವರ್ಷದ ಜನವರಿಯಲ್ಲಿ ಹೈದರಾಬಾದ್‌ನ ಮೇದಾಪುರ ಪ್ರದೇಶದಲ್ಲಿ ತನ್ನ ಶಾಖೆಯನ್ನು ಆರಂಭಿಸಿತ್ತು.

ಇತ್ತೀಚಿಗೆ ಮಾರ್ಚ್‌ 1 ರಂದು ಬೆಂಗಳೂರಿನ ಕುಂದಲಹಳ್ಳಿ ಶಾಖೆಯ ರಾಮೇಶ್ವರಂ ಕಫೆಯಲ್ಲಿ ಬಾಂಬ್‌ ಸ್ಫೋಟವುಂಟಾಗಿ 10 ಮಂದಿ ಗಾಯಗೊಂಡಿದ್ದರು. ಘಟನೆಗೆ ಕಾರಣರಾದವರನ್ನು ಎನ್‌ಐಎ ಬಂಧಿಸಿತ್ತು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದಿ ನಾಯಿಗಳಿಗೆ ಲಸಿಕೆ ಹಾಕಿದ ನಂತರ ಅದೇ ಸ್ಥಳಕ್ಕೆ ತಂದು ಬಿಡಬೇಕು: ಸುಪ್ರೀಂ ಕೋರ್ಟ್‌

ಬೀದಿ ನಾಯಿಗಳಿಗೆ ಸಂಬಂಧಿಸಿದ್ದಂತೆ ಆಗಸ್ಟ್ 11ರ ಆದೇಶವನ್ನು ಮಾರ್ಪಡಿಸಿದ ಸುಪ್ರೀಂ...

ವಿವಾದಾತ್ಮಕ ಯೂಟ್ಯೂಬರ್ ಎಲ್ವಿಶ್ ಮನೆ ಮೇಲೆ ಗುಂಡಿನ ದಾಳಿ: ಎನ್‌ಕೌಂಟರ್ ಮಾಡಿ ಆರೋಪಿ ಬಂಧನ

ಬಲಪಂಥೀಯ, ವಿವಾದಾತ್ಮಕ ಯೂಟ್ಯೂಬರ್ ಮತ್ತು ಬಿಗ್ ಬಾಸ್ ವಿಜೇತ ಎಲ್ವಿಶ್ ಯಾದವ್‌...

ಉತ್ತರಾಖಂಡ | ಕಪಾಳ ಮೋಕ್ಷ ಮಾಡಿದ ಶಿಕ್ಷಕನಿಗೆ ಗುಂಡು ಹಾರಿಸಿದ ವಿದ್ಯಾರ್ಥಿ

ತರಗತಿಯಲ್ಲಿ ಕಪಾಳ ಮೋಕ್ಷ ಮಾಡಿದ ಕಾರಣಕ್ಕೆ ಕುಪಿತಗೊಂಡ ವಿದ್ಯಾರ್ಥಿಯೊಬ್ಬ ತನ್ನ ಶಿಕ್ಷಕನ...

ಟ್ರಾಫಿಕ್ ದಂಡಗಳಿಗೆ ಶೇ. 50 ರಿಯಾಯಿತಿ: ಬೆಂಗಳೂರು ಸಂಚಾರ ಪೊಲೀಸರ ಘೋಷಣೆ

ಬೆಂಗಳೂರು ಸಂಚಾರ ಪೊಲೀಸರು (ಬಿಟಿಪಿ) ಗುರುವಾರ ಬಾಕಿ ಇರುವ ಟ್ರಾಫಿಕ್ ದಂಡಗಳ...

Download Eedina App Android / iOS

X