ಚುನಾವಣಾ ತಂತ್ರಗಾರ ಪ್ರಶಾಂತ್ ಕಿಶೋರ್ ‘ಬಿಜೆಪಿ ಏಜೆಂಟ್’ : ತೇಜಸ್ವಿ ಯಾದವ್

Date:

Advertisements

ಚುನಾವಣಾ ತಂತ್ರಗಾರ ಪ್ರಶಾಂತ್ ಕಿಶೋರ್ ಅವರನ್ನು ‘ಬಿಜೆಪಿ ಏಜೆಂಟ್’ ಎಂದು ಆರ್‌ಜೆಡಿ ನಾಯಕ, ಬಿಹಾರದ ಮಾಜಿ ಉಪಮುಖ್ಯಮಂತ್ರಿ ತೇಜಸ್ವಿ ಪ್ರಸಾದ್ ಯಾದವ್ ಕರೆದಿದ್ದಾರೆ.

ಈ ಬಗ್ಗೆ ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿದ ತೇಜಸ್ವಿ ಸೂರ್ಯ, “ಬಿಜೆಪಿ ಚುನಾವಣೆಯಲ್ಲಿ ಸೋಲುತ್ತಿದೆ. ಈಗ ಬಿಜೆಪಿ ಪರವಾಗಿ ವಾತಾವರಣ ಸೃಷ್ಟಿ ಮಾಡಲೆಂದು ಮೂರ್ನಾಲ್ಕು ಸುತ್ತಿನ ಮತದಾನದ ನಂತರ ಕಿಶೋರ್ ಅವರನ್ನು ಬಿಜೆಪಿ ಕರೆಸಿಕೊಂಡಿದೆ” ಎಂದು ಆರೋಪಿಸಿದರು.

“ನನ್ನ ಚಿಕ್ಕಪ್ಪ (ನಿತೀಶ್ ಕುಮಾರ್) ಕೂಡ ಅಮಿತ್ ಶಾ ಆದೇಶದ ಮೇರೆಗೆ ಪ್ರಶಾಂತ್ ಕಿಶೋರ್‌ ಅವರನ್ನು ಜೆಡಿಯುನ ರಾಷ್ಟ್ರೀಯ ಉಪಾಧ್ಯಕ್ಷನಾಗಿ ನೇಮಕ ಮಾಡಿರುವುದಾಗಿ ಹೇಳಿದ್ದರು. ಈವರೆಗೂ ಶಾ ಅಥವಾ ಪ್ರಶಾಂತ್ ಕಿಶೋರ್ ಈ ಆರೋಪವನ್ನು ಅಲ್ಲಗಳೆದಿಲ್ಲ. ಪ್ರಶಾಂತ್ ಕಿಶೋರ್ ಮೊದಲಿನಿಂದಲೂ ಬಿಜೆಪಿಯಲ್ಲೇ ಇದ್ದಾರೆ. ಅವರು ಯಾವ ಪಕ್ಷಕ್ಕೆ ಸೇರಿದರೂ ಅದು ನಾಶವಾಗುತ್ತದೆ” ಎಂದು ಹೇಳಿದ್ದಾರೆ.

Advertisements

ಇದನ್ನು ಓದಿದ್ದೀರಾ?  ಚುನಾವಣಾ ತಂತ್ರಗಾರ ಪ್ರಶಾಂತ್ ಕಿಶೋರ್ ಆದಾಯವೆಷ್ಟು? ಇಲ್ಲಿದೆ ಆಸ್ತಿ ವಿವರ

ಕಿಶೋರ್ 2019ರ ಲೋಕಸಭಾ ಚುನಾವಣೆಗೂ ಕೆಲವು ತಿಂಗಳುಗಳ ಮುನ್ನ ಜೆಡಿಯು ಸೇರ್ಪಡೆಯಾಗಿದ್ದರು. ಆದರೆ 2020ರಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಕುರಿತು ಜೆಡಿಯು ನಿಲುವನ್ನು ಟೀಕಿಸಿದ ಪ್ರಶಾಂತ್‌ರನ್ನು ಜೆಡಿಯು ಪಕ್ಷದಿಂದ ತೆಗೆದುಹಾಕಿದೆ.

“ಪ್ರಶಾಂತ್‌ ಕಿಶೋರ್‌ಗೆ ಎಲ್ಲಿಂದ ಹಣ ಬರುತ್ತಿದೆಯೋ ಗೊತ್ತಿಲ್ಲ. ಪ್ರತಿ ವರ್ಷ ಬೇರೆ ಬೇರೆ ಜನರೊಂದಿಗೆ ಕೆಲಸ ಮಾಡುತ್ತಾರೆ. ನಿಮ್ಮ ಡೇಟಾವನ್ನು ಪಡೆದು ಅದನ್ನು ಇನ್ನೊಬ್ಬರಿಗೆ ನೀಡುತ್ತಾರೆ. ಪ್ರಶಾಂತ್ ಕೇವಲ ಬಿಜೆಪಿ ಏಜೆಂಟ್ ಅಲ್ಲ, ಬಿಜೆಪಿ ಮನಸ್ಥಿತಿಯನ್ನೂ ಹೊಂದಿದ್ದಾರೆ, ಬಿಜೆಪಿ ಸಿದ್ಧಾಂತ ಅನುಸರಿಸುತ್ತಾರೆ. ಪ್ರಶಾಂತ್‌ರ ಈ ತಂತ್ರದ ಭಾಗವಾಗಿ ಬಿಜೆಪಿ ಅವರಿಗೆ ಹಣ ನೀಡುತ್ತಿದೆ” ಎಂದು ತೇಜಸ್ವಿ ಆರೋಪಿಸಿದ್ದಾರೆ.

ಇದನ್ನು ಓದಿದ್ದೀರಾ?  Viral Video| ಕರಣ್ ಥಾಪರ್ ಪ್ರಶ್ನೆಗೆ ತಬ್ಬಿಬ್ಬಾದ ಪ್ರಶಾಂತ್ ಕಿಶೋರ್; ಬೆವರಿಳಿಸಿದ ನೆಟ್ಟಿಗರು

ಬಿಜೆಪಿಯು ಪ್ರಶಾಂತ್ ಕಿಶೋರ್ ಅವರನ್ನು ತನ್ನ ರಾಷ್ಟ್ರೀಯ ವಕ್ತಾರರನ್ನಾಗಿ ನೇಮಿಸಿದೆ ಎಂಬ ನಕಲಿ ಸ್ಕ್ರೀನ್‌ಶಾಟ್ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬೆನ್ನಲ್ಲೇ ಆರ್‌ಜೆಡಿ ನಾಯಕ ಪ್ರಶಾಂತ್ ಕಿಶೋರ್ ವಿರುದ್ಧ ಈ ಆರೋಪ ಮಾಡಿದ್ದಾರೆ.

ಇನ್ನು ಇತ್ತೀಚೆಗೆ ಸಂದರ್ಶನದ ವೇಳೆ ಪತ್ರಕರ್ತ ಕರಣ್ ಥಾಪರ್ ಮತ್ತು ರಾಜಕೀಯ ತಂತ್ರಜ್ಞ ಪ್ರಶಾಂತ್ ಕಿಶೋರ್ ನಡುವೆ ನಡೆದ ವಾಗ್ವಾದದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಸಂದರ್ಶನದ ವೇಳೆ ಕರಣ್ ಪ್ರಶ್ನೆಗೆ ಉತ್ತರಿಸಲಾಗದೆ ತಬ್ಬಿಬ್ಬಾದ ಪ್ರಶಾಂತ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕರಣ್ ಥಾಪರ್ ಅವರು ಪ್ರಶಾಂತ್ ಕಿಶೋರ್ ಬೆವರಿಳಿಸಿದ್ದಾರೆ ಎಂದು ನೆಟ್ಟಿಗರು ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಈದಿನ ವಿಶೇಷ | ಧರ್ಮಸ್ಥಳ: ಉತ್ತರ ನೀಡಿದ ಗೃಹ ಸಚಿವರು; ಈಗಲೂ ಉಳಿದ ಹಲವು ಪ್ರಶ್ನೆಗಳು

ಸದನದಲ್ಲಿ ನಿಂತು ಷಡ್ಯಂತ್ರ ಎನ್ನುವವರಿಗೆ, ಎಸ್‌ಐಟಿ ರಚನೆಯಾಗಿದ್ದೇಕೆ? ಕಾನೂನು ಏನು ಹೇಳುತ್ತೆ?...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

Download Eedina App Android / iOS

X