ಕ್ರಿಸ್‌ಮಸ್‌ಗೆ ತೆರೆ ಕಾಣಲಿದೆ ದರ್ಶನ್ ಅಭಿನಯದ ‘ಡೆವಿಲ್’

Date:

Advertisements

ನಟ ದರ್ಶನ್ ಅಭಿನಯದ, ಪ್ರಕಾಶ್ ವೀರ್ ನಿರ್ದೇಶನದ ನಿರೀಕ್ಷಿತ ಸಿನಿಮಾ ‘ಡೆವಿಲ್ – ದಿ ಹೀರೋ’ ಅಕ್ಟೋಬರ್‌ನಲ್ಲಿ ಬಿಡುಗಡೆಯಾಗಲಿದೆ ಎಂದು ಹೇಳಲಾಗಿತ್ತು. ಆದರೆ, ದರ್ಶನ್‌ ಗಾಯಗೊಂಡಿದ್ದ ಪರಿಣಾಮ, ಚಿತ್ರೀಕರಣ ಸ್ಥಗಿತಗೊಂಡಿತ್ತು. ಇದೀಗ, ಮತ್ತೆ ಜೂನ್ 1ರಿಂದ ಚಿತ್ರೀಕರಣ ಪುನರಾರಂಭವಾಗಲಿದ್ದು, ನಿರ್ಮಾಪಕರು ಸಿನಿಮಾದ ಬಿಡುಗಡೆ ಕ್ರಿಸ್‌ಮಸ್‌ಗೆ ಮುಂದೂಡಿದ್ದಾರೆ.

ಚಿತ್ರೀಕರಣವು ಮತ್ತೆ ಆರಂಭವಾಗಿದೆ. ಕ್ರಿಸ್‌ಮಸ್‌ ಹಬ್ಬದ ಸಮಯದಲ್ಲಿ ಸಿನಿಮಾ ಬಿಡುಗಡೆ ಮಾಡಲು ಯೋಜಿಸಲಾಗಿದೆ ಎಂದು ಸ್ವತಃ ದರ್ಶನ್ ಅವರೇ ಸಾಮಾಜಿಕ ಮಾಧ್ಯಮದಲ್ಲಿ ಮಾಹಿತಿ ನೀಡಿದ್ದಾರೆ.

‘ಡೆವಿಲ್ – ದಿ ಹೀರೋ’ ಡಿಸೆಂಬರ್‌ನಲ್ಲಿ ಬಿಡುಗಡೆಯಾಗಲಿದೆ. 2024ರ ಕ್ರಿಸ್‌ಮಸ್‌ಅನ್ನು (ಡಿಸೆಂಬರ್ 25) ಬಿಡುಗಡೆಯ ಹೊಸ ದಿನಾಂಕವಾಗಿದೆ ಎಂದು ಅವರು ಹೇಳಿದ್ದಾರೆ.

Advertisements

ಕುತೂಹಲಕಾರಿಯಾಗಿ, ದರ್ಶನ್‌ ಅವರ ಹಿಂದಿನ ಚಿತ್ರ ಕಾಟೇರಾ ಕೂಡ 2023ರ ಕ್ರಿಸ್‌ಮಸ್ ಸಮಯದಲ್ಲೇ ಬಿಡುಗಡೆಯಾಗಿತ್ತು. ಬಾಕ್ಸ್‌ ಆಫೀಸ್‌ನಲ್ಲಿ ಯಶಸ್ಸಿ ಕಾಣುವ ಜೊತೆಗೆ, ಪ್ರೇಕ್ಷಕರ ಮನ ಗೆದ್ದಿತ್ತು.

‘ಡೆವಿಲ್’ ಸಿನಿಮಾ ಘೋಷಣೆ ನಂತರ ಚಿತ್ರದ ಆಡಿಯೋ ಹಕ್ಕುಗಳನ್ನು ಈಗಾಗಲೇ ‘ಸರೆಗಮ ಸೌತ್‌’ ಭಾರಿ ಬೆಲೆಗೆ ಪಡೆದುಕೊಂಡಿದೆ. ಡೆವಿಲ್ ಸಂಗೀತ ನಿರ್ದೇಶಕ ಮತ್ತು ಛಾಯಾಗ್ರಾಹಕರಾಗಿ ಅಜನೀಶ್ ಲೋಕನಾಥ್ ಮತ್ತು ಸುಧಾಕರ್ ಎಸ್ ರಾಜ್ ಇದ್ದಾರೆ. ಮಹೇಶ್ ಮಂಜ್ರೇಕರ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡರೆ, ರಚನಾ ರೈ ನಾಯಕಿ ನಟಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಧರ್ಮಸ್ಥಳ | 20 ವರ್ಷಗಳ ಅಸಹಜ ಸಾವು ಪ್ರಕರಣ; ತನಿಖೆ ತೀವ್ರಗೊಳಿಸಲು ಸಮಾನ ಮನಸ್ಕರ ಆಗ್ರಹ

ಬೆಂಗಳೂರಿನ ಪ್ರಮುಖ ಸಮಾನ ಮನಸ್ಕ ಸಂಘಟನೆಗಳು ಗುರುವಾರ ಸಭೆ ಸೇರಿ ಧರ್ಮಸ್ಥಳ...

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

Download Eedina App Android / iOS

X