ಬೆಂಗಳೂರು | ಐಸಿಯುನಲ್ಲಿದ್ದ ರೋಗಿಗೆ ರಕ್ತ ಬರುವ ಹಾಗೆ ಥಳಿಸಿದ ಕೆ.ಸಿ.ಜನರಲ್ ಆಸ್ಪತ್ರೆ ಸಿಬ್ಬಂದಿ

Date:

Advertisements

ರಾಜ್ಯ ರಾಜಧಾನಿ ಬೆಂಗಳೂರಿನ ಕೆ.ಸಿ.ಜನರಲ್ ಆಸ್ಪತ್ರೆಯ ಐಸಿಯುನಲ್ಲಿದ್ದ ರೋಗಿಯೊಬ್ಬರಿಗೆ ಆಸ್ಪತ್ರೆ ಸಿಬ್ಬಂದಿ ರಕ್ತ ಬರುವ ಹಾಗೇ ಥಳಿಸಿದ ಘಟನೆ ನಡೆದಿದೆ.

ವೆಂಕಟೇಶ್ ಎಂಬ ರೋಗಿ ಥಳಿತಕ್ಕೊಳಗಾದವರು. ಇವರು ಬೆಂಗಳೂರಿನ ನೆಲಮಂಗಲದವರಾಗಿದ್ದು, ವಿಷ ಸೇವಿಸಿ ಐಸಿಯು ವಾರ್ಡ್ ಸೇರಿದ್ದರು. ಚಿಕಿತ್ಸೆಗಾಗಿ ವೆಂಕಟೇಶ್ ಐಸಿಯುನಲ್ಲಿ ಇರುವ ವೇಳೆ, ಆಸ್ಪತ್ರೆಯ ವಾರ್ಡ್‌ಬಾಯ್‌ ಧನಂಜಯ್ ಎಂಬಾತ ಆತನಿಗೆ ಹಿಗ್ಗಾಮುಗ್ಗಾ ಹೊಡೆದಿರುವ ಶಂಕೆ ವ್ಯಕ್ತವಾಗಿದೆ.

ರೋಗಿ ಚಿಕಿತ್ಸೆ ಪಡೆಯುವ ವೇಳೆ ಕೂಗಾಡಿದ ಎನ್ನುವ ಕಾರಣಕ್ಕೆ ಥಳಿಸಿದ್ದಾನೆ ಎನ್ನುವ ಆರೋಪ ಕೇಳಿ ಬಂದಿದೆ. ಗಾಯಾಳು ವೆಂಕಟೇಶ್ ಸಂಬಂಧಿಕರು ಆಸ್ಪತ್ರೆ ಸಿಬ್ಬಂದಿ ಬೇಜವಾಬ್ದಾರಿತನದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ವಿಷ ಕುಡಿದು ನಮ್ಮವರು ಆಸ್ಪತ್ರೆಗೆ ದಾಖಲಾಗಿದ್ದರು. ಈ ವೇಳೆ, ರೋಗಿ ಕೂಗಾಡುತ್ತಿದ್ದಾರೆ ಎಂದು ಆಸ್ಪತ್ರೆ ಸಿಬ್ಬಂದಿ ಧನಂಜಯ ಎಂಬಾತ ನಮ್ಮವ ಬಾಯಿ ಹಾಗೂ ಮೂಗಿನ ಮೇಲೆ ಹಲ್ಲೆ ಮಾಡಿದ್ದಾನೆ. ಈ ಬಗ್ಗೆ ಪೋಲಿಸರಿಗೂ ಸಹ ದೂರು ನೀಡಿದ್ದೇವೆ” ಎಂದು ರೋಗಿ ಸಂಬಂಧಿ ಲಲಿತ ಹೇಳಿದ್ದಾರೆ.

“ಮೇ 24ರಂದು ರಾತ್ರಿ 7.30ರ ಸುಮಾರಿಗೆ ಈ ಘಟನೆ ನಡೆದಿದೆ. ವೈದ್ಯರಿಗೂ ಸಹ ಮಾಹಿತಿ ನೀಡಿದ್ದೇವೆ. ಹಲ್ಲೆ ಮಾಡಿದ ವಾರ್ಡ್ ಬಾಯ್ ವಿರುದ್ಧ ಕ್ರಮ ಕೈಗೊಳ್ಳಬೇಕು. ಸಿಸಿಟಿವಿ ಕ್ಯಾಮೆರಾ ಪರಿಶೀಲಿಸುವಂತೆ ಹೇಳಿದರೆ, ಅದು ವರ್ಕ್ ಆಗುತ್ತಿಲ್ಲ. ಮೊದಲು ರೋಗಿ ಗುಣ ಆಗುವ ಕಡೆ ಗಮನವಹಿಸಿ ಅಂತಿದ್ದಾರೆ” ಎಂದು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಸರ್ಕಾರೇತರ ವಾಹನಗಳ ಮೇಲೆ ಸರ್ಕಾರಿ ಲಾಂಛನ, ಚಿಹ್ನೆ; 7 ವಿಶೇಷ ತಂಡ ರಚನೆ, ಕಾರ್ಯಾಚರಣೆಗಿಳಿದ ಇಲಾಖೆ

“ವಿಷ ಕುಡಿದ ಹಿನ್ನೆಲೆ ರೋಗಿಯೂ ಮೊದಲಿಗೆ ಆನೇಕಲ್ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆದು ಕೆ.ಸಿ.ಜನರಲ್ ಆಸ್ಪತ್ರೆಗೆ ಮೇ 22ರಂದು ಬಂದಿದ್ದಾರೆ. ನಮ್ಮ ಆಸ್ಪತ್ರೆಯಲ್ಲಿ ವೈದ್ಯರು ಉತ್ತಮವಾಗಿ ಚಿಕಿತ್ಸೆ ನೀಡಿದ್ದಾರೆ. ಸೂಕ್ಷ್ಮ ಚಿಕಿತ್ಸೆ ಕೊಡುವಾಗ ರೋಗಿಗಳು ಒಮ್ಮೊಮ್ಮೆ ವ್ಯತಿರಿಕ್ತವಾಗಿ ವರ್ತಿಸುತ್ತಾರೆ. ಅದರಲ್ಲೂ ಅವರು ತೀವ್ರ ನಿಗಾ ಘಟಕದಲ್ಲಿ ಇರುವುದರಿಂದ ಅವರನ್ನು ಕಂಟ್ರೋಲ್ ಮಾಡುವುದು ಕಷ್ಟ” ಎಂದು ಕೆ.ಸಿ ಜನರಲ್ ಆಸ್ಪತ್ರೆ ವೈದ್ಯಕೀಯ ಅಧೀಕ್ಷಕಿ ಇಂದಿರಾ ಕಬಾಡೆ ಹೇಳಿದ್ದಾರೆ.

“ನಮ್ಮ ಸಿಬ್ಬಂದಿ ಹಲ್ಲೆ ಮಾಡಿದ್ದಾರೆ ಎಂದು ನಂಬುವುದಕ್ಕೆ ಸಾಧ್ಯ ಇಲ್ಲ. ಸಿಸಿಟಿವಿ ಸಹ ಸರಿಯಾಗಿ ಕಾರ್ಯ ನಿರ್ವಹಿಸುತ್ತಿಲ್ಲ. ಅವರ ಬಳಿ ಹೋಗಿ ಸಮಸ್ಯೆ ಕೇಳಿದ್ದೇನೆ. ಸಿಬ್ಬಂದಿ ಹಲ್ಲೆ ಮಾಡಿದ್ದಾರೆ ಎಂಬುವುದು ಸುಳ್ಳು. ಸಿಬ್ಬಂದಿ ಹಲ್ಲೆ ಮಾಡಿದ್ದರೇ ಆತನ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ. ಮೇಲ್ನೋಟಕ್ಕೆ ಹಲ್ಲೆ ಆಗಿದೆ ಎಂದು ಕಾಣಿತ್ತಿಲ್ಲ” ಎಂದಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೊಪ್ಪಳ | ಉದಯೋನ್ಮುಖ ಕವಿಗಳು ಕವಿತೆ ರಚಿಸಲು ಆದ್ಯತೆ ನೀಡಬೇಕು: ವಿ. ಕುಲಪತಿ ಮಲ್ಲಿಕಾ ಘಂಟಿ

'ಸಾಹಿತ್ಯದ ಕೆಲಸ ಸ್ಥಗಿತಗೊಂಡ ಜನರ ಬದುಕನ್ನು ಚಲನಶೀಲನಗೊಳಿಸುವಂತದ್ದಾಗಿದ್ದು, ಈ ದಿಸೆಯಲ್ಲಿ ಉದಯೋನ್ಮುಖ...

ಸೋಜುಗಾದ ಸೂಜು ಮಲ್ಲಿಗೆ ಹುಡುಗಿ ಹಾಡು : ಇಮ್ಮಡಿಯಾದ ಪ್ರೇಕ್ಷಕರ ಉತ್ಸಾಹ

 ಕಳೆದ 10 ದಿನಗಳಿಂದ ದಸರಾ ಉತ್ಸವ ಸಂಭ್ರಮದಲ್ಲಿ ಮುಳುಗಿದ್ದ ಪ್ರೇಕ್ಷಕರ ಉತ್ಸಾಹ...

ತುಮಕೂರು ದಸರಾ : ಸಚಿವರಿಂದ ವಿಶೇಷ ಪೂಜೆ

ತುಮಕೂರು ದಸರಾ ಉತ್ಸವದ ಕಡೆಯ ದಿನವಾದ ವಿಜಯದಶಮಿಯಂದು ಗೃಹ ಹಾಗೂ ಜಿಲ್ಲಾ...

ಯುವಪರಿವರ್ತನೆ ಯಾತ್ರೆ: ಬಾಗಲಕೋಟೆಯಲ್ಲಿ ಚಾಲನೆ

ಯುವಜನರನ್ನು ರಾಜ್ಯದ ಅಭಿವೃದ್ಧಿಯತ್ತ ಚಿತ್ತಹರಿಸಲು, ಪ್ರಜೆಗಳ ಆರೋಗ್ಯ, ಶಿಕ್ಷಣ, ಸಬಲೀಕರಣ, ಉದ್ಯೋಗದ...

Download Eedina App Android / iOS

X