ಬಂಗಾಳದಲ್ಲಿ ಇವಿಎಂಗಳ ಮೇಲೆ ಬಿಜೆಪಿ ಟ್ಯಾಗ್; ಟಿಎಂಸಿ ಆರೋಪ – ಚುನಾವಣಾ ಆಯೋಗದ ಉತ್ತರವೇನು? 

Date:

Advertisements

ಪಶ್ಚಿಮ ಬಂಗಾಳದ ಬಂಕುರಾ ಜಿಲ್ಲೆಯಲ್ಲಿ ಬಿಜೆಪಿ ಟ್ಯಾಗ್ ಇರುವ ಇವಿಎಂಗಳನ್ನು ಬಳಸಲಾಗಿದೆ ಎಂದು ಟಿಎಂಸಿ ಆರೋಪಿಸಿದೆ. ಆದರೆ, ಈ ಆರೋಪವನ್ನು ಚುನಾವಣಾ ಆಯೋಗ ಅಲ್ಲಗಳೆದಿದೆ.

ಬಿಜೆಪಿಯ ಹೆಸರಿರುವ ಪೇಪರ್ ಟ್ಯಾಗ್‌ಗಳಿರುವ ಇವಿಎಂಗಳ ಎರಡು ಚಿತ್ರಗಳನ್ನು ಟಿಎಂಸಿ, “ಇವಿಎಂಗಳನ್ನು ಟ್ಯಾಂಪರಿಂಗ್ ಮಾಡುವ ಮೂಲಕ ಮತಗಳನ್ನು ಬದಲಾಯಿಸಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪದೇ ಪದೇ ಹೇಳುತ್ತಿದ್ದಾರೆ. ಇದೀಗ, ಬಂಕುರಾದ ರಘುನಾಥಪುರದಲ್ಲಿ 5 ಇವಿಎಂಗಳಲ್ಲಿ ಬಿಜೆಪಿ ಟ್ಯಾಗ್‌ಗಳು ಕಂಡುಬಂದಿವೆ. ಚುನಾವಣಾ ಆಯೋಗ ತಕ್ಷಣವೇ ಇದನ್ನು ಪರಿಶೀಲಿಸಬೇಕು ಮತ್ತು ಕ್ರಮ ತೆಗೆದುಕೊಳ್ಳಬೇಕು” ಎಂದು ಒತ್ತಾಯಿಸಿದೆ.

ಆರೋಪಕ್ಕೆ ಪ್ರತಿಕ್ರಿಯಿಸಿದ ಚುನಾವಣಾ ಆಯೋಗ, “ಆಡಳಿತಾತ್ಮಕ ಪರಿಶೀಲನೆ ನಡೆಸುವಾಗ ಮತಗಟ್ಟೆ ವಿಳಾಸದ ಟ್ಯಾಗ್‌ಗಳಿಗೆ ಅಭ್ಯರ್ಥಿಗಳು ಮತ್ತು ಅವರ ಏಜೆಂಟ್‌ಗಳು ಸಹಿ ಮಾಡಿದ್ದಾರೆ. ಚುನಾವಣಾ ಕಾರ್ಯಾರಂಭದ ಸಮಯದಲ್ಲಿ ಬಿಜೆಪಿ ಅಭ್ಯರ್ಥಿಯ ಪ್ರತಿನಿಧಿ ಮಾತ್ರ ಕಚೇರಿಯಲ್ಲಿ ಇದ್ದುದ್ದರಿಂದ EVM ಮತ್ತು VVPATಗಳಿಗೆ ಅವರ ಸಹಿಯನ್ನು ತೆಗೆದುಕೊಳ್ಳಲಾಗಿದೆ” ಎಂದು ಹೇಳಿದೆ.

Advertisements

 

“ಆದಾಗ್ಯೂ, ಮತಗಟ್ಟೆ ಸಂಖ್ಯೆ 56, 58, 60, 61,62ರಲ್ಲಿ ಸ್ಥಳದಲ್ಲಿದ್ದ ಎಲ್ಲ ಏಜೆಂಟ್‌ಗಳ ಸಹಿಯನ್ನು ಮತದಾನದ ಸಮಯದಲ್ಲಿ ಪಡೆಯಲಾಗಿದೆ. ಕಾರ್ಯಾರಂಭದ ಸಮಯದಲ್ಲಿ ಚುನಾವಣಾ ಆಯೋಗದ  ಎಲ್ಲ ಮಾನದಂಡಗಳನ್ನು ಸರಿಯಾಗಿ ಅನುಸರಿಸಲಾಗಿದೆ. ಸಂಪೂರ್ಣವಾಗಿ ಸಿಸಿಟಿವಿ ಕವರೇಜ್ ಅಡಿಯಲ್ಲಿ ಕಾರ್ಯಾಚರಣೆ ನಡೆಸಲಾಗಿದೆ ಮತ್ತು ಅದನ್ನು ವೀಡಿಯೊಗ್ರಾಫ್ ಮಾಡಲಾಗಿದೆ” ಎಂದು ಆಯೋಗ ವಿವರಿಸಿದೆ.

ಪಶ್ಚಿಮ ಬಂಗಾಳದ 8 ಲೋಕಸಭಾ ಕ್ಷೇತ್ರಗಳಿಗೆ ಶನಿವಾರ ಆರನೇ ಹಂತದಲ್ಲಿ ಮತದಾನ ನಡೆದಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಬಿಐ ಅಧಿಕಾರಿಗಳಂತೆ ನಟಿಸಿ 2.3 ಕೋಟಿ ರೂ. ದೋಚಿದ್ದ ಗ್ಯಾಂಗ್: ಇಬ್ಬರ ಬಂಧನ

ಕೇಂದ್ರ ತನಿಖಾ ದಳ (ಸಿಬಿಐ) ಅಧಿಕಾರಿಗಳಂತೆ ನಟಿಸಿ ಉದ್ಯಮಿಯೊಬ್ಬರ ಕಚೇರಿಯಿಂದ ಗ್ಯಾಂಗ್...

ಬೀದಿ ನಾಯಿಗಳಿಗೆ ಲಸಿಕೆ ಹಾಕಿದ ನಂತರ ಅದೇ ಸ್ಥಳಕ್ಕೆ ತಂದು ಬಿಡಬೇಕು: ಸುಪ್ರೀಂ ಕೋರ್ಟ್‌

ಬೀದಿ ನಾಯಿಗಳಿಗೆ ಸಂಬಂಧಿಸಿದ್ದಂತೆ ಆಗಸ್ಟ್ 11ರ ಆದೇಶವನ್ನು ಮಾರ್ಪಡಿಸಿದ ಸುಪ್ರೀಂ...

ವಿವಾದಾತ್ಮಕ ಯೂಟ್ಯೂಬರ್ ಎಲ್ವಿಶ್ ಮನೆ ಮೇಲೆ ಗುಂಡಿನ ದಾಳಿ: ಎನ್‌ಕೌಂಟರ್ ಮಾಡಿ ಆರೋಪಿ ಬಂಧನ

ಬಲಪಂಥೀಯ, ವಿವಾದಾತ್ಮಕ ಯೂಟ್ಯೂಬರ್ ಮತ್ತು ಬಿಗ್ ಬಾಸ್ ವಿಜೇತ ಎಲ್ವಿಶ್ ಯಾದವ್‌...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

Download Eedina App Android / iOS

X