ಮಾಜಿ ಶಾಸಕ ಕೆ ರಘುಪತಿ ಭಟ್ ಬಿಜೆಪಿಯಿಂದ ಉಚ್ಚಾಟನೆ

Date:

Advertisements

ವಿಧಾನ ಪರಿಷತ್ ಟಿಕೆಟ್ ನೀಡದ ಕಾರಣಕ್ಕಾಗಿ ಬಿಜೆಪಿಯೊಳಗೆ ಬಂಡಾಯ ಎದ್ದು, ನೈಋತ್ಯ ಪದವೀಧರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಮಾಜಿ ಶಾಸಕ ಕೆ ರಘುಪತಿ ಭಟ್ ಅವರನ್ನು ಬಿಜೆಪಿ ಆರು ವರ್ಷಗಳ ಕಾಲ ಉಚ್ಚಾಟಿಸಿದೆ.

ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ್‌ ಪಾಟೀಲ್‌ ಅವರು ಉಚ್ಚಾಟನಾ ಆದೇಶ ಹೊರಡಿಸಿದ್ದು, ಈ ಆದೇಶದಲ್ಲಿ, “ಪಕ್ಷದ ಸೂಚನೆಯನ್ನು ಕಡೆಗಣಿಸಿ ವಿಧಾನ ಪರಿಷತ್ ಚುನಾವಣೆಗೆ ನೈಋತ್ಯ ಪದವೀಧರ ಕ್ಷೇತ್ರದಿಂದ ನಮ್ಮ ಪಕ್ಷದ ಅಧಿಕೃತ ಅಭ್ಯರ್ಥಿ ವಿರುದ್ಧವೇ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿ, ಪಕ್ಷಕ್ಕೆ ಮುಜುಗರ ತಂದಿದ್ದೀರಿ. ಇದು ಪಕ್ಷದ ಶಿಸ್ತು ಉಲ್ಲಂಘನೆಯಾಗಿದೆ. ತಮ್ಮನ್ನು ತಕ್ಷಣದಿಂದಲೇ ಪಕ್ಷದ ಎಲ್ಲ ಜವಾಬ್ದಾರಿಗಳಿಂದ ಮುಕ್ತಗೊಳಿಸಿ, ಆರು ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟಿಸಲಾಗಿದೆ” ಎಂದು ತಿಳಿಸಿದ್ದಾರೆ.

ಉಡುಪಿ ಬಿಜೆಪಿಯ ಮಾಜಿ ಶಾಸಕ ರಘುಪತಿ ಭಟ್‌ಗೆ ಬಿಜೆಪಿ ರಾಜ್ಯ ಶಿಸ್ತು ಸಮಿತಿ ನೋಟಿಸ್ ಎರಡು ದಿನದ ಹಿಂದೆಯೇ ನೋಟಿಸ್‌ ನೀಡಿ, 2 ದಿನದೊಳಗಾಗಿ ಸ್ಪಷ್ಟೀಕರಣ ನೀಡುವಂತೆ ಸೂಚನೆ ನೀಡಿತ್ತು.

Advertisements

ಕೆ ರಘುಪತಿ ಭಟ್‌

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಗಸ್ಟ್ 26ರಿಂದ ರಾಜ್ಯದಲ್ಲಿ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದಾದ್ಯಂತ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಆಗಸ್ಟ್ 26ರಿಂದ ಭಾರೀ ಮಳೆಯಾಗಲಿದೆ...

ಧರ್ಮಸ್ಥಳ ಪ್ರಕರಣ | ನನ್ನ ಬಂಧನ ರಾಜಕೀಯ ಪಿತೂರಿಯ ಭಾಗ: ಮಹೇಶ್ ಶೆಟ್ಟಿ ತಿಮರೋಡಿ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಸರ್ಕಾರದಿಂದ ನಷ್ಟ ಸರಿದೂಗಿಸಲಾಗದು, ರೈತರೇ ಕಷ್ಟಕ್ಕೆ ಒಗ್ಗಿಕೊಳ್ಳಬೇಕು: ಬಿಜೆಪಿ ನಾಯಕನ ಹೇಳಿಕೆಗೆ ತೀವ್ರ ಆಕ್ರೋಶ

ಇತ್ತೀಚಿಗೆ ಆದ ಅತಿವೃಷ್ಟಿಯಿಂದ ರೈತರಿಗೆ ಆಗಿರುವ ನಷ್ಟಕ್ಕೆ ಸರ್ಕಾರ ಪರಿಹಾರ ನೀಡಲು...

Download Eedina App Android / iOS

X