ಚಿಕ್ಕಬಳ್ಳಾಪುರ | ಸಾಮೂಹಿಕ ನಮಾಜ್‌ಗೆ ಆಗಮಿಸಿದ ಸಚಿವ ಡಾ. ಕೆ ಸುಧಾಕರ್‌ಗೆ ವಿರೋಧ

Date:

Advertisements
  • ಪೋಷಾಕು, ಟೋಪಿ ಧರಿಸಲು ನಿರಾಕರಿಸಿದ ಸಚಿವ
  • ರಂಜಾನ್ ಸಭೆಯಲ್ಲಿ ಮುಜುಗರಕ್ಕೊಳಗಾದ ಸುಧಾಕರ್

ರಂಜಾನ್‌ ಹಬ್ಬದ ಪ್ರಯುಕ್ತ ಸಾಮೂಹಿಕ ನಮಾಜ್‌ಗೆ ಆಗಮಿಸಿದ ಸಚಿವ ಡಾ. ಕೆ ಸುಧಾಕರ್‌ ವಿರುದ್ಧ ಮುಸ್ಲಿಂ ಬಾಂಧವರು ಅಸಮಧಾನ ವ್ಯಕ್ತಪಡಿಸಿದ್ದಾರೆ.

ಚಿಕ್ಕಬಳ್ಳಾಪುರ ನಗರದ ದಿನ್ನೆಹೊಸಳ್ಳಿ ರಸ್ತೆಯಲ್ಲಿರುವ ಈದ್ಗಾ ಮೈದಾನದಲ್ಲಿ ರಂಜಾನ್‌ ಹಬ್ಬದ ಪ್ರಯುಕ್ತ ಸಾಮೂಹಿಕ ನಮಾಜ್‌ ಮಾಡುತಿದ್ದ ಸಂದರ್ಭದಲ್ಲಿ ಪ್ರತಿ ಬಾರಿ ಶಾಸಕ ಕೆ ಸುಧಾಕರ್‌ ಅವರು ಮುಸ್ಲಿಮರ ಟೋಪಿ ಹಾಕಿಕೊಂಡು ಪ್ರಾರ್ಥನೆಯಲ್ಲಿ ಬಾಗವಹಿಸುತಿದ್ದರು.

ಈ ಭಾರಿ ನಮಾಜ್‌ನಲ್ಲಿ ಭಾಗವಹಿಸಿ ಯಾವುದೇ ಪೋಷಾಕು, ಟೋಪಿ ಧರಿಸಲು ನಿರಾಕರಿಸಿದ್ದಾರೆ. ಸಚಿವರ ಈ ವರ್ತನೆಯಿಂದ ಮುಸ್ಲಿಮರು ವಿರೋಧ ವ್ಯಕ್ತಪಡಿಸಿದ್ದಲ್ಲದೆ ಅಕ್ಷೇಪಣೆಯನ್ನೂ ವ್ಯಕ್ತಪಡಿಸಿದ್ದಾರೆ.

Advertisements

ಈ ವೇಳೆ ಕೆಲವರು ಭಾರೀ ವಿರೋಧ ವ್ಯಕ್ತಪಡಿಸಿದ್ದರಿಂದ ಸುಧಾಕರ ಅವರಿಗೆ ಮುಜುಗರವೂ ಆಗಿದೆ. ನಂತರ ಬೆಂಬಲಿಗರು ಮತ್ತು ಕೆಲವು ಮುಸ್ಲಿಂ ಯುವಕರ ನಡುವೆ ವಾಗ್ವಾದ ನಡೆಯಿತು. ಬಳಿಕ ಮುಸ್ಲಿಂ ಮುಖಂಡರು ಎಲ್ಲರನ್ನೂ ಸಮಾಧಾನದಿಂದ ಇರುವಂತೆ ಕೇಳಿಕೊಂಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಗದಗ | ಭಾವೈಕ್ಯತೆಯಿಂದ ರಂಜಾನ್‌ ಆಚರಣೆ; ‘ಡಿವೈಎಫ್ಐ’ನಿಂದ ಪಾನಕ ವಿತರಣೆ

ಇದೇ ಸಂದರ್ಭದಲ್ಲಿ ಕಾಂಗ್ರೆಸ್‌ನ ಅಭ್ಯರ್ಥಿ ಪ್ರದೀಪ್‌ ಈಶ್ವರ್‌ ಮತ್ತು ಜೆಡಿಎಸ್‌ ಅಭ್ಯರ್ಥಿ ಕೆ ಪಿ ಬಚ್ಚೇಗೌಡ ಮುಸ್ಲಿಂ ಪೋಷಾಕು ಧರಿಸಿ ನಮಾಜ್‌ನಲ್ಲಿ ಭಾಗವಹಿದ್ದರು. ಟೋಪಿ ಧರಿಸಿದ್ದರಿಂದ ಇವರನ್ನು ಯಾರೂ ಆಕ್ಷೇಪಿಸಲಿಲ್ಲ, ವಿರೋಧಿಸಲಿಲ್ಲ. ಆದರೆ, ಸುಧಾಕರ್‌ ಅವರಿಗೆ ಮಾತ್ರ ಭಾರೀ ವಿರೋಧ ವ್ಯಕ್ತವಾಗಿದ್ದರಿಂದ ಮುಜುಗರಕ್ಕೀಡಾಗಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X