ಮೋದಿ ಆತ್ಮಸ್ಥೈರ್ಯ ಕಳೆದುಕೊಂಡು ಭಾಷಣ ಮಾಡುವಾಗ ತೊದಲುತ್ತಿದ್ದಾರೆ: ಅಖಿಲೇಶ್ ಯಾದವ್

Date:

Advertisements

ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಸೋಲುತ್ತದೆ ಎಂದು ಅರಿತ ಪ್ರಧಾನಿ ನರೇಂದ್ರ ಮೋದಿ ಅವರು ಆತ್ಮಸ್ಥೈರ್ಯ ಕಳೆದುಕೊಂಡಿದ್ದಾರೆ, ಭಾಷಣದ ವೇಳೆ ತೊದಲುತ್ತಿದ್ದಾರೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಭಾನುವಾರ ಹೇಳಿದ್ದಾರೆ.

ಸೇಲಂಪುರದ ಪಕ್ಷದ ಅಭ್ಯರ್ಥಿ ರಾಮ್ ಶಂಕರ್ ವಿದ್ಯಾರ್ಥಿ ಪರವಾಗಿ ಚುನಾವಣಾ ಪ್ರಚಾರ ನಡೆಸಿ ಮಾತನಾಡಿದ ಅಖಿಲೇಶ್ ಯಾದವ್, “ಇಂಡಿಯಾ ಒಕ್ಕೂಟದ ಸರ್ಕಾರ ರಚನೆ ಮಾಡಲಿದೆ ಎಂದು ಭರವಸೆ ವ್ಯಕ್ತಪಡಿಸಿದ ಅವರು, ಜೂನ್ 4ರ ನಂತರ ಮತಗಳ ಎಣಿಕೆ ದಿನ, ಕೇಂದ್ರ ಸಚಿವ ಸಂಪುಟ ಮತ್ತು ಮಾಧ್ಯಮಗಳು ಕೂಡಾ ಬದಲಾಗುತ್ತದೆ” ಎಂದರು.

ಇದನ್ನು ಓದಿದ್ದೀರಾ?  ದೇಶದಲ್ಲಿ ಹಲವು ಸಮಸ್ಯೆಗಳಿವೆ: ಸಂಸದೆ ಮೇಲಿನ ಹಲ್ಲೆ ವಿಷಯಕ್ಕೆ ಅಖಿಲೇಶ್ ಉತ್ತರ

Advertisements

ಇಂಡಿಯಾ ಒಕ್ಕೂಟ ಸರ್ಕಾರ ರಚಿಸಿದರೆ ಅಗ್ನಿವೀರ್ ಯೋಜನೆಯನ್ನು ತೆಗೆದುಹಾಕುವುದಾಗಿ ಭರವಸೆ ನೀಡಿದರು. ಈ ಸಂದರ್ಭದಲ್ಲೇ ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದರು.

“ಆತ್ಮಸ್ಥೈರ್ಯ ಕಳೆದುಕೊಂಡಾಗ ಮಾತು ತಡವರಿಸುತ್ತದೆ. ತಮ್ಮ ಸರ್ಕಾರ ಇನ್ನು ಮುಂದೆ ಇರಲ್ಲ ಎಂದು ಮೋದಿ ಅರಿವಿಗೆ ಬಂದಿದೆ. ‘400-ಪಾರ್’ ಘೋಷಣೆ ನೀಡಿದವರು ಈಗ ಸೋತು ಹೋಗಲಿದ್ದಾರೆ” ಎಂದು ಹೇಳಿದರು.

ಇದನ್ನು ಓದಿದ್ದೀರಾ?  ದೇಶದಲ್ಲಿ ಹಲವು ಸಮಸ್ಯೆಗಳಿವೆ: ಸಂಸದೆ ಮೇಲಿನ ಹಲ್ಲೆ ವಿಷಯಕ್ಕೆ ಅಖಿಲೇಶ್ ಉತ್ತರ

ಬಿಜೆಪಿ ವಿರುದ್ಧ ಜನರ ಆಕ್ರೋಶ ತೀವ್ರಗೊಂಡಿದೆ ಎಂದು ಪ್ರತಿಪಾದಿಸಿದ ಯಾದವ್, “ದೇಶದ 140 ಕೋಟಿ ಜನರು ಬಿಜೆಪಿಯನ್ನು 140 ಸ್ಥಾನಗಳಿಗೂ ಹಾತೊರೆಯುವಂತೆ ಮಾಡುತ್ತಾರೆ” ಎಂದು ಭರವಸೆ ವ್ಯಕ್ಷಪಡಿಸಿದರು.

“ಮೋದಿ ಸರ್ಕಾರವು ಕೈಗಾರಿಕೋದ್ಯಮಿಗಳ 25 ಲಕ್ಷ ಕೋಟಿ ರೂಪಾಯಿಗಿಂತ ಹೆಚ್ಚಿನ ಮೊತ್ತದ ಸಾಲವನ್ನು ಮನ್ನಾ ಮಾಡಿದೆ. ಇಂಡಿಯಾ ಕೂಟದ ಸರ್ಕಾರವು ರೈತರ ಸಾಲವನ್ನು ಮನ್ನಾ ಮಾಡುತ್ತದೆ ಮತ್ತು ಅವರಿಗೆ ಎಂಎಸ್‌ಪಿ ಅನ್ನು ಜಾರಿಗೊಳಿಸುತ್ತದೆ” ಎಂದು ಅವರು ಹೇಳಿದರು.

?s=150&d=mp&r=g
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಬಿಐ ಅಧಿಕಾರಿಗಳಂತೆ ನಟಿಸಿ 2.3 ಕೋಟಿ ರೂ. ದೋಚಿದ್ದ ಗ್ಯಾಂಗ್: ಇಬ್ಬರ ಬಂಧನ

ಕೇಂದ್ರ ತನಿಖಾ ದಳ (ಸಿಬಿಐ) ಅಧಿಕಾರಿಗಳಂತೆ ನಟಿಸಿ ಉದ್ಯಮಿಯೊಬ್ಬರ ಕಚೇರಿಯಿಂದ ಗ್ಯಾಂಗ್...

ಬೀದಿ ನಾಯಿಗಳಿಗೆ ಲಸಿಕೆ ಹಾಕಿದ ನಂತರ ಅದೇ ಸ್ಥಳಕ್ಕೆ ತಂದು ಬಿಡಬೇಕು: ಸುಪ್ರೀಂ ಕೋರ್ಟ್‌

ಬೀದಿ ನಾಯಿಗಳಿಗೆ ಸಂಬಂಧಿಸಿದ್ದಂತೆ ಆಗಸ್ಟ್ 11ರ ಆದೇಶವನ್ನು ಮಾರ್ಪಡಿಸಿದ ಸುಪ್ರೀಂ...

ವಿವಾದಾತ್ಮಕ ಯೂಟ್ಯೂಬರ್ ಎಲ್ವಿಶ್ ಮನೆ ಮೇಲೆ ಗುಂಡಿನ ದಾಳಿ: ಎನ್‌ಕೌಂಟರ್ ಮಾಡಿ ಆರೋಪಿ ಬಂಧನ

ಬಲಪಂಥೀಯ, ವಿವಾದಾತ್ಮಕ ಯೂಟ್ಯೂಬರ್ ಮತ್ತು ಬಿಗ್ ಬಾಸ್ ವಿಜೇತ ಎಲ್ವಿಶ್ ಯಾದವ್‌...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

Download Eedina App Android / iOS

X