ಉತ್ತರ ಪ್ರದೇಶ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಅಧಿಕಾರಿಗಳ ನಿಯೋಗ ಬಿಎಂಟಿಸಿಗೆ ಭೇಟಿ ನೀಡಿ ಮಾಹಿತಿ ಪಡೆಯಿತು.
ಬಿಎಂಟಿಸಿ ಅಳವಡಿಸಿಕೊಂಡಿರುವ ಮಾದರಿ ಯೋಜನೆಗಳು, ಸಂಸ್ಥೆಯ ಇತಿಹಾಸ, ಶಕ್ತಿ ಯೋಜನೆಯ ಅನುಷ್ಠಾನ, ಪ್ರಯಾಣಿಕರ ಪಾಸ್ ವ್ಯವಸ್ಥೆ, ಆರ್ಥಿಕ ಕಾರ್ಯಕ್ಷಮತೆ, ಸಂಚಾರ ಆದಾಯ, ಜಾಹೀರಾತು ಶಿಷ್ಟಾಚಾರ, ಸಂಸ್ಥೆಯ ಬಸ್ ವೇಳಾಪಟ್ಟಿ, ಕಾರ್ಯಚರಣೆಗಳ ವೆಚ್ಚ, ಎಲೆಕ್ಟ್ರಿಕ್ ಬಸ್ಗಳ ಹಸಿರು ತಂತ್ರಜ್ಞಾನದ ಕಾರ್ಯಾಚರಣೆ ಬಗ್ಗೆ ಚರ್ಚಿಸಿದರು. ಈ ವೇಳೆ ಬಿಎಂಟಿಸಿ ನಿರ್ದೇಶಕಿ (ಮಾಹಿತಿ ತಂತ್ರಜ್ಞಾನ) ಶಿಲ್ಪಾ ಪ್ರಾತ್ಯಕ್ಷಿಕೆ ನೀಡಿದರು.
ಉತ್ತರ ಪ್ರದೇಶ ರಾಜ್ಯ ರಸ್ತೆ ಸಾರಿಗೆ ವ್ಯವಸ್ಥಾಪಕ ನಿರ್ದೇಶಕ ಪ್ರನ್ನಾತ ಐಶ್ವರ್ಯ, ಪ್ರಧಾನ ವ್ಯವಸ್ಥಾಪಕ (ಟೆಕ್) ರಾಜೀವ್ ಆನಂದ್, ಪ್ರಾದೇಶಿಕ ವ್ಯವಸ್ಥಾಪಕ ಕೇಸರಿ ನಂದನ್ ಚೌಧರಿ, ಸೇವಾ ನಿರ್ವಾಹಕ ಅನುರಾಗ್ ಯಾದವ್ ನಿಯೋಗದಲ್ಲಿದ್ದರು.
ಈ ಸುದ್ದಿ ಓದಿದ್ದೀರಾ? ಅನುಮಾನಗಳನ್ನು ಹುಟ್ಟುಹಾಕುವುದೇ ಕೆಲವರ ಕೆಲಸ: ಮುಖ್ಯ ಚುನಾವಣಾ ಆಯುಕ್ತ
ಬಿಎಂಟಿಸಿ ಮುಖ್ಯ ಸಂಚಾರ ವ್ಯವಸ್ಥಾಪಕ (ಆಚರಣೆ) ಜಿ ಟಿ ಪ್ರಭಾಕರ ರೆಡ್ಡಿ, ಮುಖ್ಯ ತಾಂತ್ರಿಕ ಎಂಜಿನಿಯರ್ ಎ ಎನ್ ಗಜೇಂದ್ರ ಕುಮಾರ್, ಗಣಕ ವ್ಯವಸ್ಥಾಪಕಿ ಎ ಪ್ರಿಯಾಂಕ, ವಿಭಾಗೀಯ ಸಂಚಾರ ಅಧಿಕಾರಿ ಪ್ರತಿಮಾ ಎಸ್ ವಿ ಇದ್ದರು.
