ರೆಮಲ್ ಚಂಡಮಾರುತ| ಬಂಗಾಳ, ಬಾಂಗ್ಲಾದೇಶದಲ್ಲಿ 16 ಮಂದಿ ಸಾವು

Date:

Advertisements

ವರ್ಷದ ಮೊದಲ ಪ್ರಮುಖ ಚಂಡಮಾರುತವಾದ ರೆಮಲ್ ಚಂಡಮಾರುತ ಬಾಂಗ್ಲಾದೇಶ ಮತ್ತು ಪಶ್ಚಿಮ ಬಂಗಾಳದಲ್ಲಿ 16 ಜನರ ಸಾವಿಗೆ ಕಾರಣವಾಗಿದೆ. ಕರಾವಳಿ ತೀರದಲ್ಲಿ ಅಪ್ಪಳಿಸಿದ ಈ ಚಂಡಮಾರುತದಿಂದಾಗಿ ಲಕ್ಷಾಂತರ ಜನರು ಸ್ಥಳಾಂತರಗೊಂಡಿದ್ದಾರೆ. ಲಕ್ಷಾಂತರ ಮನೆಗಳಿಗೆ ವಿದ್ಯುತ್ ಕಡಿತ ಮಾಡಲಾಗಿದೆ.

“ಬಾಂಗ್ಲಾದೇಶದಲ್ಲಿ ಈವರೆಗೆ ಕನಿಷ್ಠ 10 ಜನರು ರೆಮಲ್ ಚಂಡಮಾರುತದಿಂದಾಗಿ ಸಾವನ್ನಪ್ಪಿದ್ದಾರೆ” ಎಂದು ಬಾಂಗ್ಲಾದೇಶದ ವಿಪತ್ತು ನಿರ್ವಹಣೆ ಮತ್ತು ಪರಿಹಾರ ಸಚಿವ ಮೊಹಿಬುರ್ ರೆಹಮಾನ್ ರಾಯಿಟರ್ಸ್‌ಗೆ ತಿಳಿಸಿದ್ದಾರೆ.

ಮೃತರಲ್ಲಿ ಕೆಲವರು ನೀರಿನಲ್ಲು ಮುಳುಗಿ ಸಾವನ್ನಪ್ಪಿದರೆ, ಇನ್ನು ಕೆಲವರು ಮನೆ ಕುಸಿದು, ಗೋಡೆ ಕುಸಿದು ಮೃತಪಟ್ಟಿದ್ದಾರೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿರುವುದಾಗಿ ಪಿಟಿಐ ವರದಿ ಮಾಡಿದೆ. ಬಾಂಗ್ಲಾದೇಶದಲ್ಲಿ ಭೋಲಾ ಮತ್ತು ಬಾರಿಸಾಲ್ ಜಿಲ್ಲೆಗಳಲ್ಲಿ ಮೂವರು ಮತ್ತು ಸತ್ಖಿರಾ, ಖುಲ್ನಾ, ಚಿತ್ತಗಾಂಗ್ ಮತ್ತು ಪಟುಖಾಲಿ ಜಿಲ್ಲೆಗಳಲ್ಲಿ ತಲಾ ಒಬ್ಬರು ಮೃತಪಟ್ಟಿದ್ದಾರೆ.

Advertisements

ಇದನ್ನು ಓದಿದ್ದೀರಾ?  ರೆಮಲ್ ಚಂಡಮಾರುತಕ್ಕೆ ಕೋಲ್ಕತ್ತಾದಲ್ಲಿ ಓರ್ವ ಬಲಿ, ಬಂಗಾಳದಲ್ಲಿ ಭಾರೀ ಹಾನಿ

ಭಾರತದ ಪಶ್ಚಿಮ ಬಂಗಾಳ ರಾಜ್ಯದಲ್ಲಿ, ನಾಲ್ಕು ಜನರು ವಿದ್ಯುದಾಘಾತದಿಂದಾಗಿ ಸಾವನ್ನಪ್ಪಿದ್ದು ಒಟ್ಟು ಮೃತರ ಸಂಖ್ಯೆಯು ಆರಕ್ಕೆ ಏರಿಕೆಯಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಇನ್ನು ಉಭಯ ರಾಷ್ಟ್ರಗಳಲ್ಲಿ ಸುಮಾರು ಒಂದು ಮಿಲಿಯನ್ ಜನರನ್ನು ನಿರಾಶ್ರಿತರ ಕೇಂದ್ರಕ್ಕೆ ಸ್ಥಳಾಂತರ ಮಾಡಲಾಗಿದೆ. ಬಾಂಗ್ಲಾದೇಶದಲ್ಲಿ ಸುಮಾರು 800,000 ಮತ್ತು ಭಾರತದಲ್ಲಿ ಸರಿಸುಮಾರು 110,000 ಜನರನ್ನು ಸ್ಥಳಾಂತರಿಸಲಾಗಿದೆ.

ಇನ್ನು ಚಂಡಮಾರುತದ ವೇಳೆ ವಿದ್ಯುತ್‌ ಅವಘಡವನ್ನು ತಪ್ಪಿಸಲು ಬಾಂಗ್ಲಾದೇಶದ ಅಧಿಕಾರಿಗಳು ಮುಂಚಿತವಾಗಿ ಅನೇಕ ಪ್ರದೇಶಗಳಿಗೆ ವಿದ್ಯುತ್ ಪೂರೈಕೆಯನ್ನು ಸ್ಥಗಿತಗೊಳಿಸಿದ್ದರು. ಆದರೆ ಕೆಲವೆಡೆ ವಿದ್ಯುತ್ ಸಂಪರ್ಕವಿದ್ದರೂ ಕೂಡಾ ಮರ ಬಿದ್ದು ವಿದ್ಯುತ್ ಪೂರೈಕೆಗೆ ಅಡ್ಡಿಯಾಗಿದೆ ಎಂದು ವಿದ್ಯುತ್ ಸಚಿವಾಲಯದ ಅಧಿಕಾರಿಗಳು ತಿಳಿಸಿರುವುದಾಗಿ ಎಎನ್‌ಐ ವರದಿ ಮಾಡಿದೆ.

ಮಿಜೋರಾಂ, ಅಸ್ಸಾಂನಲ್ಲಿ 16 ಮಂದಿ ಸಾವು

ರೆಮಲ್ ಚಂಡಮಾರುತದಿಂದಾಗಿ ಮಿಜೋರಾಂನಲ್ಲಿ ಸುಮಾರು 15 ಮಂದಿ ಸಾವನ್ನಪ್ಪಿದ್ದಾರೆ. ಹಲವಾರು ಕಾರ್ಮಿಕರು ಕಲ್ಲಿನ ಕ್ವಾರೆ ಕುಸಿತದಲ್ಲಿ ಸಿಲುಕಿ ಬಿದಿದ್ದಾರೆ ಎಂದು ಮಿಜೋರಾಂ ಮುಖ್ಯಮಂತ್ರಿ ಲಾಲ್ದುಹೋಮ ಮಾಹಿತಿ ನೀಡಿದ್ದಾರೆ. ಇನ್ನು ಸರ್ಕಾರವು ಮೃತರ ಕುಟುಂಬಕ್ಕೆ ತಲಾ 4 ಲಕ್ಷ ರೂಪಾಯಿ ಪರಿಹಾರವನ್ನು ಘೋಷಿಸಿದೆ.

ಇದನ್ನು ಓದಿದ್ದೀರಾ?  ರೆಮಲ್ ಚಂಡಮಾರುತದಿಂದ ಭೂಕುಸಿತ: ಬಂಗಾಳದಲ್ಲಿ ಒಂದು ಲಕ್ಷ ಜನರ ಸ್ಥಳಾಂತರ

ಇನ್ನು ಅಸ್ಸಾಂನಲ್ಲಿ ರೆವಲ್ ಚಂಡಮಾರುತದಿಂದ ಭಾರೀ ಮಳೆ ಸುರಿದಿದ್ದು 17 ವರ್ಷದ ಬಾಲಕ ಸಾವನ್ನಪ್ಪಿದ್ದಾನೆ. ಕೌಶಿಕ್ ಬರ್ದೊಲಾಯಿ ಎಂಬ ಬಾಲಕ ಆಟೋ ರಿಕ್ಷಾದಲ್ಲಿ ಪ್ರಯಾಣ ಮಾಡುತ್ತಿದ್ದಾಗ ಗಾಳಿ ಮಳೆಗೆ ಮರ ಬಿದ್ದು ಸಾವನ್ನಪ್ಪಿದ್ದಾನೆ. ಇನ್ನೂ ನಾಲ್ಕು ವಾಹನಗಳಿಗೆ ಹಾನಿಯಾಗಿದ್ದು, ಹಲವಾರು ಮಂದಿ ಗಾಯಗೊಂಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸರ್ಕಾರದಿಂದ ನಷ್ಟ ಸರಿದೂಗಿಸಲಾಗದು, ರೈತರೇ ಕಷ್ಟಕ್ಕೆ ಒಗ್ಗಿಕೊಳ್ಳಬೇಕು: ಬಿಜೆಪಿ ನಾಯಕನ ಹೇಳಿಕೆಗೆ ತೀವ್ರ ಆಕ್ರೋಶ

ಇತ್ತೀಚಿಗೆ ಆದ ಅತಿವೃಷ್ಟಿಯಿಂದ ರೈತರಿಗೆ ಆಗಿರುವ ನಷ್ಟಕ್ಕೆ ಸರ್ಕಾರ ಪರಿಹಾರ ನೀಡಲು...

ಏನಿದು ಅನಿಲ್ ಅಂಬಾನಿ ಬ್ಯಾಂಕ್ ವಂಚನೆ? ಕ್ರಮ ಕೈಗೊಳ್ಳುತ್ತಾರ ಮೋದಿ?

ತನ್ನನ್ನು ತಾನು ದಿವಾಳಿ ಎಂದು ಘೋಷಿಸಿಕೊಂಡಿರುವ ಭಾರತದ ಭಾರೀ ಶ್ರೀಮಂತ ಉದ್ಯಮಿ...

ತೆಲಂಗಾಣ | ಅಂತರ್ಜಾತಿ ವಿವಾಹದ ಕಾರಣಕ್ಕೆ ಸಾಮಾಜಿಕ ಬಹಿಷ್ಕಾರ

ಅಂತರ್ಜಾತಿ ವಿವಾಹವಾದ ಕಾರಣಕ್ಕಾಗಿ ಕುಟುಂಬವೊಂದಕ್ಕೆ ಸಾಮಾಜಿಕ ಬಹಿಷ್ಕಾರ ಹಾಕಿದ ಪ್ರಕರಣ ತೆಲಂಗಾಣದ...

Download Eedina App Android / iOS

X