ಪಪುವಾ ನ್ಯೂಗಿನಿಗೆ 1 ಮಿಲಿಯನ್ ಡಾಲರ್ ನೆರವು ಘೋಷಿಸಿದ ಭಾರತ

Date:

Advertisements

ಬೃಹತ್‌ ಪ್ರಮಾಣದ ಭೂಕುಸಿತದಿಂದ ಅಪಾರ ಪ್ರಮಾಣದ ಸಾವು ನೋವಿನ ನಷ್ಟ ಅನುಭವಿಸಿರುವ ಪಪುವಾ ನ್ಯೂಗಿನಿ ದೇಶಕ್ಕೆ ಭಾರತ ಸರ್ಕಾರ 1 ಮಿಲಿಯನ್‌ ಡಾಲರ್‌ ಆರ್ಥಿಕ ನೆರವನ್ನು ಘೋಷಿಸಿದೆ.

ಈ ಬಗ್ಗೆ ಪ್ರಕಟಣೆ ಹೊರಡಿಸಿರುವ ವಿದೇಶಾಂಗ ಸಚಿವಾಲಯ, ಘಟನೆಯ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ತೀವ್ರ ಸಂತಾಪವನ್ನು ವ್ಯಕ್ತಪಡಿಸಿದ್ದು, ತುರ್ತು ಸಮಯದಲ್ಲಿರುವ ದ್ವೀಪ ರಾಷ್ಟ್ರಕ್ಕೆ ಭಾರತದಿಂದ ಎಲ್ಲ ರೀತಿಯ ಬೆಂಬಲ ಹಾಗೂ ನೆರವು ನೀಡಲು ಸಿದ್ಧವಿದೆ ಎಂದು ತಿಳಿಸಲಾಗಿದೆ.

“ಎಫ್‌ಐಪಿಐಸಿಯಡಿಯ ಆಪ್ತ ಮಿತ್ರ ಹಾಗೂ ಪಾಲುದಾರನಾಗಿರುವ ಪಪುವಾ ನ್ಯೂಗಿನಿಯ ಸ್ನೇಹಶೀಲ ಜನರೊಂದಿಗೆ ಒಗ್ಗಟ್ಟಿನ ಸೂಚಕವಾಗಿ  ತತ್‌ಕ್ಷಣದಲ್ಲಿ ನೆರವು, ಪುನರ್ವಸತಿ ಹಾಗೂ ಮರು ನಿರ್ಮಾಣ ಕಾರ್ಯಗಳನ್ನು ಕೈಗೊಳ್ಳಲು ಭಾರತ ಸರ್ಕಾರವು 1 ಮಿಲಿಯನ್‌ ಡಾಲರ್‌ ನೆರವು ನೀಡುತ್ತದೆ” ಎಂದು ತಿಳಿಸಲಾಗಿದೆ.

Advertisements

ಈ ಸುದ್ದಿ ಓದಿದ್ದೀರಾ? 8 ದಿನಗಳ ಹಿಂದೆ ನಾಪತ್ತೆಯಾಗಿದ್ದ ಬಾಂಗ್ಲಾದೇಶದ ಸಂಸದನ ತುಂಡು ತುಂಡಾದ ದೇಹ ಕೋಲ್ಕತ್ತಾದಲ್ಲಿ ಪತ್ತೆ

ವಿದೇಶಾಂಗ ಸಚಿವ ಎಸ್‌ ಜೈಶಂಕರ್‌, ಪಪುವಾ ನ್ಯೂಗಿನಿದಲ್ಲಿ ಇತ್ತೀಚಿಗೆ ಭೂಕುಸಿತದಿಂದ ಉಂಟಾಗಿರುವ ಸಾವಿನ ಬಗ್ಗೆ ಅತ್ಯಂತ ದುಃಖಿತಗೊಂಡಿದ್ದೇವೆ. ಅಲ್ಲಿನ ಸರ್ಕಾರ ಹಾಗೂ ಜನರೊಂದಿಗೆ ನಾವಿದ್ದೇವೆ. ಇಂತಹ ಕಷ್ಟದ ಸಮಯದಲ್ಲಿ ನಮ್ಮ ಸ್ನೇಹಿತರೊಂದಿಗೆ ಒಗ್ಗಟ್ಟು ಪ್ರದರ್ಶಿಸಲಿದ್ದೇವೆ”ಎಂದು ತಿಳಿಸಿದ್ದಾರೆ.

ಪಪುವಾ ನ್ಯೂಗಿನಿ ನೈಸರ್ಗಿಕ ಸಂಕಷ್ಟವಿದ್ದ ಸಮಯದಲ್ಲಿ ಭಾರತ ಸದಾ ಬೆಂಬಲ ನೀಡುತ್ತಿದೆ. 2018ರಲ್ಲಿ ಭೂಕಂಪ 2019 ಮತ್ತು 2023ರಲ್ಲಿ ಜ್ವಾಲಾಮುಖಿ ಸ್ಫೋಟ ಉಂಟಾದ ಸಮಯದಲ್ಲೂ ಸಹಾಯಹಸ್ತ ನೀಡಿದೆ ಎಂದು ಭಾರತ ವಿದೇಶಾಂಗ ಇಲಾಖೆ ತಿಳಿಸಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

Download Eedina App Android / iOS

X