ಭಗತ್ ಸಿಂಗ್ ಹೆಸರಿಡಲು ಆಗ್ರಹಿಸಿ ಸಾವರ್ಕರ್ ಫ್ಲೈ ಓವರ್‌ಗೆ ಮಸಿ ಬಳಿದ NSUI ಕಾರ್ಯಕರ್ತರು: ಮೂವರ ಬಂಧನ

Date:

Advertisements

ಬೆಂಗಳೂರು ನಗರದ ಹೊರವಲಯದ ಯಲಹಂಕದಲ್ಲಿರುವ ಫ್ಲೈ ಓವರ್‌ಗೆ ಇಟ್ಟಿರುವ ಸಾವರ್ಕರ್ ಹೆಸರನ್ನು ಬದಲಿಸಿ, ಸ್ವಾತಂತ್ರ್ಯ ಹೋರಾಟಗಾರ ಭಗತ್ ಸಿಂಗ್ ಅವರ ಹೆಸರಿಡುವಂತೆ ಆಗ್ರಹಿಸಿ ಸಾವರ್ಕರ್ ಮೇಲ್ಸೇತುವೆ ನಾಮಫಲಕಕ್ಕೆ ಎನ್‌ಎಸ್‌ಯುಐ ಕಾರ್ಯಕರ್ತರು ಮಸಿ ಬಳಿದಿರುವ ಘಟನೆ ಮಂಗಳವಾರ ನಡೆದಿದೆ.

ಸಂಚಾರ ತಡೆ ನಡೆಸಿ ನಾಮಫಲಕಕ್ಕೆ ಮಸಿ ಬಳಿದಿದ್ದು, ಕೃತ್ಯ ಎಸಗಿದ ಆರೋಪದ ಮೇಲೆ ಮೂವರು ಎನ್‌ಎಸ್‌ಯುಐ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮೇಲ್ಸೇತುವೆಯ ನಾಮಫಲಕದ ಬಳಿ ಹತ್ತಿ, ಸಾವರ್ಕರ್ ಹೆಸರು ಹಾಗೂ ಫೋಟೋಗೆ ಮಸಿ ಬಳಿದಿರುವ ಎನ್‌ಎಸ್‌ಯುಐ ಕಾರ್ಯಕರ್ತರು, ಬಳಿಕ ಸೇತುವೆಗೆ ʼಭಗತ್ ಸಿಂಗ್ ಮೇಲ್ಸೇತುವೆʼ ಹೆಸರಿನ ಬ್ಯಾನರ್ ಹಾಕಿದ್ದಾರೆ. ಆ ಬಳಿಕ ಇಂಕಿಲಾಭ್ ಝಿಂದಾಬಾದ್ ಘೋಷಣೆ ಕೂಗಿದ್ದಾರೆ.

Advertisements

Fly over

ಸಾವರ್ಕರ್ ಹೆಸರಿನ ನಾಮಫಲಕಕ್ಕೆ ಮಸಿ ಬಳಿದಿದ್ದರಿಂದ ಬಿಜೆಪಿ ಹಾಗೂ ಸಂಘಪರಿವಾರದ ಬೆಂಬಲಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಾವರ್ಕರ್ ಮೇಲ್ಸೇತುವೆಗೆ ಮಸಿ ಬಳಿದಿರುವುದನ್ನು ಖಂಡಿಸಿ ಯಲಹಂಕ ಶಾಸಕ ಎಸ್.ಆರ್. ವಿಶ್ವನಾಥ್ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಈ ವೇಳೆ ಕಾಂಗ್ರೆಸ್ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ ಶಾಸಕ ವಿಶ್ವನಾಥ್, “ಕಾಂಗ್ರೆಸ್ ನಾಯಕರ ಫೋಟೋಗಳು ಯಲಹಂಕದಲ್ಲಿವೆ. ಆದರೆ, ನಾವು ಯಾವುದೇ ಪೋಟೋಗಳಿಗೂ ಮಸಿ ಬಳಿದಿಲ್ಲ. ಸಾವರ್ಕರ್ ಇತಿಹಾಸವನ್ನು ಕಾಂಗ್ರೆಸ್‌ನವರು ಮೊದಲು ತಿಳಿದುಕೊಳ್ಳಲಿ” ಎಂದು ಕಿಡಿಕಾರಿದರು.

“ಈಗ ಮೂವರನ್ನು ಪೊಲೀಸರು ಬಂಧನ ಮಾಡಿದ್ದಾರೆ. ಉಳಿದವರನ್ನು ಶೀಘ್ರವಾಗಿ ಬಂಧನ ಮಾಡಬೇಕು. ಇಲ್ಲದೇ ಹೋದಲ್ಲಿ ಉಗ್ರ ಹೋರಾಟ ಮಾಡಲಾಗುತ್ತದೆ. ಸ್ವಯಂ ಪ್ರೇರಿತವಾಗಿ ಯಲಹಂಕ ಬಂದ್ ಕೂಡ ಮಾಡಲಾಗುತ್ತದೆ. ಶೀಘ್ರ ನಾಮಫಲಕ ಸರಿಪಡಿಸುವ ಕೆಲಸ ಮಾಡಬೇಕು” ಎಂದು ಒತ್ತಾಯಿಸಿದರು.

ಯಲಹಂಕ ನ್ಯೂ ಟೌನ್ ಪೋಲೀಸ್ ಠಾಣೆಯ ಮುಂಭಾಗ ಪ್ರತಿಭಟನೆ ನಡೆಸಿದ ಬಿಜೆಪಿ ಕಾರ್ಯಕರ್ತರು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿದ್ದಾರೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

ಬೆಂಗಳೂರು | ಹವಾಮಾನ ಕ್ರಿಯೆಗೆ ಪರಿಣಾಮಕಾರಿ ಕೊಡುಗೆ ನೀಡಲು ಅದರ ಮಹತ್ವ ತಿಳಿಯುವುದು ಅಗತ್ಯ: ಪ್ರೀತಿ ಗೆಹ್ಲೋಟ್

ಹವಾಮಾನ ಕ್ರಿಯೆಗೆ ಪರಿಣಾಮಕಾರಿಯಾಗಿ ಕೊಡುಗೆ ನೀಡಲು, ಮಕ್ಕಳು ಅದರ ಮಹತ್ವ ಮತ್ತು...

ಅರ್ಧದಲ್ಲಿ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಶೀಘ್ರದಲ್ಲೇ ಮುಗಿಸಿ: ಬಿಬಿಎಂಪಿ ಕಮಿಷನರ್ ಮಹೇಶ್ವರ್ ರಾವ್

ಬೆಂಗಳೂರು ನಗರದಲ್ಲಿ ಅರ್ಧದಲ್ಲೇ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಹಾಗೂ ರಸ್ತೆ ಕತ್ತರಿಸಿರುವ...

Download Eedina App Android / iOS

X