ರಾಜಸ್ಥಾನ| ಬಿಸಿಲಿನ ತಾಪಕ್ಕೆ ಮತ್ತೆ ಮೂವರು ಬಲಿ; ರೋಗಿಗಳ ಸಂಖ್ಯೆ 3,965ಕ್ಕೆ ಏರಿಕೆ

Date:

Advertisements

ರಾಜಸ್ಥಾನದಲ್ಲಿ ಬಿಸಿಲಿನ ತಾಪಕ್ಕೆ ಬಲಿಯಾಗುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದ್ದು, ಜೈಪುರದಲ್ಲಿ ಮೂವರು ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ. ಇನ್ನು ಬಿಸಿಲಿನ ತಾಪದಿಂದ ಅನಾರೋಗ್ಯಕ್ಕೆ ಒಳಗಾದ ರೋಗಿಗಳ ಸಂಖ್ಯೆ 3965ಕ್ಕೆ ಏರಿದೆ.

ಮೃತಪಟ್ಟವರು ಆಗ್ರಾ ಮತ್ತು ದೆಹಲಿಯವರು ಎಂದು ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ. ಇನ್ನು ಝಲಾವರ್ ಜಿಲ್ಲೆಯ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಾಗಿದ್ದ ಎರಡು ನವಜಾತ ಶಿಶುಗಳು ಮಂಗಳವಾರ ಸಾವನ್ನಪ್ಪಿವೆ.

ಆಸ್ಪತ್ರೆಯಲ್ಲಿ ಕೂಲರ್ ಅಥವಾ ವೈದ್ಯರಿಲ್ಲದ ಕಾರಣ ಈ ಸಾವಾಗಿದ್ದು ಇದಕ್ಕೆ ಆಸ್ಪತ್ರೆ ಆಡಳಿತದ ನಿರ್ಲಕ್ಷ್ಯವೇ ಸಾವಿಗೆ ಕಾರಣ ಎಂದು ಪೋಷಕರು ಆರೋಪಿಸಿದ್ದಾರೆ.

Advertisements

ಇದನ್ನು ಓದಿದ್ದೀರಾ?  ದಾವಣಗೆರೆ | ವಿಪರೀತ ಸುಡುವ ಬಿಸಿಲು; ಸಾಂಕ್ರಾಮಿಕ ರೋಗಗಳ ಬಗ್ಗೆ ವೈದ್ಯರ ಎಚ್ಚರಿಕೆ

ಬ್ಲಾಕ್ ಮೆಡಿಕಲ್ ಆಫೀಸರ್ ರಯೀಸ್ ಖಾನ್ ಆಸ್ಪತ್ರೆಗೆ ಆಗಮಿಸಿ ವಾರ್ಡ್‌ನಲ್ಲಿ ನಾಲ್ಕು ಕೂಲರ್‌ಗಳನ್ನು ಅಳವಡಿಸಲು ಮತ್ತು ಆಸ್ಪತ್ರೆಯಲ್ಲಿ 24 ಗಂಟೆಗಳ ಕರ್ತವ್ಯಕ್ಕೆ ವೈದ್ಯರನ್ನು ನೇಮಿಸಲು ಸೂಚನೆ ನೀಡಿದರು.

ಈ ನವಜಾತ ಶಿಶುಗಳು ತೀವ್ರವಾದ ಶಾಖದಿಂದ ಸಾವನ್ನಪ್ಪಿವೆಯೇ ಎಂದು ಪರೀಕ್ಷಿಸಲಾಗುವುದು ಎಂದು ಎಂದು ರಯೀಸ್ ಖಾನ್ ತಿಳಿಸಿದ್ದಾರೆ.

ಏರುತ್ತಿರುವ ತಾಪಮಾನದಿಂದಾಗಿ ಈ ಹಿಂದೆ ರಾಜಸ್ಥಾನದಲ್ಲಿ ಆರು ಸಾವುಗಳು ಸಂಭವಿಸಿವೆ ಎಂದು ರಾಜಸ್ಥಾನದ ಸಚಿವರು ಮಂಗಳವಾರ ಹೇಳಿದ್ದಾರೆ.

ರಾಜಸ್ಥಾನದ ಬಹುತೇಕ ಎಲ್ಲಾ ನಗರಗಳಲ್ಲಿ ಮಂಗಳವಾರ 45 ಡಿಗ್ರಿ ಸೆಲ್ಸಿಯಸ್‌ಗಿಂತ ಹೆಚ್ಚಿನ ತಾಪಮಾನವನ್ನು ದಾಖಲಾಗಿದೆ. ಬಾರ್ಮರ್‌ನಲ್ಲಿ ಅತೀ ಅಧಿಕ ತಾಪಮಾನ ದಾಖಲಾಗಿದೆ.

ಇದನ್ನು ಓದಿದ್ದೀರಾ?  ಮುಂದಿನ ಎರಡು ವಾರಗಳ ಕಾಲ ಬಿಸಿಲು – ಒಣ ಹವೆ; ಹವಾಮಾನ ಇಲಾಖೆ ವರದಿ

ಅಜ್ಮೀರ್‌ನಲ್ಲಿ ಗರಿಷ್ಠ ತಾಪಮಾನ 46.3 ಡಿಗ್ರಿ ಸೆಲ್ಸಿಯಸ್, ಭಿಲ್ವಾರ (47.4), ಭರತ್‌ಪುರ (48.2), ಅಲ್ವಾರ್ (46.2), ಪಿಲಾನಿ (48.5), ಚಿತ್ತೋರ್‌ಗಢ (47), ಬಾರ್ಮರ್ (49.3), ಜೈಸಲ್ಮೇರ್ (48.7), ಜೋಧ್‌ಪುರ (47.4), ಬಿಕಾನೇರ್ (48.2), ಚುರು (48), ಶ್ರೀ ಗಂಗಾನಗರ (48.3), ಮತ್ತು ಧೋಲ್‌ಪುರದಲ್ಲಿ 48.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲಾಗಿದೆ.

ಈ ಬಿಸಿ ವಾತಾವರಣವು ಮುಂದಿನ 2-3 ದಿನಗಳವರೆಗೆ ಇರುವ ಸಾಧ್ಯತೆಯಿದೆ. ಮೇ 29ರಿಂದ ತಾಪಮಾನ ಕಡಿಮೆಯಾಗಲು ಆರಂಭವಾಗಲಿದ್ದು, ಜೂನ್ ಮೊದಲ ವಾರದಲ್ಲಿ ತಾಪಮಾನ ಸಾಮಾನ್ಯ ಸ್ಥಿತಿಗೆ ಮರಳಲಿದೆ ಎಂದು ಜೈಪುರದ ಭಾರತೀಯ ಹವಾಮಾನ ಇಲಾಖೆ ನಿರ್ದೇಶಕ ಆರ್.ಎಸ್. ಶರ್ಮಾ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X