ದಲಿತ ನಾಯಕರ ಮೂಲೆಗುಂಪು ಮಾಡುವಲ್ಲಿ ಸಿಎಂ, ಡಿಸಿಎಂ ಇಬ್ಬರದ್ದೂ ಒಂದೇ ನಿಲುವು: ಆರ್‌ ಅಶೋಕ್‌ ಟೀಕೆ

Date:

Advertisements

ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ ಕೆ ಶಿವಕುಮಾರ್‌ ಮಧ್ಯೆ ಎಷ್ಟೇ ಭಿನ್ನಾಭಿಪ್ರಾಯಗಳಿದ್ದರೂ ದಲಿತ ನಾಯಕರನ್ನು ಮೂಲೆಗುಂಪು ಮಾಡುವ ವಿಷಯದಲ್ಲಿ ಮಾತ್ರ ಇಬ್ಬರದ್ದೂ ಒಂದೇ ನಿಲುವು, ಇಬ್ಬರದ್ದೂ ಒಂದೇ ಗುರಿ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌ ಅಶೋಕ್‌ ಆರೋಪಿಸಿದ್ದಾರೆ.

ವಿಧಾನ ಪರಿಷತ್‌ ಚುನಾವಣೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ನಡೆಗೆ‌ ಗೃಹ ಸಚಿವ ಪರಮೇಶ್ವರ್ ಅಸಮಾಧಾನ ವ್ಯಕ್ತಪಡಿಸಿ, “ಚರ್ಚಿಸದೇ ಅಭ್ಯರ್ಥಿ ಆಯ್ಕೆ ಸರಿಯಲ್ಲ” ಎಂದು ಹೇಳಿಕೆ ನೀಡಿದ್ದನ್ನು ಉಲ್ಲೇಖಿಸಿ ಅಶೋಕ್‌ ಎಕ್ಸ್‌ ತಾಣದಲ್ಲಿ ಪೋಸ್ಟ್‌ ಮಾಡಿದ್ದಾರೆ.

“ಮುಖ್ಯಮಂತ್ರಿ ಸ್ಥಾನ ಕೊಡುವುದು ದೂರದ ಮಾತು, ಕನಿಷ್ಠ ಪಕ್ಷ ಒಂದು ಎಂಎಲ್ಸಿ ಸ್ಥಾನದ ಆಯ್ಕೆಗೂ ದಲಿತ ಮುಖಂಡರನ್ನ ವಿಶ್ವಾಸಕ್ಕೆ ತೆಗೆದುಕೊಳ್ಳುವ ಗೋಜಿಗೆ ಹೋಗುವುದಿಲ್ಲ” ಎಂದಿದ್ದಾರೆ.

Advertisements

“ಮಲ್ಲಿಕಾರ್ಜುನ ಖರ್ಗೆ, ವಿ.ಶ್ರೀನಿವಾಸ್ ಪ್ರಸಾದ್, ಡಾ. ಜಿ. ಪರಮೇಶ್ವರ್, ಕೆ ಹೆಚ್ ಮುನಿಯಪ್ಪ ಹೀಗೆ ಕಾಂಗ್ರೆಸ್ ಪಕ್ಷದಲ್ಲಿ ಮೊಲೆಗುಂಪಾದ ದಲಿತ ನಾಯಕರ ಪಟ್ಟಿ ಬೆಳೆಯುತ್ತಲೇ ಇದೆ” ಎಂದು ಕುಟುಕಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ವಿದ್ಯಾರ್ಥಿನಿ ಕೊಲೆ, ಬೆಂಕಿ ಹಚ್ಚಿ ಸುಟ್ಟ ಅಪರಾಧಿಗಳಿಗೆ ಗಲ್ಲುಶಿಕ್ಷೆ ವಿಧಿಸಲು ಎಸ್ ಎಫ್ ಐ ಆಗ್ರಹ

ಚಿತ್ರದುರ್ಗದ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಬಳಿ ಹಿರಿಯೂರು ತಾಲೂಕಿನ 19 ವರ್ಷದ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಆಹ್ವಾನ ಸಂಪೂರ್ಣ ಸುಳ್ಳು: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಈ ಬಾರಿಯ ದಸರಾ ಉದ್ಘಾಟನೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯನ್ನು ಆಹ್ವಾನಿಸಲಾಗಿದೆ...

Download Eedina App Android / iOS

X