ಪ್ರಧಾನಿ ಕನ್ಯಾಕುಮಾರಿ ಭೇಟಿಗೆ ತಮಿಳುನಾಡು ಕಾಂಗ್ರೆಸ್ ವಿರೋಧ

Date:

Advertisements

ಪ್ರಧಾನಿ ನರೇಂದ್ರ ಮೋದಿ ಅವರು ತಮಿಳುನಾಡಿನ ಕನ್ಯಾಕುಮಾರಿಯಲ್ಲಿ ಸ್ವಾಮಿ ವಿವೇಕಾನಂದ ಅವರ ಸ್ಮರಣಾರ್ಥವಾಗಿ ನಿರ್ಮಿಸಲಾಗಿರುವ ಶಿಲಾ ಸ್ಮಾರಕದಲ್ಲಿ ಮೇ 30ರಂದು ಮೂರು ದಿನಗಳ ಕಾಲ ಧ್ಯಾನಕ್ಕಾಗಿ ಆಗಮಿಸುತ್ತಿರುವುದನ್ನು ತಮಿಳುನಾಡು ಕಾಂಗ್ರೆಸ್ ವಿರೋಧಿಸಿದೆ.

ಈ ಬಗ್ಗೆ ಹೇಳಿಕೆ ನೀಡಿರುವ ತಮಿಳುನಾಡು ಕಾಂಗ್ರೆಸ್ ಸಮಿತಿಯ ಮುಖ್ಯಸ್ಥರಾದ ಕೆ ಸೆಲ್ವಪೆರುನಾಥಗೈ ಅವರು, ಮಾದರಿ ನೀತಿ ಸಂಹಿತಿ ಜಾರಿಯಲ್ಲಿರುವ ಕಾರಣ ಪ್ರಧಾನ ಮಂತ್ರಿಯವರ ಈ ಕಾರ್ಯಕ್ರಮಕ್ಕೆ ಚುನಾವಣಾ ಆಯೋಗ ಅನುಮತಿ ನೀಡಬಾರದು. ಇಂತಹ ನಡೆಯು ಪ್ರಚಾರದ ನಂತರವು ಪರೋಕ್ಷವಾಗಿ ಪ್ರಚಾರ ಮಾಡುವ ಪ್ರಯತ್ನವಾಗುತ್ತದೆ ಎಂದು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಶಿಕ್ಷಣ ಕ್ಷೇತ್ರವನ್ನು ಖಾಸಗಿಯವರ ಸುಪರ್ದಿಗೊಪ್ಪಿಸುತ್ತಿದೆಯೇ ಸರಕಾರ?

Advertisements

“ಚುನಾವಣೆಗೂ ಮುನ್ನ 48 ಗಂಟೆಗಳು ಮೌನ ಅವಧಿಯಾಗಿರುವ ಸಂದರ್ಭದಲ್ಲಿ ಮೋದಿಯವರು ಮಾಧ್ಯಮಗಳ ಮೂಲಕ ರಹಸ್ಯ ರೀತಿಯಲ್ಲಿ ಪ್ರಚಾರ ಮಾಡುತ್ತಿರುವುದು ಇದರಲ್ಲಿ ಸ್ಪಷ್ಟವಾಗಿದೆ” ಎಂದು ತಮಿಳುನಾಡು ಕಾಂಗ್ರೆಸ್ ಮುಖ್ಯಸ್ಥರು ತಿಳಿಸಿದ್ದಾರೆ.

“ಇದಕ್ಕೆ ಸಂಬಂಧಿಸಿದಂತೆ ನಾಳೆ ಚುನಾವಣಾ ಆಯೋಗಕ್ಕೆ ಪತ್ರವನ್ನು ನೀಡುತ್ತೇವೆ. ಅಗತ್ಯವೆನಿಸಿದರೆ ಗೌರವಾನ್ವಿತ ನ್ಯಾಯಾಲಯಕ್ಕೂ ಮನವಿ ಮಾಡುತ್ತೇವೆ” ಎಂದು ಕೆ ಸೆಲ್ವಪೆರುನಾಥಗೈ ಹೇಳಿದ್ದಾರೆ.

ಪ್ರಧಾನಿ ಕನ್ಯಾಕುಮಾರಿಗೆ ಆಗಮಿಸುತ್ತಿರುವ ಕಾರಣ ಭಾರಿ ಭದ್ರತೆಯನ್ನು ಏರ್ಪಡಿಸಲಾಗಿದೆ. 2000 ಪೊಲೀಸರು ಹಾಗೂ ವಿವಿಧ ಭದ್ರತಾ ದಳದವರನ್ನು ನಿಯೋಜಿಸಲಾಗಿದೆ.

ಪ್ರಧಾನಿ ನರೇಂದ್ರ ಮೋದಿ 2019ರಲ್ಲಿ ಚುನಾವಣಾ ಪ್ರಚಾರ ಮುಗಿದ ನಂತರ ಉತ್ತರಾಖಂಡದ ಕೇದಾರನಾಥ ಗುಹೆಗೆ ತೆರಳಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X