ಪ್ರಜ್ವಲ್ ಲೈಂಗಿಕ ಹಗರಣ | ಹೋರಾಟದ ನಡಿಗೆ ಹಾಸನದ ಕಡೆಗೆ; ಪ್ರತಿಭಟನಕಾರರ ಪ್ರಮುಖ ಬೇಡಿಕೆಗಳು

Date:

Advertisements

ನೂರಾರು ಮಹಿಳೆಯರ ಮೇಲೆ ಅತ್ಯಾಚಾರ, ದೌರ್ಜನ್ಯ ಮಾಡಿದ ಆರೋಪವನ್ನು ಹೊತ್ತಿರುವ, ದೇಶದಿಂದ ಪರಾರಿಯಾಗಿರುವ ಸಂಸದ ಪ್ರಜ್ವಲ್ ರೇವಣ್ಣನ ಬಂಧನಕ್ಕೆ ಆಗ್ರಹಿಸಿ ಜನಪರ ಸಂಘಟನೆಗಳ ನೇತೃತ್ವದಲ್ಲಿ ಮೇ 30ರಂದು ಹಾಸನದಲ್ಲಿ ‘ಹೋರಾಟದ ನಡಿಗೆ ಹಾಸನದ ಕಡೆಗೆ’ ಬೃಹತ್ ಪ್ರತಿಭಟನೆ ನಡೆಸಲಾಗುತ್ತಿದೆ.

ಈ ಬೃಹತ್ ಪ್ರತಿಭಟನೆಯಲ್ಲಿ ಮಹಿಳಾ, ದಲಿತ, ಕಾರ್ಮಿಕ, ರೈತ, ಅಲ್ಪಸಂಖ್ಯಾತ, ಹಿಂದುಳಿದ, ಲೈಂಗಿಕ ಅಲ್ಪಸಂಖ್ಯಾತ, ಆದಿವಾಸಿ, ವಿಜ್ಞಾನ ಚಳವಳಿ, ನಿವೃತ್ತ ಸರ್ಕಾರಿ ಅಧಿಕಾರಿಗಳು/ನೌಕರರ ಸಂಘಟನೆ, ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಹಾಗೂ ಸಮಾನಮನಸ್ಕರು ಭಾಗಿಯಾಗಿದ್ದಾರೆ.

ಕರ್ನಾಟಕ ಜನಪರ ಚಳವಳಿಗಳ ಒಕ್ಕೂಟವು ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ ಪ್ರಕರಣದಲ್ಲಿ ಹಲವಾರು ಬೇಡಿಕೆಗಳನ್ನು ರಾಜ್ಯ ಸರ್ಕಾರದ ಮುಂದಿಟ್ಟಿದೆ. ಆರೋಪಿಗಳಾದ ಸಂಸದ ಪ್ರಜ್ವಲ್ ರೇವಣ್ಣ ಹಾಗೂ ವಿಡಿಯೋ ಮತ್ತು ಚಿತ್ರಗಳನ್ನು ಹಂಚಿದವರ ತ್ವರಿತ ಬಂಧನಕ್ಕೆ ಜನಪರ ಚಳವಳಿಗಳ ಒಕ್ಕೂಟ ಆಗ್ರಹಿಸಿದೆ.

Advertisements

ಜನಪರ ಚಳವಳಿಗಳ ಒಕ್ಕೂಟ ಆಗ್ರಹಗಳು

• ಈಗಾಗಲೇ ವಿಳಂಬವಾಗಿರುವ ವಿಕೃತ ಲೈಂಗಿಕ ಅತ್ಯಾಚಾರ ಆರೋಪಿ ಸಂಸದ ಪ್ರಜ್ವಲ್ ರೇವಣ್ಣನನ್ನು ಕೂಡಲೇ ಬಂಧಿಸಬೇಕು ಮತ್ತು ಕಾನೂನಾತ್ಮಕ ಕಠಿಣ ಶಿಕ್ಷೆಗೆ ಗುರಿಪಡಿಸಬೇಕು. ಈ ಸಂಬಂಧ ರೆಡ್ ಕಾರ್ನರ್ ನೋಟೀಸು ಹೊರಡಿಸಬೇಕು. ಅವನ ಬ್ಯಾಂಕ್ ಖಾತೆಯನ್ನು ಮುಟ್ಟುಗೋಲು ಹಾಕಿಕೊಳ್ಳಬೇಕು. ಕೇಂದ್ರ ಸರ್ಕಾರವು ಪ್ರಜ್ವಲ್ ರೇವಣ್ಣನ ರಾಜತಾಂತ್ರಿಕ ಪಾಸ್‌ಪೋರ್ಟ್ ಮತ್ತು ವೀಸಾವನ್ನು ಕೂಡಲೇ ರದ್ದುಪಡಿಸಿ, ಇಂಟರ್‌ಪೋಲ್ ಸಹಾಯ ಪಡೆದು ಜಗತ್ತಿನ ಯಾವುದೇ ದೇಶದಲ್ಲಿದ್ದರೂ ಅಲ್ಲಿ ಬಂಧಿಸಲು ರಾಜ್ಯ ಸರ್ಕಾರಕ್ಕೆ ಹಾಗೂ ಎಸ್‍ಐಟಿಗೆ ಅಗತ್ಯ ನೆರವು ನೀಡಬೇಕು.

• ವಿಕೃತ ಲೈಂಗಿಕ ಹಗರಣದ ವಿಡಿಯೋಗಳು ಮತ್ತು ಚಿತ್ರಗಳನ್ನು ಸಾರ್ವಜನಿಕರಿಗೆ ಪೆನ್‍ಡ್ರೈವ್, ಸಾಮಾಜಿಕ ಮಾಧ್ಯಮ ಮತ್ತಿತರೆ ಸಾಧನಗಳ ಮುಖಾಂತರ ಸಾರ್ವಜನಿಕವಾಗಿ ಹಂಚಲು ಸಂಚು ನಡೆಸಿದ, ವ್ಯಾಪಕವಾಗಿ ಹಂಚಿದ ಮತ್ತು ಅವನ್ನು ಸಂಗ್ರಹಿಸಿಟ್ಟುಕೊಳ್ಳುವ ಮೂಲಕ ಮಹಿಳೆಯರ ಖಾಸಗಿತನ, ಕುಟುಂಬ, ಬದುಕಿನ ಮೇಲೆ ದಾಳಿ ಮಾಡಿದ ಪ್ರತಿಯೊಬ್ಬ ಅಪರಾಧಿಯನ್ನು ಕೂಡಲೇ ಬಂಧಿಸಬೇಕು ಹಾಗೂ ಅವರ ಮೇಲೆ ಕಠಿಣ ಕಾನೂನು ಪ್ರಕರಣ ದಾಖಲಿಸಬೇಕು.

ಇದನ್ನು ಓದಿದ್ದೀರಾ? ಮೇ 30 ರಂದು ಜರ್ಮನಿಯಿಂದ ಬೆಂಗಳೂರಿಗೆ ವಿಮಾನ ಕಾಯ್ದಿರಿಸಿರುವ ಪ್ರಜ್ವಲ್ ರೇವಣ್ಣ

• ಈ ವಿಕೃತ ಲೈಂಗಿಕ ಹಗರಣದ ಆರೋಪಿಯಾದ ತಮ್ಮ ಮೊಮ್ಮಗ, ಪ್ರಜ್ವಲ್ ರೇವಣ್ಣನನ್ನು ಯಾವುದೇ ದೇಶದಲ್ಲಿದ್ದರೂ ಶತಾಯಗತಾಯ ಹಿಡಿದು ತರುವಂತೆ- ಮಾಜಿ ಪ್ರಧಾನಿ ದೇವೇಗೌಡರು ಈ ಕೂಡಲೇ ಪ್ರಧಾನಮಂತ್ರಿಗಳಿಗೆ ಪತ್ರವನ್ನು ಬರೆದು, ಒತ್ತಡ ಹಾಕಲು ತಾವು ಆಗ್ರಹಿಸಬೇಕು.

• ಈ ಲೈಂಗಿಕ ಹಗರಣದಲ್ಲಿ ವಿವಿಧ ಬಗೆಯ ಲೈಂಗಿಕ ದುರ್ಬಳಕೆಗೆ ಒಳಗಾಗಿರುವ ಹಾಗೂ ಪ್ರಕರಣ ದಾಖಲಿಸಲು ಮುಂದಾಗುವ ಮಹಿಳೆಯರ ಗೌಪ್ಯತೆ ಕಾಪಾಡಲು, ಅವರಿಗೆ ಬೇಕಾದ ಮನೋವೈದ್ಯಕೀಯ ಆಪ್ತ ಸಮಾಲೋಚನೆ, ಕಾನೂನು ಸಲಹೆ, ಪ್ರತ್ಯೇಕ ವಕೀಲರ ನೇಮಕ, ಸೂಕ್ತ ರಕ್ಷಣೆ, ಪುನರ್ವಸತಿ ಮತ್ತು ಪರಿಹಾರವನ್ನು ತುರ್ತಾಗಿ ನೀಡಬೇಕು.

ಹೋರಾಟದ ನಡಿಗೆ ಹಾಸನದ ಕಡೆಗೆ

• ವಿಶೇಷ ತನಿಖಾ ತಂಡವು ಈ ಪ್ರಕರಣದಲ್ಲಿ ಯಾವುದೇ ರಾಜಕೀಯ ಪಕ್ಷಗಳ ಪ್ರಭಾವಕ್ಕೆ ಒಳಗಾಗದೇ, ನಿಷ್ಪಕ್ಷಪಾತವಾಗಿ ತನಿಖೆ ನಡೆಸುವುದನ್ನು ಖಾತ್ರಿ ಪಡಿಸುವ ಗುರುತರ ಜವಾಬ್ದಾರಿ ರಾಜ್ಯ ಸರ್ಕಾರದ ಮೇಲಿದೆ. ಹೀಗಾಗಿ ಅದು ಆಮೂಲಾಗ್ರವಾಗಿ, ನಿರ್ಭೀತಿಯಿಂದ ತನಿಖೆ ನಡೆಸಲು ಬೇಕಾದ ಅಧಿಕಾರವನ್ನು ಮತ್ತು ಅನುಕೂಲಗಳನ್ನು ಎಸ್‍ಐಟಿ ಮುಖ್ಯಸ್ಥರಿಗೆ ನೀಡಬೇಕು.

• ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಫೊರೆನ್ಸಿಕ್ ಸೈನ್ಸ್ ಲ್ಯಾಬೊರೆಟರಿ (ಎಫ್‍ಎಸ್‍ಎಲ್) ವರದಿಯನ್ನು ಶೀಘ್ರವಾಗಿ ಬಿಡುಗಡೆ ಮಾಡಬೇಕು.

• ಮಾಜಿ ಪ್ರಧಾನಿ ದೇವೇಗೌಡರಿಗಾಗಿ ವಿಶೇಷವಾಗಿ ನಿರ್ಮಿಸಿದ್ದ ವಸತಿಗೃಹ ದುರುಪಯೋಗ ಮಾಡಿಕೊಂಡು ಸಂಸದ ಪ್ರಜ್ವಲ್ ರೇವಣ್ಣ ಕಾನೂನುಬಾಹಿರ ಚಟುವಟಿಕೆ ನಡೆಸಿರುವುದಕ್ಕೆ ಪ್ರತ್ಯೇಕ ಮೊಕದ್ದಮೆ ಹೂಡಬೇಕು. ಹಾಗೂ ಕೆಲಸದ ಸ್ಥಳದಲ್ಲಿ ಲೈಂಗಿಕ ತಡೆ ಕಾಯ್ದೆಯನ್ವಯ ಪ್ರತ್ಯೇಕ ಕಲಂಗಳನ್ನು, ಸಾಧ್ಯವಿರುವ ಪ್ರಕರಣಗಳಲ್ಲಿ ಸೇರ್ಪಡೆಗೊಳಿಸಬೇಕು.

ಇದನ್ನು ಓದಿದ್ದೀರಾ? ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ತಿರಸ್ಕರಿಸಿದ ಕೋರ್ಟ್: ವಿದೇಶದಿಂದ ಬಂದ ಕೂಡಲೇ ಬಂಧನ?

• ಶಾಸಕ ರೇವಣ್ಣ ಅವರ ಮೇಲೆ ಕೂಡ ಲೈಂಗಿಕ ಕಿರುಕುಳ ಹಾಗೂ ಲೈಂಗಿಕ ದೌರ್ಜನ್ಯದ ಪ್ರಕರಣ ದಾಖಲಾಗಿದೆ. ಜೊತೆಗೆ ಪ್ರಜ್ವಲ್ ರೇವಣ್ಣನಿಂದ ಅತ್ಯಾಚಾರಕ್ಕೊಳಗಾಗಿರುವ ಸಂತೃಸ್ತ ಮಹಿಳೆಯ ಅಪಹರಣದ ಪ್ರಮುಖ ಆರೋಪಿಯೆಂದು ಕೂಡ ಇವರ ಮೇಲೆ ಪ್ರತ್ಯೇಕ ಪ್ರಕರಣ ದಾಖಲಾಗಿದೆ. ಈ ಪ್ರಕರಣದ ಹಿನ್ನೆಲೆಯಲ್ಲಿ ಇರುವ ಎಲ್ಲ ಆರೋಪಿಗಳ ಶೀಘ್ರ ಮತ್ತು ನಿಷ್ಪಕ್ಷಪಾತ ತನಿಖೆ ನಡೆದು ಅಪರಾಧಿಗಳನ್ನು ತಕ್ಷಣವೇ ಬಂಧನಕ್ಕೊಳಪಡಿಸಬೇಕು.

ಹೋರಾಟದ ನಡಿಗೆ ಹಾಸನದ ಕಡೆಗೆ

• ಈ ಸೂಕ್ಷ್ಮ ಮತ್ತು ಸಂಕೀರ್ಣ ಪ್ರಕರಣವನ್ನು ಮಹಿಳೆಯರ ಘನತೆಗೆ ಧಕ್ಕೆ ಬಾರದಂತೆ ಸಮರ್ಪಕವಾಗಿ ಇತ್ಯರ್ಥಪಡಿಸಲು ತ್ವರಿತ ‘ವಿಶೇಷ ನ್ಯಾಯಾಲಯ’ ಸ್ಥಾಪಿಸಬೇಕು. ಹಾಗೂ ಕಾನೂನಿನ ಪ್ರಕಾರ ನಿಗದಿತ ಕಾಲಾವಧಿಯಲ್ಲಿ ವಿಚಾರಣೆಯನ್ನು ತ್ವರಿತಗತಿಯಲ್ಲಿ ನಡೆಸಿ, ಅಪರಾಧಿಗಳಿಗೆ ಕಠಿಣ ಶಿಕ್ಷೆಯನ್ನು ಖಾತ್ರಿಪಡಿಸಬೇಕು.

• ಎಸ್‍ಐಟಿ ತನಿಖೆಯ ಅಂತಿಮ ವರದಿಯನ್ನು ಹೈಕೋರ್ಟ್ ನ್ಯಾಯಾಧೀಶರೊಬ್ಬರ ಉಸ್ತುವಾರಿ ಮತ್ತು ಪರಿಶೀಲನೆಯಲ್ಲಿ ಅಂತಿಮಗೊಳಿಸಿದ ನಂತರ ವರದಿಯನ್ನು ಸರ್ಕಾರಕ್ಕೆ ನೀಡಬೇಕು. ಈ ಕುರಿತು ಸರ್ಕಾರ ತಕ್ಷಣವೇ ಕ್ರಮ ಕೈಗೊಳ್ಳಬೇಕು.

• ಯಾವುದೇ ಸಂತ್ರಸ್ತರ ಘನತೆಗೆ ಧಕ್ಕೆ ಉಂಟುಮಾಡುವ, ಆತ್ಮವಿಶ್ವಾಸ ಕುಗ್ಗಿಸುವ, ದೂರು ದಾಖಲಿಸಲು ಅಡ್ಡಿಪಡಿಸುವಂತಹ ಮಾತುಗಳನ್ನು ಯಾರೇ ಆಡಿದರೂ, ಅವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು. ಹಾಗೂ ಸಂತ್ರಸ್ತರ ಪ್ರಾಣ ಮತ್ತು ಆಸ್ತಿಪಾಸ್ತಿಗೆ ಆರೋಪಿಗಳ ಕಡೆಯವರಿಂದ ಯಾವುದೇ ಧಕ್ಕೆಯಾಗದಂತೆ ಬಿಗಿ ಭದ್ರತೆ ಹಾಗೂ ರಕ್ಷಣೆ ಒದಗಿಸಬೇಕು.

ಇದನ್ನು ಓದಿದ್ದೀರಾ?  ಪ್ರಜ್ವಲ್‌ ರೇವಣ್ಣ ಪ್ರಕರಣ ಯಾವುದೇ ಡಿಟರ್ಜೆಂಟ್‌ನಿಂದ ಹೋಗುವ ಕಲೆಯಲ್ಲ: ಮಾಜಿ ರಾಜ್ಯಸಭಾ ಸದಸ್ಯ ಜವರೇಗೌಡ

• ಹಾಸನದ ಈ ವಿಕೃತ ಲೈಂಗಿಕ ಪ್ರಕರಣದ ವಿಡಿಯೋ, ಪೋಟೋಗಳು ಇನ್ನು ಮುಂದೆ ಯಾವುದೂ ಬಿಡುಗಡೆಗೊಳ್ಳದಂತೆ, ಇವುಗಳನ್ನು ಸಂಗ್ರಹಿಸಿ ಇಟ್ಟುಕೊಂಡಿರುವ ಎಲ್ಲರಿಂದಲೂ ಅವನ್ನು ಪಡೆದು ನಾಶಗೊಳಿಸಬೇಕು ಮತ್ತು ಅಪರಾಧಿಗಳಿಗೆ ಕಠಿಣ ಶಿಕ್ಷೆಯಾಗಬೇಕು. ಇದಕ್ಕಾಗಿಯೇ ಸೈಬರ್ ಪೊಲೀಸ್ ಇಲಾಖೆಯಲ್ಲಿ ವಿಶೇಷ ತಾಂತ್ರಿಕ ಅಧಿಕಾರಿಗಳನ್ನು ನೇಮಕ ಮಾಡಿ, ಅಂತರ್ಜಾಲದಲ್ಲಿ ಇರುವ ಈ ಸಂಬಂಧಿತ ಎಲ್ಲ ಫೋಟೋ, ವಿಡಿಯೋಗಳನ್ನು ತೆಗೆದುಹಾಕುವಂತೆ ಕ್ರಮವಹಿಸಬೇಕು.

• ಸಂತ್ರಸ್ತರ ಹಿತದೃಷ್ಟಿಯಿಂದ ನಿಷ್ಪಕ್ಷಪಾತ ತನಿಖೆ ಮತ್ತು ವಿಚಾರಣೆ ನಡೆಸಲು ಅಗತ್ಯವಾದ ಎಲ್ಲ ಸೌಕರ್ಯಗಳನ್ನು ಹಾಗೂ ವಾತಾವರಣವನ್ನು ಕಲ್ಪಿಸಲು ಎಲ್ಲ ಪಕ್ಷಗಳ ನಾಯಕರೂ ಅನುವು ಮಾಡಿಕೊಡಬೇಕು. ಇದಕ್ಕೆ ಅಡ್ಡಿಪಡಿಸುವವರ ವಿರುದ್ಧವಾಗಿ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು. ಹಾಗೂ ಸಂತ್ರಸ್ತರ ಮೇಲೆ ಆರೋಪಿಗಳ ಕಡೆಯವರಿಂದ ಯಾವುದೇ ಆಮಿಷ ಹಾಗೂ ಪ್ರಭಾವಗಳು ಬೀಳದಂತೆ ಸರ್ಕಾರವು ಎಲ್ಲ ರೀತಿಯ ಎಚ್ಚರಿಕೆ ವಹಿಸಬೇಕು.

• ಮುಖ್ಯಮಂತ್ರಿಗಳಾದ ತಾವು ಹಾಗೂ ಗೃಹ ಸಚಿವರು ಹಾಸನಕ್ಕೆ ತುರ್ತಾಗಿ ಆಗಮಿಸಿ- ವಿಕೃತ ಲೈಂಗಿಕ ದೌರ್ಜನ್ಯಕ್ಕೊಳಗಾದ ಮಹಿಳೆಯರಿಗೆ ಸಾರ್ವಜನಿಕವಾಗಿ ಸಾಂತ್ವನ ಹೇಳಿ, ಧೈರ್ಯ ತುಂಬಬೇಕು. ಗೌಪ್ಯತೆ ಕಾಪಾಡುವ ಭರವಸೆ ನೀಡಬೇಕು. ಸಂತ್ರಸ್ತರಿಗೆ ಅಗತ್ಯವಿರುವ ಎಲ್ಲಾ ಕಾನೂನು ನೆರವು, ಭದ್ರತೆ, ಪರಿಹಾರ, ಪುನರ್ವಸತಿ ಮತ್ತು ರಕ್ಷಣೆಯನ್ನು ಖಾತ್ರಿಗೊಳಿಸಬೇಕು. ಜೊತೆಗೆ ಈ ಲೈಂಗಿಕ ದೌರ್ಜನ್ಯದ ವಿರುದ್ಧ ಹಾಗೂ ಸಂತ್ರಸ್ತ ಮಹಿಳೆಯರ ಪರವಾಗಿ ಹೋರಾಟ ನಡೆಸುತ್ತಿರುವ ಸಂಘಟನೆಗಳ ಪ್ರಮುಖರನ್ನು ಭೇಟಿಯಾಗಿ ವಾಸ್ತವಾಂಶವನ್ನು ವಿವರವಾಗಿ ಚರ್ಚಿಸಿ, ಅದನ್ನಾಧರಿಸಿ ತುರ್ತು ಕ್ರಮ ಕೈಗೊಳ್ಳಬೇಕು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X