ಚಂದ್ರಶೇಖರ್‌ ಆತ್ಮಹತ್ಯೆ | ಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಜೂನ್‌ 6ರ ಗಡುವು ನೀಡಿದ ಆರ್‌.ಅಶೋಕ್

Date:

Advertisements

ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ದಲಿತರ ಹಣವನ್ನು ಕಾಂಗ್ರೆಸ್‌ ಸರ್ಕಾರ ಲೂಟಿ ಮಾಡಿದೆ. ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ಬಿ.ನಾಗೇಂದ್ರ ಜೂನ್‌ 6 ರೊಳಗೆ ರಾಜೀನಾಮೆ ನೀಡದಿದ್ದರೆ ರಾಜ್ಯಾದ್ಯಂತ ಪ್ರತಿಭಟಿಸಲಾಗುವುದು ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಎಚ್ಚರಿಕೆ ನೀಡಿದರು.

ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ದಲಿತರ ಹಣವನ್ನು ಟಕಾಟಕ್‌ ಎಂದು ಲೂಟಿ ಮಾಡಿದ ಕಾಂಗ್ರೆಸ್‌ ಸರ್ಕಾರವನ್ನು ಟಕಾಟಕ್‌ ಎಂದೇ ಅಧಿಕಾರದಿಂದ ಕೆಳಕ್ಕಿಳಿಸುವ ದಿನ ದೂರವಿಲ್ಲ. ಈ ಹೋರಾಟವನ್ನು ತಾರ್ಕಿಕ ಅಂತ್ಯಕ್ಕೆ ತೆಗೆದುಕೊಂಡು ಹೋಗುತ್ತೇವೆ” ಎಂದರು.

“ಪರಿಶಿಷ್ಟ ಪಂಗಡದ 187 ಕೋಟಿ ರೂ. ಹಣವನ್ನು ಗುಳುಂ ಮಾಡಿದ್ದೇ ಕಾಂಗ್ರೆಸ್‌ ಸರ್ಕಾರದ ಸಾಧನೆ. ಚುನಾವಣೆಗೆ ಮುನ್ನ ದಲಿತರ ಉದ್ಧಾರ ಎಂದು ಕಾಂಗ್ರೆಸ್‌ ಹೇಳುತ್ತಿತ್ತು. ನಂತರ ದಲಿತರನ್ನು ಶೋಷಣೆ ಮಾಡಿದೆ. ರಾಮನ ಹೆಸರು ಕಂಡರೆ ಆಗದ ಕಾಂಗ್ರೆಸ್‌ಗೆ ವಾಲ್ಮೀಕಿ ಹೆಸರಿನ ನಿಗಮವನ್ನೂ ಕಂಡರೆ ಆಗುವುದಿಲ್ಲ. ಹೆಣ್ಣುಮಕ್ಕಳಿಗೆ ಸುರಕ್ಷತೆ ಗ್ಯಾರಂಟಿ ಇಲ್ಲವೆಂದು ಗೊತ್ತಿತ್ತು. ಈಗ ಅಧಿಕಾರಿಗಳಿಗೂ ಗ್ಯಾರಂಟಿ ಇಲ್ಲ” ಎಂದು ಕಿಡಿಕಾರಿದರು.

Advertisements

ಕೊಲೆ ಪ್ರಕರಣ ದಾಖಲಿಸಿ

“ಹಿಂದೆ ಕೆ.ಎಸ್‌.ಈಶ್ವರಪ್ಪನವರ ಮೇಲೆ ಆರೋಪ ಬಂದಾಗ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲ ಪ್ರಶ್ನೆ ಕೇಳಿದ್ದರು. ಹಾಗೆಯೇ ಸಿಎಂ ಸಿದ್ದರಾಮಯ್ಯ ಅವರಂತೂ ಸೆಕ್ಷನ್‌ 302 ಅಡಿ ಪ್ರಕರಣ ದಾಖಲಿಸಬೇಕೆಂದು ಆಗ್ರಹಿಸಿದ್ದರು. ಈಗ ಡೆತ್‌ನೋಟ್‌ನಲ್ಲಿ ಸಚಿವರ ಹೆಸರಿದ್ದರೂ ಯಾವುದೇ ಕ್ರಮ ವಹಿಸಿಲ್ಲ. ಮುಖ್ಯಮಂತ್ರಿಗಳಿಗೆ ಮಾನ ಮರ್ಯಾದೆ ಇಲ್ಲ. ಈಗಲೂ ಸಚಿವರ ವಿರುದ್ಧ ಕೊಲೆ ಪ್ರಕರಣ ದಾಖಲಿಸಲಿ” ಎಂದು ಒತ್ತಾಯಿಸಿದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

BREAKING NEWS | ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್

ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್ ಬಂದಿದೆ ಎಂದು...

ಬಿಜೆಪಿ-ಆರ್‌ಎಸ್‌ಎಸ್‌ ಜತೆ ಕೈ ಜೋಡಿಸುವ ಪ್ರಶ್ನೆಯೇ ಇಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ನಾನು ಅಪ್ಪಟ ಕಾಂಗ್ರೆಸ್ಸಿಗ. ಹುಟ್ಟಿನಿಂದ ಕಾಂಗ್ರೆಸ್ಸಿಗ. ಜೀವ ಇರುವ ತನಕವೂ ಕಾಂಗ್ರೆಸ್ಸಿಗನಾಗಿಯೇ...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

Download Eedina App Android / iOS

X