ಹಾಸನ ಚಲೋ | ಪ್ರಜ್ವಲ್ ಗೆದ್ದರೆ ಮತ್ತೊಮ್ಮೆ ಹೋರಾಟ: ಬಡಗಲಪುರ ನಾಗೇಂದ್ರ

Date:

Advertisements

ನಮ್ಮ ರಾಜ್ಯದಲ್ಲಿ ಯಾರೊಬ್ಬರ ಅಧಿಕಾರದ ಮದವೂ ನಡೆಯುವುದಿಲ್ಲ ಎಂಬ ಸಂದೇಶವನ್ನು ಇಡೀ ರಾಜ್ಯಕ್ಕೆ ರವಾನಿಸುವ ನಿಟ್ಟಿನಲ್ಲಿ ಈ ಹೋರಾಟ ರೂಪಿಸಲಾಗಿದೆ ಎಂದು ರೈತ ಸಂಘಟನೆ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಆಕ್ರೋಶ ವ್ಯಕ್ತಪಡಿಸಿದರು.

ಪ್ರಜ್ವಲ್‌ ಲೈಂಗಿಕ ಹಗರಣ ಖಂಡಿಸಿ ನಡೆದ ಹಾಸನ ಚಲೋ ಕಾರ್ಯಕ್ರಮದಲ್ಲಿ ಮಾತನಾಡಿ, “ಒಂದು ವೇಳೆ ಚುನಾವಣೆಯಲ್ಲಿ ಪ್ರಜ್ವಲ್ ರೇವಣ್ಣ ಗೆದ್ದರೆ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಿಮಗೆ ಅಧಿಕಾರ ಹೊಂದಲು ಅವಕಾಶವಿಲ್ಲವೆಂದು ತಿಳಿಸಲು ನಾವು ಹಾಸನದ ಮಹಿಳೆಯರೊಂದಿಗೆ ಮತ್ತೊಮ್ಮೆ ಹೋರಾಟ ಮಾಡೋಣ” ಎಂದು ಕರೆ ನೀಡಿದರು.

ಗುರುಪ್ರಸಾದ್ ಕೆರಗೋಡು ಮಾತನಾಡಿ, “ಮಾಜಿ ಪ್ರಧಾನಿಗಳೇ ನಿಮ್ಮ ಮೊಮ್ಮಗನ ಬಗ್ಗೆ ಮಾತನಾಡುವಾಗ ಕನಿಷ್ಟ ಕ್ಷಮೆ ಕೇಳುವ ವಿವೇಚನೆ ಇರಲಿಲ್ಲ ನಿಮಗೆ. ನಿಮ್ಮ ಹೇಳಿಕೆಗಳು ಖಂಡನೀಯ. ಕಾನೂನಿನ ವ್ಯವಸ್ಥೆಯಲ್ಲಿ ತಪ್ಪಿಸಿಕೊಳ್ಳುವ ನಿಟ್ಟಿನಲ್ಲಿ ಕುಮಾರಸ್ವಾಮಿ ಹೇಳಿಕೆ ಕೊಡುತ್ತಿದ್ದಾರೆ. ಅಧಿಕಾರದ ದುರುಪಯೋಗ ಮಾಡಿಕೊಂಡು ಅತ್ಯಾಚಾರಗೈದ ನಿಮ್ಮ ಮೊಮ್ಮಗನನ್ನು ಕ್ಷಮಿಸಬಾರದು. ನೀವು ಇಡೀ ರಾಜ್ಯದ ಜನರ ಕ್ಷಮೆ ಕೇಳಬೇಕು. ದೇವೇಗೌಡರು ರಾಜಕೀಯ ನಿವೃತ್ತಿ ಪಡೆಯಬೇಕು. ಅವರ ಕುಟುಂಬಸ್ಥರ ರಾಜಕೀಯ ಅಂತ್ಯವಾಗಬೇಕು. ನಿಮ್ಮ ಅಧಿಕಾರ ದುರುಪಯೋಗದ ಕೆಲಸಗಳು ಸಾಕು” ಎಂದರು.

Advertisements

ಹೋರಾಟಗಾರ ಸ್ಟ್ಯಾನ್ಲಿ ಮಾತನಾಡಿ, “ಮಾನಗೆಟ್ಟ ರಾಜಕಾರಣದ ವಿರುದ್ಧ ಈ ಹೋರಾಟ ಸತ್ಯದ ಕನ್ನಡಿ ಹಿಡಿಯುತ್ತಿದೆ. ಪ್ರಜ್ವಲ್ ರೇವಣ್ಣನಿಗೆ ಮರ್ಯಾದೆ ಇದ್ದಿದ್ದರೆ ಇಷ್ಟೊತ್ತಿಗೆ ರಾಜೀನಾಮೆ ಕೊಡಬೇಕಿತ್ತು. ನಾಡಿನ ಜನರ ಕ್ಷಮೆ ಕೇಳಬೇಕಿತ್ತು. ಜನರ ಸಮ್ಮುಖದಲ್ಲಿ ನ್ಯಾಯ ಕೊಡಿಸಬೇಕಿತ್ತು. ನಿಮ್ಮ ಸಮರ್ಥನೆ ಖಂಡನೀಯ. ಇದು ನಿಮಗೆ ಯಾವುದೇ ಗೌರವ ತರುವುದಿಲ್ಲ. ಆತನನ್ನು ಕುಟುಂಬದಿಂದ ಹೊರಗೆ ಹಾಕದೆ ಇರುವುದಕ್ಕೆ ನಮಗೆ ಬೇಸರ ಇದೆ” ಎಂದರು.

“ಪ್ರಜ್ವಲ್ ವಿರುದ್ಧ ಹಾಕಿರುವ ಎಫ್‌ಐಆರ್‌ಗಳು ಸ್ಟೇಷನ್ ಬೇಲ್‌ನಿಂದಲೆ ಹೊರಬರುವಷ್ಟು ಸರಳವಾಗಿವೆ. ಎಸ್‌ಐಟಿ ಒಂದು ತಿಂಗಳ ಬಳಿಕ ಪ್ರಜ್ವಲ್ ಅವರ ಹಾಸಿಗೆ, ದಿಂಬು ವಶಪಡಿಸಿಕೊಂಡಿದೆ. ದಯವಿಟ್ಟು ಅದರಲ್ಲಿ ಒಂದು ಕೂದಲು ಇರದಂತೆ ನೋಡಿಕೊಳ್ಳಿ” ಎಂದು ಪರೋಕ್ಷವಾಗಿ ವ್ಯಂಗ್ಯವಾಡಿದರು.

ಹಾಸನ ಚಲೋ ಚಳುವಳಿಯ ಅಧ್ಯಕ್ಷತೆ ವಹಿಸಿದ್ದ ರೂಪ ಹಾಸನ ಮಾತನಾಡಿ, “ಇದು ಅತ್ಯಾಚಾರ ಅಲ್ಲ. ಇಲ್ಲಿ ನಡೆದಿರುವುದು ವಿಕೃತ ಲೈಂಗಿಕ ಹತ್ಯಾಕಾಂಡ. ಒಬ್ಬ ಸಂಸದನ ನಿರ್ಲಜ್ಜತನ ಅಕ್ಷಮ್ಯ” ಎಂದು ಹೇಳಿದರು.‌

ಈ ಸುದ್ದಿ ಓದಿದ್ದೀರಾ? ಹಾಸನ ಚಲೋ | ಪ್ರಜ್ವಲ್ ಗೆದ್ದರೂ- ಸೋತರೂ ಆತನನ್ನು ಒಪ್ಪಿಕೊಳ್ಳಬೇಡಿ: ಹೋರಾಟಗಾರ್ತಿ ಕೆ ನೀಲಾ

ಇಂದು ಅನೇಕ ಹೋರಾಟಗಾರರು ಬಂದು ನಾವಿದ್ದೇವೆ ಎಂಬ ಸಂದೇಶ ಕೊಟ್ಟಿದ್ದಾರೆ. ಆದ್ದರಿಂದ ಸಂತ್ರಸ್ತೆಯರು ಧೈರ್ಯವಾಗಿ ಪ್ರಕರಣವನ್ನು ಎದುರಿಸಿ ಎಂದು ಸಂತ್ರಸ್ತೆಯರಿಗೆ ಧೈರ್ಯ ತುಂಬಿದರು.

ವಿಡಿಯೋ ಹಂಚಿಕೆ ನಿಲ್ಲಿಸಿ : “ಪ್ರಜ್ವಲ್ ರೇವಣ್ಣನನ್ನು ಕೂಡಲೇ ಬಂಧಿಸಬೇಕು. ಹಾದಿ ಬೀದಿಯಲ್ಲಿ ಚೆಲ್ಲಾಡುತ್ತಿರುವ ವೀಡಿಯೊಗಳನ್ನು ನಿಲ್ಲಿಸಬೇಕು. ವಿಡಿಯೋ ಹಂಚಿಕೆಯನ್ನು ನಿಲ್ಲಿಸದಿದ್ದರೆ ಸರ್ಕಾರದ ಮೇಲಿನ ವಿಶ್ವಾಸ ಹೋಗಲಿದೆ. ಈ ಹತ್ಯಾಕಾಂಡಕ್ಕೆ ತಾರ್ಕಿಕ ಅಂತ್ಯ ಹಾಡದಿದ್ದರೆ ಮುಂದಿನ ದಿನಗಳಲ್ಲಿ ತೀವ್ರ ಹೋರಾಟ ರೂಪಿಸಲಾಗುವುದು” ಎಂದು ಪ್ರತಿಭಟನಾಕಾರರು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

Download Eedina App Android / iOS

X