ಪಂಜಾಬ್ ಮಾಫಿಯಾವನ್ನು ಹತ್ತಿಕ್ಕಲು ಯುಪಿ ಬುಲ್ಡೋಜರ್‌ ಕಳುಹಿಸುತ್ತೇವೆ: ಸಿಎಂ ಯೋಗಿ

Date:

Advertisements

ಪಂಜಾಬ್ ‘ಭೂಮಿ, ಡ್ರಗ್ಸ್ ಮತ್ತು ಮರಳು ಮಾಫಿಯಾ’ವಾಗಿ ಬದಲಾಗಿದೆ. ಪಂಜಾಬ್‌ನ ಮಾಫಿಯಾವನ್ನು ಹತ್ತಿಕ್ಕಲು ಉತ್ತರ ಪ್ರದೇಶದ ಬುಲ್ಡೋಜರ್‌ಗಳನ್ನು ಕಳಿಸುತ್ತೇವೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.

ಗುರುವಾರ, ಪಂಜಾಬ್‌ನ ಲೂಧಿಯಾನ ಮತ್ತು ಆನಂದಪುರ ಸಾಹಿಬ್‌ನಲ್ಲಿ ನಡೆದ ಚುನಾವಣಾ ಪ್ರಚಾರದಲ್ಲಿ ಅವರು ಮಾತನಾಡಿದರು “ಪಂಜಾಬ್‌ನ ಪುಣ್ಯ ಭೂಮಿಯನ್ನು ಎಎಪಿ ಸರ್ಕಾರ ಮತ್ತು ಹಿಂದಿನ ಕಾಂಗ್ರೆಸ್ ಸರ್ಕಾರಗಳು ‘ಅಶುದ್ಧ’ಗೊಳಿಸಿವೆ. ಕಾಂಗ್ರೆಸ್ ಮತ್ತು ಎಎಪಿಗೆ ಪಂಜಾಬ್ ಜನರ ಭಾವನೆಗಳು ಅರ್ಥವಾಗುತ್ತಿಲ್ಲ. ಈ ಸರ್ಕಾರಗಳ ನಿರಾಸಕ್ತಿಯಿಂದಾಗಿಯೇ ರಾಜ್ಯ ಭೂಮಾಫಿಯಾ, ಡ್ರಗ್ ಮಾಫಿಯಾ, ಮರಳು ಮಾಫಿಯಾಗಳ ಕೂಪವಾಗಿ ಮಾರ್ಪಟ್ಟಿದೆ. ಈ ಮಾಫಿಯಾಗಳನ್ನು ಹತ್ತಿಕ್ಕಬೇಕು. ಇದಕ್ಕಾಗಿ ಲೂಧಿಯಾನ ಮತ್ತು ಆನಂದಪುರ ಸಾಹಿಬ್‌ನ ಜನರು ಮತ ಚಲಾಯಿಸಿ ಬಿಜೆಪಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಬೇಕು” ಎಂದರು.

“ಮಾಫಿಯಾಗಳನ್ನು ಹತ್ತಿಕ್ಕಲು ನಾನು ಉತ್ತರಪ್ರದೇಶದಿಂದ ಬುಲ್ಡೋಜರ್‌ಗಳನ್ನು ಕಳುಹಿಸುತ್ತೇನೆ. ಪಂಜಾಬ್‌ನಲ್ಲಿ ಬಿಜೆಪಿ ಮುಂದಿನ ಸರ್ಕಾರವನ್ನು ರಚಿಸಿದರೆ, ಅದು 48 ಗಂಟೆಗಳಲ್ಲಿ ಮಾಫಿಯಾ ಗುಂಪುಗಳನ್ನು ತೊಡೆದುಹಾಕುತ್ತದೆ” ಎಂದು ಅವರು ಹೇಳಿದರು.

Advertisements

ಲೋಕಸಭಾ ಚುನಾವಣೆಯ ಅಂತಿಮ ಹಂತದ ಮತದಾನ ಜೂನ್ 1ರಂದು ನಡೆಯಲಿದೆ. ಚುನಾವಣೆಯ ಬಹಿರಂಗ ಪ್ರಚಾರಕ್ಕೆ ಗುರುವಾರ ಸಂಜೆ ತೆರೆಬಿದ್ದಿದೆ. ಜೂನ್‌ 4ರಂದು ಮತ ಎಣಿಕೆ ನಡೆಯಲಿದ್ದು, ಫಲಿತಾಂಶ ಹೊರಬರಲಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಬಿಐ ಅಧಿಕಾರಿಗಳಂತೆ ನಟಿಸಿ 2.3 ಕೋಟಿ ರೂ. ದೋಚಿದ್ದ ಗ್ಯಾಂಗ್: ಇಬ್ಬರ ಬಂಧನ

ಕೇಂದ್ರ ತನಿಖಾ ದಳ (ಸಿಬಿಐ) ಅಧಿಕಾರಿಗಳಂತೆ ನಟಿಸಿ ಉದ್ಯಮಿಯೊಬ್ಬರ ಕಚೇರಿಯಿಂದ ಗ್ಯಾಂಗ್...

ಬೀದಿ ನಾಯಿಗಳಿಗೆ ಲಸಿಕೆ ಹಾಕಿದ ನಂತರ ಅದೇ ಸ್ಥಳಕ್ಕೆ ತಂದು ಬಿಡಬೇಕು: ಸುಪ್ರೀಂ ಕೋರ್ಟ್‌

ಬೀದಿ ನಾಯಿಗಳಿಗೆ ಸಂಬಂಧಿಸಿದ್ದಂತೆ ಆಗಸ್ಟ್ 11ರ ಆದೇಶವನ್ನು ಮಾರ್ಪಡಿಸಿದ ಸುಪ್ರೀಂ...

ವಿವಾದಾತ್ಮಕ ಯೂಟ್ಯೂಬರ್ ಎಲ್ವಿಶ್ ಮನೆ ಮೇಲೆ ಗುಂಡಿನ ದಾಳಿ: ಎನ್‌ಕೌಂಟರ್ ಮಾಡಿ ಆರೋಪಿ ಬಂಧನ

ಬಲಪಂಥೀಯ, ವಿವಾದಾತ್ಮಕ ಯೂಟ್ಯೂಬರ್ ಮತ್ತು ಬಿಗ್ ಬಾಸ್ ವಿಜೇತ ಎಲ್ವಿಶ್ ಯಾದವ್‌...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

Download Eedina App Android / iOS

X