ಶಿವಮೊಗ್ಗ | ವಾಟ್ಸಾಪ್‌ ಗ್ರೂಪ್‌ನಲ್ಲಿ ಸಿಎಂ ನಿಂದನೆ; ಬುದ್ದಿ ಹೇಳಿದ್ದಕ್ಕೆ ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಹಲ್ಲೆ

Date:

Advertisements

ಮಲ್ಲೇಶ್ ಎಂಬ ಕಾಂಗ್ರೆಸ್ ಕಾರ್ಯಕರ್ತನ ಮೇಲೆ ವಿರೇಶ್ ಎಂಬ ಯುವಕನಿಂದ ಹಲ್ಲೆ ಮಾಡಿರುವ ಘಟನೆ ಶಿವಮೊಗ್ಗ ಗ್ರಾಮಾಂತರ ಮಂಗೋಟೆ ಗ್ರಾಮದಲ್ಲಿ ನಡೆದಿದೆ.

ಮಂಗೋಟೆ ಯುವಕರ ಬಳಗ ವಾಟ್ಸಾಪ್ ಗ್ರೂಪ್‌ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ವಿರೇಶ್ ಎಂಬ ಯುವಕ ತುಂಬಾ ಅವಾಚ್ಯ ಮತ್ತು ಅಸಭ್ಯ ಶಬ್ದಗಳಿಂದ ನಿಂದಿಸಿದ್ದನು. ಈ ಹಿನ್ನೆಲೆಯಲ್ಲಿ, ʼರಾಜ್ಯದ ಮುಖ್ಯಮಂತ್ರಿ ಬಗ್ಗೆ ಈ ರೀತಿ ವಾಟ್ಸಾಪ್ ಗ್ರೂಪ್‌ನಲ್ಲಿ ಮಾತನಾಡುವುದು ಅಸಭ್ಯ ಮತ್ತು ಅವಾಚ್ಯ ಶಬ್ದ ನಿಂದನೆ ಮಾಡುವುದು ತಪ್ಪುʼ ಎಂದು ತಿಳಿ ಹೇಳಿದ್ದಕ್ಕೆ ರಾತ್ರಿ ಸುಮಾರು 9-46ರಲ್ಲಿ ಮಲ್ಲೇಶ್ ಅವರ ಮನೆಗೆ ನುಗ್ಗಿದ ವಿರೇಶ್ ಮದ್ಯಪಾನ ಮಾಡಿಕೊಂಡು ಬಂದಿದ್ದ ಎನ್ನಲಾಗಿದೆ.

ಹಲ್ಲೆಗೊಳಗಾದ ಮಲ್ಲೇಶ್ ಈ ದಿನ.ಕಾಮ್‌ನೊಂದಿಗೆ ಮಾತನಾಡಿ, “ಮಂಗೋಟೆ ಯುವಕರ ಬಳಗ ವಾಟ್ಸಾಪ್ ಗ್ರೂಪ್‌ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಅವಾಚ್ಯವಾಗಿ ನಿಂದಿಸಿದ್ದರಿಂದ, ಅವರು ರಾಜ್ಯದ ಮುಖ್ಯಮಂತ್ರಿ ಹಾಗೆಲ್ಲ ಅವಾಚ್ಯ ಶಬ್ದಗಳಿಂದ ವಾಟ್ಸಾಪ್‌ ಗುಂಪಿನಲ್ಲಿ ಅವಾಚ್ಯ ಶಬ್ದ ಬಳಸುವುದು ತಪ್ಪು ಎಂದಿದ್ದಕ್ಕೆ, ಪಾನ ಮತ್ತನಾಗಿ ನಮ್ಮ ಮನೆಗೆ ಬಂದ ಆತ ಬಾಗಿಲು ತೆರೆಯುತ್ತಿದಂತೆ ನನ್ನ ಮೇಲೆ ಮನಬಂದಂತೆ ಹಲ್ಲೆ ಮಾಡಿದ್ದಾನೆ. ಮುಖ, ಕುತ್ತಿಗೆ, ಹೊಟ್ಟೆ ಭಾಗಕ್ಕೆ ತುಂಬಾ ಪೆಟ್ಟಾಗಿದೆ” ಎಂದು ತಿಳಿಸಿದ್ದಾರೆ.

Advertisements

“ತದನಂತರ ಊರಿನವರು ಮತ್ತು ಪಂಚಾಯತ್ ಅವರು ಎಲ್ಲರೂ ಬುದ್ದಿಮಾತು ಹೇಳಿ ರಾಜಿ ಮಾಡಿಸಿದ್ದಾರೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಕಲಬುರಗಿ | ನಿಷ್ಪಕ್ಷಪಾತ ಮತ ಎಣಿಕೆಗೆ ʼಎದ್ದೇಳು ಕರ್ನಾಟಕʼ ಆಗ್ರಹ

“ಸಮಾಜದಲ್ಲಿ ಇಂತಹ ನಡೆವಳಿಕೆ ಸಮಂಜಸವಲ್ಲ, ಇಂತಹ ಪುಂಡರಿಗೆ ಸರಿಯಾಗಿ ಬುದ್ದಿ ಹೇಳೋ ಕೆಲಸ ಮತ್ತು ಕ್ರಮವಾಗಬೇಕು. ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಎಚ್ಚರ ವಹಿಸಬೇಕು. ಪಕ್ಷ ಅಥವಾ ವ್ಯಕ್ತಿ ಅಭಿಮಾನ, ವ್ಯಕ್ತಿಯಿಂದ ವ್ಯಕ್ತಿಗೆ ಬದಲಾವಣೆ ಇರುವುದು ಸಹಜ. ಅದನ್ನು ವಯಕ್ತಿಕ ದ್ವೇಷವಾಗಿ ಬೆಳಸಬಾರದು. ಸಮಾಜದಲ್ಲಿ ಶಾಂತಿ ಕಾಪಾಡಬೇಕಾಗಿರುವುದು ಎಲ್ಲರ ಕರ್ತವ್ಯವಾಗಿದೆ” ಎಂದು ಸ್ಥಳೀಯರು ಅಭಿಪ್ರಾಯ ವ್ಯಕ್ತಪಡಿಸಿದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X