ಸಂತ್ರಸ್ತೆಯ ಅಪಹರಣ ಪ್ರಕರಣ | ರೇವಣ್ಣಗೆ ಜಾಮೀನು ನೀಡಿರುವ ಆದೇಶದಲ್ಲಿ ದೋಷ ಇದ್ದಂತಿದೆ: ಹೈಕೋರ್ಟ್‌

Date:

Advertisements

ಲೈಂಗಿಕ ದೌರ್ಜನ್ಯಕ್ಕೊಳಗಾದ ಸಂತ್ರಸ್ತ ಮಹಿಳೆಯ ಅಪಹರಣ ಪ್ರಕರಣದಲ್ಲಿ ಜೆಡಿಎಸ್‌ ಶಾಸಕ ಎಚ್‌ ಡಿ ರೇವಣ್ಣಗೆ ಜಾಮೀನು ಮಂಜೂರು ಮಾಡಿರುವ ಆದೇಶದಲ್ಲಿ ಕಾನೂನು ನಿಬಂಧನೆಯನ್ನು ತಪ್ಪಾಗಿ ವ್ಯಾಖ್ಯಾನಿಸಿದಂತಿದೆ ಎಂದು ಶುಕ್ರವಾರ ಕರ್ನಾಟಕ ಹೈಕೋರ್ಟ್‌ ಮೌಖಿಕವಾಗಿ ಹೇಳಿರುವುದಾಗಿ ‘ಬಾರ್ & ಬೆಂಚ್’ ವರದಿ ಮಾಡಿದೆ.

ರೇವಣ್ಣಗೆ ಜಾಮೀನು ಮಂಜೂರು ಮಾಡಿರುವುದನ್ನು ರದ್ದುಪಡಿಸುವಂತೆ ಕೋರಿ ವಿಶೇಷ ತನಿಖಾ ದಳವು ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ನಡೆಸಿದ ನ್ಯಾಯಮೂರ್ತಿ ಕೃಷ್ಣ ಎಸ್‌. ದೀಕ್ಷಿತ್‌ ಅವರ ಏಕಸದಸ್ಯ ಪೀಠವು ವಿಚಾರಣೆ ನಡೆಸಿದ ವೇಳೆ ಈ ರೀತಿಯಲ್ಲಿ ಅಭಿಪ್ರಾಯಪಟ್ಟಿದೆ.

ಎಸ್‌ಐಟಿ ಪರವಾಗಿ ಹಾಜರಾಗಿದ್ದ ವಿಶೇಷ ಸರ್ಕಾರಿ ಅಭಿಯೋಜಕ ಪ್ರೊ. ರವಿವರ್ಮ ಕುಮಾರ್‌, “ಸಂತ್ರಸ್ತೆಯನ್ನು ಅಪಹರಿಸಿರುವ ಈ ಪ್ರಕರಣ ಅತ್ಯಂತ ಗಂಭೀರವಾಗಿದೆ. ಜಾಮೀನು ನೀಡಿರುವ ವಿಚಾರಣಾಧೀನ ನ್ಯಾಯಾಲಯದ ಆದೇಶ ತಪ್ಪಾಗಿದೆಯೇ ಎಂಬ ಪ್ರಶ್ನೆ ಉದ್ಭವಿಸಿದೆ. ವಿಚಾರಣಾಧೀನ ನ್ಯಾಯಾಲಯವು ಐಪಿಸಿ ಸೆಕ್ಷನ್‌ 364ಎ ಅರ್ಜಿಯಲ್ಲಿ ಪ್ರಮಾದ ಎಸಗಿದೆ” ಎಂದು ಉಲ್ಲೇಖಿಸಿದರು.

Advertisements

ಆಗ ಪೀಠವು, “ವಾದದಲ್ಲಿ ಬಲ ಇದೆ. ದಾಖಲೆಯನ್ನು ಪರಿಶೀಲಿಸಿದರೆ ದೋಷ ಇದ್ದಂತಿದೆ” ಎಂದಿತು. ಆಗ ಪ್ರೊ. ರವಿವರ್ಮ ಕುಮಾರ್‌ ಅವರು, “ದೂರು ನೀಡುವುದರಿಂದ ಆಕೆಯನ್ನು ತಡೆಯಲು ಅಪಹರಿಸಲಾಗಿದೆ. ಸಾಕ್ಷಿಯನ್ನು ಅಪಹರಿಸಲಾಗಿದೆ. ಪ್ರಕರಣವನ್ನು ತುರ್ತಾಗಿ ಆಲಿಸಬೇಕು. ಈ ನಡೆಗೆ ಅನುಮತಿಸಿದರೆ ಯಾರೂ ಕ್ರಿಮಿನಲ್‌ ಪ್ರಕರಣ ದಾಖಲಿಸಲಾಗದು” ಎಂದರು.

ಆಗ ನ್ಯಾಯಮೂರ್ತಿ ದೀಕ್ಷಿತ್‌ ಅವರು, “ವಾದ ಆಲಿಸಲು ಇದು ಸೂಕ್ತ ಪ್ರಕರಣವಾಗಿದೆ. ನೋಟಿಸ್‌ ಜಾರಿ ಮಾಡಲಾಗಿದೆ. ಈ ಪೀಠ ಪ್ರತ್ಯೇಕವಾಗಿ ಕುಳಿತಾಗ ಪ್ರಕರಣವನ್ನು ವಿಚಾರಣೆಗೆ ಪಟ್ಟಿ ಮಾಡಬೇಕು” ಎಂದು ಆದೇಶಿಸಿತು.

ಹೊಳೆನರಸೀಪುರದಲ್ಲಿ ಏಪ್ರಿಲ್‌ 28ರಂದು ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದ ದೂರುದಾರೆಯನ್ನು ಅಪಹರಿಸಿದ ಸಂಬಂಧ ಆಕೆಯ ಪುತ್ರ ನೀಡಿದ ದೂರು ಆಧರಿಸಿ ಮೈಸೂರು ಜಿಲ್ಲೆಯ ಕೆ ಆರ್‌ ನಗರ ಠಾಣೆಯಲ್ಲಿ ಅಪಹರಣ ಪ್ರಕರಣ ದಾಖಲಾಗಿತ್ತು. ಈ ಎರಡೂ ಪ್ರಕರಣಗಳಲ್ಲಿ ಶಾಸಕ ಎಚ್ ಡಿ ರೇವಣ್ಣಗೆ ಜಾಮೀನು ಮಂಜೂರಾಗಿದೆ.

ರೇವಣ್ಣಗೆ ಸೆಕ್ಷನ್‌ 364ಎ ಅನ್ವಯಿಸಲ್ಲ: ಸಿ ವಿ ನಾಗೇಶ್‌

ಕೆ ಆರ್‌ ನಗರ ಠಾಣೆಯಲ್ಲಿ ತಮ್ಮ ವಿರುದ್ಧ ದಾಖಲಿಸಿರುವ ಎಫ್‌ಐಆರ್‌ ರದ್ದುಪಡಿಸುವಂತೆ ರೇವಣ್ಣ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನೂ ನ್ಯಾಯಾಲಯವು ಇಂದು ನಡೆಸಿತು. ಪ್ರಾಸಿಕ್ಯೂಷನ್‌ಗೆ ನೋಟಿಸ್‌ ಜಾರಿ ಮಾಡಿ, ವಿಚಾರಣೆಯನ್ನು ಸೋಮವಾರಕ್ಕೆ ಮುಂದೂಡಿತು.

ರೇವಣ್ಣ ಪರವಾಗಿ ಹಿರಿಯ ವಕೀಲ ಸಿ ವಿ ನಾಗೇಶ್‌ ಅವರು, “ದೂರಿನ ಆರೋಪವನ್ನು ಪರಿಗಣಿಸಿದರೆ ಐಪಿಸಿ 364ಎ ಅಡಿ ರೇವಣ್ಣ ವಿರುದ್ಧ ಪ್ರಕರಣ ದಾಖಲಿಸಲಾಗದು. ಈ ನಿಬಂಧನೆ ಉಲ್ಲೇಖಿಸಲು ಅಪಹರಣ ನಡೆಸಲಾಗಿದೆ ಎಂದು ಆರೋಪಿಸುವುದು ಸಾಕಾಗುವುದಿಲ್ಲ. ಸೆಕ್ಷನ್‌ 364ಎ ಅನ್ವಯಿಸಲು ಬೇಡಿಕೆ ಅಥವಾ ಬೆದರಿಕೆಯೂ ದೂರಿನ ಭಾಗವಾಗಬೇಕು. ಆದರೆ, ದೂರಿನಲ್ಲಿ ಆ ಆರೋಪವಿಲ್ಲ” ಎಂದರು.

ಇದನ್ನು ಓದಿದ್ದೀರಾ? ಲೈಂಗಿಕ ದೌರ್ಜನ್ಯ ಪ್ರಕರಣ | ಜೂನ್ 6ರವರೆಗೆ ಸಂಸದ ಪ್ರಜ್ವಲ್ ರೇವಣ್ಣ ಎಸ್‌ಐಟಿ ಕಸ್ಟಡಿಗೆ

ಮುಂದುವರಿದು, “ಸಂತ್ರಸ್ತೆ ಮಹಿಳೆಯು ಹತ್ತು ವರ್ಷಗಳಿಂದ ರೇವಣ್ಣ ಮನೆಯಲ್ಲಿ ಮನೆಕೆಲಸ ಮಾಡಿದ್ದಾರೆ ಎಂದು ಪ್ರಾಸಿಕ್ಯೂಷನ್‌ ಹೇಳಿದೆ. “ರೇವಣ್ಣ ಆಕೆಯನ್ನು ಅಪಹರಿಸಿಲ್ಲ. ನಾನು ಆಕೆಯನ್ನು ಬರುವಂತೆ ಸೂಚಿಸಿದ್ದರೆ ಆಕೆ ಬರುತ್ತಿದ್ದರು” ಎಂದರು.

ಅಂತಿಮವಾಗಿ ಪೀಠವು ಜೂನ್‌ 3ರಂದು ವಿಚಾರಣೆ ನಡೆಸಲಾಗುವುದು ಎಂದಿತು. ಇದು ಮುಖ್ಯ ನ್ಯಾಯಮೂರ್ತಿಗಳ ಆದೇಶಕ್ಕೆ ಒಳಪಟ್ಟಿರುತ್ತದೆ ಎಂದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

ದಾವಣಗೆರೆ | ಕೆ.ಎನ್‌. ರಾಜಣ್ಣ, ನಾಗೇಂದ್ರರ ಮರಳಿ ಸಂಪುಟ ಸೇರ್ಪಡೆಗೆ ವಾಲ್ಮೀಕಿ ಸಮಾಜ ಆಗ್ರಹ

"ಇತ್ತೀಚೆಗೆ ಚುನಾವಣೆ ಆಯೋಗದ ವಿರುದ್ಧ ಕಾಂಗ್ರೆಸ್ ಆರೋಪಕ್ಕೆ ವ್ಯತಿರಿಕ್ತ ಹೇಳಿಕೆ ನೀಡಿ...

Download Eedina App Android / iOS

X