ಪರಿಷತ್ ಚುನಾವಣೆ | ಸುಮಲತಾಗೆ ಬಿಜೆಪಿ ಟಿಕೆಟ್‌?

Date:

Advertisements

ಜೂನ್‌ 3ರಂದು ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ನಡೆಯಲಿದೆ. ಅಂದರೆ, ವಿಧಾನಸಭಾ ಶಾಸಕರು ವಿಧಾನ ಪರಿಷತ್‌ಗೆ 13 ಮಂದಿ ಸದಸ್ಯರ ಆಯ್ಕೆಗೆ ಮತ ಚಲಾಯಿಸಲಿದ್ದಾರೆ. 13 ಸ್ಥಾನಗಳಲ್ಲಿ ಬಿಜೆಪಿ 3 ಸ್ಥಾನಗಳನ್ನು ಗೆಲ್ಲುವ ಸಾಮರ್ಥ್ಯ ಹಿಂದಿದ್ದು, ಮೂವರು ಅಭ್ಯರ್ಥಿಗಳು ಬಿಜೆಪಿ ಹೈಕಮಾಂಡ್‌ ಫೈನಲ್ ಮಾಡಿದೆ ಎಂದು ತಿಳಿದುಬಂದಿದೆ. ಅದರಲ್ಲಿ, ಸಂಸದ ಸುಮಲತಾ ಹೆಸರೂ ಇದೆ ಎಂದು ಹೇಳಲಾಗಿದೆ.

2019ರ ಲೋಕಸಭಾ ಚುನಾವಣೆಯಲ್ಲಿ ಸ್ವತಂತ್ರ್ಯ ಅಭ್ಯರ್ಥಿಯಾಗಿ ಸ್ಪರ್ಧಿಸಿ, ಗೆದ್ದು ಸಂಸದೆಯಾಗಿದ್ದ ಸುಮಲತಾ, ಇತ್ತೀಚೆಗೆ ಬಿಜೆಪಿ ಸೇರಿದ್ದರು. ಆದರೆ, ಬಿಜೆಪಿ-ಜೆಡಿಎಸ್‌ ಮೈತ್ರಿಯಿಂದಾಗಿ ಜೆಡಿಎಸ್‌ ಪಾಲಾದ ಮಂಡ್ಯದಲ್ಲಿ ಸುಮಲತಾ ಟಿಕೆಟ್‌ ವಂಚಿತೆಯಾಗಿದ್ದರು. ಅಲ್ಲದೆ, ಚುನಾವಣೆಯ ವೇಳೆ ಮೈತ್ರಿ ಅಭ್ಯರ್ಥಿ, ಮಾಜಿ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿಗೆ ಬೆಂಬಲ ನೀಡುವುದಾಗಿ ಹೇಳಿದ್ದರೂ, ಚುನಾವಣಾ ಪ್ರಚಾರದಿಂದ ಕಾಣೆಯಾಗಿದ್ದರು.

ಟಿಕೆಟ್‌ ಸಿಗದ ಕಾರಣ ಅಸಮಾಧಾನಗೊಂಡಿದ್ದರೂ, ಬಿಜೆಪಿ ಹೈಕಮಾಂಡ್‌ ಒತ್ತಡಕ್ಕೆ ಮಣಿದು ಮೌನವಾಗಿದ್ದರು. ಇದೀಗ, ಅವರಿಗೆ ರಾಜ್ಯ ರಾಜಕಾರಣದಲ್ಲಿ ಬಿಜೆಪಿ ಅವಕಾಶ ನೀಡದೆ ಎನ್ನಲಾಗುತ್ತಿದೆ. ಸುಮಲತಾ ಜೊತೆಗೆ, ಎನ್ ರವಿಕುಮಾರ್ ಮತ್ತು ಎಂ ನಾಗರಾಜು ಅವರಿಗೂ ಟಿಕೆಟ್ ನೀಡಲಾಗಿದೆ ಎಂದು ಹೇಳಲಾಗುತ್ತಿದೆ. ಇಂದು (ಜೂನ್ 1) ಅಧಿಕೃತವಾಗಿ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗುವ ಸಾಧ್ಯತೆಗಳಿವೆ.

Advertisements

ರಾಜ್ಯ ಬಿಜೆಪಿ ನಾಯಕತ್ವವು 15 ಮಂದಿಯ ಹೆಸರುಗಳನ್ನು ಬಿಜೆಪಿ ಹೈಕಮಾಂಡ್‌ಗೆ ಕಳಿಸಿತ್ತು. ಅವರಲ್ಲಿ ಮೂವರನ್ನು ಹೈಕಮಾಂಡ್‌ ಆಯ್ಕೆ ಮಾಡಿದೆ. ಮಹಿಳಾ ಪ್ರಾತಿನಿಧ್ಯವೂ ಇರಬೇಕೆಂದು ರಾಜ್ಯ ನಾಯಕರು ಹೇಳಿದ್ದು, ಹೀಗಾಗಿ ಸುಮಲತಾ ಹೆಸರು ಮುನ್ನೆಲೆಯಲ್ಲಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಾಗರ | ಸಿಗಂದೂರು ಸೇತುವೆ ಮೇಲೆ ವ್ಹೀಲಿಂಗ್ ; ಬಿತ್ತು 5,000₹ ದಂಡ

ಸಾಗರದ ಸಿಗಂದೂರು ಸೇತುವೆ ಮೇಲೆ ದುಬಾರಿ ಬೈಕ್‌ನಲ್ಲಿ ವೀಲಿಂಗ್‌ ಮಾಡಿದ ಯುವಕನಿಗೆ...

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

Download Eedina App Android / iOS

X