ದಲಿತ ವಿದ್ಯಾರ್ಥಿ ನಾಯಕನ ಮೇಲೆ ಹಲ್ಲೆ; ಬಿಜೆಪಿ ಶಾಸಕನ ಪುತ್ರನ ವಿರುದ್ಧ ಎಫ್‌ಐಆರ್‌

Date:

Advertisements

ದಲಿತ ವಿದ್ಯಾರ್ಥಿ ನಾಯಕನ ಮೇಲೆ ಹಲ್ಲೆ ಮಾಡಿದ ಆರೋಪದ ಮೇಲೆ ಗುಜರಾತ್ ಬಿಜೆಪಿ ಶಾಸಕ ಗೀತಾಬಾ ಜಡೇಜಾ ಅವರ ಪುತ್ರ ಗಣೇಶ್ ಜಡೇಜಾ ಮತ್ತು ಇತರರ ವಿರುದ್ಧ ಕೊಲೆ ಯತ್ನ ಪ್ರಕರಣ ದಾಖಲಿಸಲಾಗಿದೆ. ಪ್ರಕರಣ ದಾಖಲಾದ ಬಳಿಕ ಹಲ್ಲೆಗೊಳಗಾದ ವಿದ್ಯಾರ್ಥಿ ನಾಯಕನ ತಂದೆಗೆ ಜುನಾಗಢದ ಬಿಜೆಪಿ ಮುಖಂಡನೊಬ್ಬ ರಾಜಿ ಮಾಡಿಕೊಳ್ಳಲು ಆಮಿಷವೊಡ್ಡಿರುವ ಆಡಿಯೋ ರೆಕಾರ್ಡಿಂಗ್‌ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ದಲಿತ ಮತ್ತು ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ (ಎನ್‌ಎಸ್‌ಯುಐ) ಸಂಘಟನೆಯ ನಾಯಕ ಸಂಜಯ್ ಸೋಲಂಕಿ ಅವರನ್ನು ಬಿಜೆಪಿ ಶಾಸಕನ ಪುತ್ರ ಗಣೇಶ್ ಜಡೇಜಾ ಮತ್ತು ಇತರರು ಅಪಹರಿಸಿ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಸಂಜಯ್ ಅವರ ತಂದೆ ರಾಜು ಸೋಲಂಕಿ ಅವರಿಗೆ ಬಿಜೆಪಿ ಮುಖಂಡ, ಜುನಾಗಢದ ಉಪಮೇಯರ್ ಗಿರೀಶ್ ಕೋಟೆಚಾ ಕರೆ ಮಾಡಿ, ಆಮಿಷವೊಡ್ಡಿದ್ದಾರೆ ಎಂದು ಹೇಳಲಾಗಿದೆ.

“ನಿಮ್ಮ ಹುಡುಗ ಯಾರೊಂದಿಗಾದರೂ ಜಗಳವಾಡಿದ್ದಾನೆಯೇ? ರಾಜೀ ಮಾಡಿಕೊಳ್ಳಲು ನಿಮಗೆ ಸಿಗಬೇಕದ್ದು, ಸಿಗುತ್ತದೆ. ತೆಗೆದುಕೊಳ್ಳಬೇಕಾದದ್ದನ್ನು ತೆಗೆದುಕೊಳ್ಳಿ. ಆದರೆ ಸಮಸ್ಯೆಯನ್ನು ಪರಿಹರಿಸಿ” ಎಂದು ಕೋಟೆಚಾ ಆಮಿಷವೊಡ್ಡಿರುವುದು ಆಡಿಯೋ ರೆಕಾರ್ಡ್‌ನಲ್ಲಿ ಸೆರೆಯಾಗಿದೆ.

Advertisements

ಇದಕ್ಕೆ ಕೋಪದಿಂದ ಪ್ರತಿಕ್ರಿಯಿಸಿದ ಸೋಲಂಕಿ, “ಒಮ್ಮೆ ನಾನು ಅವನನ್ನು (ಬಿಜೆಪಿ ಶಾಸಕನ ಪುತ್ರ) ಕೋಲಿನಿಂದ ಹೊಡೆದ ಬಳಿಕ, ಸಮಸ್ಯೆಯನ್ನು ಪರಿಹರಿಸುತ್ತೇನೆ” ಎಂದು ಹೇಳಿದ್ದಾರೆ.

ಆರೋಪಿಗಳ ವಿರುದ್ಧ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯಿದೆ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಎಫ್‌ಐಆರ್‌ನ ಪ್ರಕಾರ, 26 ವರ್ಷದ ಸಂಜಯ್ ಸೋಲಂಕಿ ಗುರುವಾರ ರಾತ್ರಿ ದ್ವಿಚಕ್ರ ವಾಹನದಲ್ಲಿ ತೆರಳುವಾಗ, ಜಡೇಜಾ ಅವರ ಕಾರು ಆತನ ಮೇಲೆರಗಿದಂತೆ ಹಾದು ಹೋಗಿದೆ. ಹೀಗಾಗಿ, ಸೋಲಂಕಿ ಎಚ್ಚರಿಕೆಯಿಂದ ಚಲಾಯಿಸುವಂತೆ ಚಡೇಜಾಗೆ ಹೇಳಿದ್ದಾರೆ. ಇದರಿಂದ ಕೋಪಗೊಂಡ ಜಡೇನಾ ಮತ್ತು ಅತನ ಸಂಗಡಿಗರು ಸೋಲಂಕಿಯನ್ನು ಹಿಂಬಾಲಿಸಿ, ಅತನ ಮನೆಯಲ್ಲಿಯೇ ಹಲ್ಲೆ ನಡೆಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

Download Eedina App Android / iOS

X