ಉತ್ತರ ಪ್ರದೇಶ| ತಾಪಮಾನ ಏರಿಕೆ; ಕೊನೆಯ ಹಂತದ ಚುನಾವಣೆ ದಿನ 33 ಸಿಬ್ಬಂದಿ ಸಾವು

Date:

Advertisements

ಉತ್ತರ ಪ್ರದೇಶದ 13 ಕ್ಷೇತ್ರಗಳಲ್ಲಿ ಶನಿವಾರ ಏಳನೇ ಹಂತದ ಲೋಕಸಭೆ ಚುನಾವಣೆ ನಡೆದಿದ್ದು ಈ ಕೊನೆಯ ಹಂತದ ಚುನಾವಣೆ ದಿನ ತಾಪಮಾನ ಏರಿಕೆಯಿಂದಾಗಿ 33 ಸಿಬ್ಬಂದಿ ಸಾವನ್ನಪ್ಪಿದ್ದಾರೆ ಎಂದು ಉತ್ತರ ಪ್ರದೇಶದ ಮುಖ್ಯ ಚುನಾವಣಾ ಅಧಿಕಾರಿ (ಸಿಇಒ) ನವದೀಪ್ ರಿನ್ವಾ ಮಾಹಿತಿ ನೀಡಿದ್ದಾರೆ.

ಗೃಹರಕ್ಷಕರು, ನೈರ್ಮಲ್ಯ ಕಾರ್ಯಕರ್ತರು ಮತ್ತು ಇತರ ಚುನಾವಣಾ ಸಿಬ್ಬಂದಿಗಳು ಇದರಲ್ಲಿ ಸೇರಿದ್ದಾರೆ. ಬಲ್ಲಿಯಾ ಲೋಕಸಭಾ ಕ್ಷೇತ್ರದ ಸಿಕಂದರ್‌ಪುರ ಪ್ರದೇಶದ ಮತಗಟ್ಟೆಯೊಂದರಲ್ಲಿ ಮತದಾರ ಮೃತಪಟ್ಟಿದ್ದಾನೆ ಎಂದು ತಿಳಿಸಿದ್ದಾರೆ.

ಮತಗಟ್ಟೆಯಲ್ಲಿ ನಿಂತಿದ್ದ ರಾಮ್ ಬದನ್ ಚೌಹಾಣ್ ಎಂಬ ಮತದಾರರು ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದು, ಅವರನ್ನು ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲಾಯಿತು, ಅಲ್ಲಿ ವೈದ್ಯರು ಅವರು ಸಾವನ್ನಪ್ಪಿದ್ದಾರೆ ಎಂದು ಘೋಷಿಸಿದ್ದಾರೆ.

Advertisements

ಇದನ್ನು ಓದಿದ್ದೀರಾ?  ಉತ್ತರ ಪ್ರದೇಶ| ತಾಪಮಾನ ಏರಿಕೆ; 15 ಚುನಾವಣಾ ಸಿಬ್ಬಂದಿ ಸಾವು

ಆಯಾ ಕ್ಷೇತ್ರಗಳಲ್ಲಿ ಚುನಾವಣಾ ಸಿಬ್ಬಂದಿ ಸಾವಿನ ಬಗ್ಗೆ ವರದಿ ಸಲ್ಲಿಸುವಂತೆ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ. ಜಿಲ್ಲಾಡಳಿತದ ಅಧಿಕಾರಿಗಳು ಸಿಬ್ಬಂದಿಯ ಮರಣೋತ್ತರ ಪರೀಕ್ಷೆ ವರದಿಯನ್ನೂ ಸಲ್ಲಿಸಲಿದ್ದಾರೆ ಎಂದು ಸಿಇಒ ರಿನ್ವಾ ತಿಳಿಸಿದ್ದಾರೆ.

ಚುನಾವಣಾ ಆಯೋಗದ ಆದೇಶದಂತೆ ಚುನಾವಣಾ ಸಿಬ್ಬಂದಿ ಕುಟುಂಬ ಸದಸ್ಯರಿಗೆ 15 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು ಎಂದು ಹೇಳಿದರು.

ರಮಾಬಾಯಿ ಅಂಬೇಡ್ಕರ್ ಮೈದಾನದಲ್ಲಿ ಇವಿಎಂಗಳ ಕಾವಲು ಕಾಯುತ್ತಿದ್ದ ಪಿಎಸಿ ಕಾನ್‌ಸ್ಟೆಬಲ್ ಶನಿವಾರ ಸಾವನ್ನಪ್ಪಿದ್ದಾರೆ.

ಇದನ್ನು ಓದಿದ್ದೀರಾ?  ಉತ್ತರ ಪ್ರದೇಶದಲ್ಲಿ ಅಪಘಾತ: 11 ಮಂದಿ ಸಾವು, 10 ಜನರಿಗೆ ಗಾಯ

ಜೆಸಿಪಿ (ಕಾನೂನು ಮತ್ತು ಸುವ್ಯವಸ್ಥೆ) ಉಪೇಂದ್ರ ಅಗರ್ವಾಲ್ ಅವರು ಕಾನ್ಸ್‌ಟೇಬಲ್ ಸಾವನ್ನು ಖಚಿತಪಡಿಸಿದ್ದು, ಸ್ಥಳದಲ್ಲಿ ಕರ್ತವ್ಯದಲ್ಲಿರುವ ಅಧಿಕಾರಿಗಳಿಗೆ ಕೂಲರ್‌ಗಳು ಮತ್ತು ಇತರ ಸೌಲಭ್ಯಗಳು ಲಭ್ಯವಿದೆ. ಮರಣೋತ್ತರ ಪರೀಕ್ಷೆಯ ನಂತರ ಸಾವಿಗೆ ನಿಖರ ಕಾರಣ ತಿಳಿಯಲಿದೆ ಎಂದು ಹೇಳಿದರು.

ಏಳನೇ ಹಂತದಲ್ಲಿ, ಉತ್ತರ ಪ್ರದೇಶದ ಮಹಾರಾಜ್‌ಗಂಜ್, ಗೋರಖ್‌ಪುರ, ಕುಶಿನಗರ, ಡಿಯೋರಿಯಾ, ಬನ್ಸ್‌ಗಾಂವ್ (ಎಸ್‌ಸಿ), ಘೋಸಿ, ಸೇಲಂಪುರ, ಬಲ್ಲಿಯಾ, ಗಾಜಿಪುರ, ಚಂದೌಲಿ, ವಾರಣಾಸಿ, ಮಿರ್ಜಾಪುರ ಮತ್ತು ರಾಬರ್ಟ್ಸ್‌ಗಂಜ್‌ನಲ್ಲಿ (ಎಸ್‌ಸಿ) ಮತದಾನ ನಡೆಯಿತು.

ಚುನಾವಣಾ ಆಯೋಗವು ಈ ಹಂತದಲ್ಲಿ 1,08,349 ಚುನಾವಣಾ ಸಿಬ್ಬಂದಿಯನ್ನು ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಿತ್ತು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X