ಇಂದು ತಿಹಾರ್ ಜೈಲಿಗೆ ದೆಹಲಿ ಸಿಎಂ ಶರಣು: ಬೆಂಬಲಿಗರಿಗೆ ಕೇಜ್ರಿವಾಲ್ ಸಂದೇಶ

Date:

Advertisements

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ತಮ್ಮ 21 ದಿನಗಳ ಮಧ್ಯಂತರ ಜಾಮೀನು ಅಂತ್ಯಗೊಂಡ ಕಾರಣ ಜೂನ್ 2ರಂದು ಭಾನುವಾರ ತಿಹಾರ್ ಜೈಲಿಗೆ ಶರಣಾಗಲಿದ್ದಾರೆ ಎಂದು ತಿಳಿಸಿದ್ದಾರೆ.

ಕೇಂದ್ರ ಕಾರಾಗೃಹದಲ್ಲಿ ಶರಣಾಗುವ ಮುನ್ನ ರಾಜ್‌ಘಾಟ್‌ನಲ್ಲಿರುವ ಮಹಾತ್ಮ ಗಾಂಧಿ ಅವರ ಸ್ಮಾರಕ ಮತ್ತು ಕನ್ನಾಟ್ ಪ್ಲೇಸ್‌ನಲ್ಲಿರುವ ಪ್ರಾಚೀನ ಹನುಮಾನ್ ದೇವಸ್ಥಾನಕ್ಕೆ ಭೇಟಿ ನೀಡುವುದಾಗಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.

ಈ ಬಗ್ಗೆ ಎಕ್ಸ್‌ ಪೋಸ್ಟ್‌ನಲ್ಲಿ ಬರೆದಿರುವ ಅರವಿಂದ್ ಕೇಜ್ರಿವಾಲ್ ಅವರು, “ಸುಪ್ರೀಂ ಕೋರ್ಟ್‌ನ ಆದೇಶದ ಮೇರೆಗೆ ನಾನು 21 ದಿನಗಳ ಕಾಲ ಚುನಾವಣಾ ಪ್ರಚಾರಕ್ಕೆ ಬಂದಿದ್ದೇನೆ. ಸುಪ್ರೀಂ ಕೋರ್ಟ್‌ಗೆ ನಾನು ತುಂಬಾ ಕೃತಜ್ಞನಾಗಿದ್ದೇನೆ. ಇಂದು ನಾನು ಮತ್ತೆ ಶರಣಾಗುತ್ತೇನೆ” ಎಂದು ತಿಳಿಸಿದ್ದಾರೆ.

Advertisements

ಇದನ್ನು ಓದಿದ್ದೀರಾ?  ‘ವೈದ್ಯರು ನನಗೆ ಗಂಭೀರ ಕಾಯಿಲೆಯ ಲಕ್ಷಣಗಳಿವೆ ಎಂದಿದ್ದಾರೆ’: ಅರವಿಂದ್ ಕೇಜ್ರಿವಾಲ್

“ತಿಹಾರ್‌ಗೆ ಹೋಗುವಾಗ ನಾನು ಮೊದಲು ರಾಜ್‌ಘಾಟ್‌ಗೆ ಹೋಗುತ್ತೇನೆ ಮತ್ತು ಅಲ್ಲಿಂದ ಹನುಮಾನ್ ದೇವರ ಆಶೀರ್ವಾದವನ್ನು ಪಡೆಯಲು ಹೋಗುತ್ತೇನೆ. ಪಕ್ಷದ ಕಚೇರಿಯಲ್ಲಿ ಮತ್ತು ಪಕ್ಷದ ನಾಯಕರನ್ನು ಭೇಟಿ ಮಾಡಿ, ನಾನು ಮತ್ತೆ ತಿಹಾರ್‌ಗೆ ಹೋಗುತ್ತೇನೆ. ನಿಮ್ಮ ಬಗ್ಗೆ ನೀವು ಕಾಳಜಿ ವಹಿಸಿಕೊಳ್ಳಿ. ಜೈಲಿನಲ್ಲಿರುವಾಗ ನಿಮ್ಮೆಲ್ಲರ ಬಗ್ಗೆ ನನಗೆ ಚಿಂತೆಯಾಗುತ್ತದೆ. ನೀವು ಸಂತೋಷವಾಗಿದ್ದರೆ ನಿಮ್ಮ ಕೇಜ್ರಿವಾಲ್ ಜೈಲಿನಲ್ಲಿಯೂ ಸಂತೋಷವಾಗಿರುತ್ತಾನೆ” ಎಂದು ತಿಳಿಸಿದ್ದಾರೆ.

ಲೋಕಸಭೆ ಚುನಾವಣೆ ಪ್ರಚಾರಕ್ಕಾಗಿ ಸುಪ್ರೀಂ ಕೋರ್ಟ್ ನೀಡಿದ ಮಧ್ಯಂತರ ಜಾಮೀನಿನ ಮೇಲೆ ಕೇಜ್ರಿವಾಲ್ ಮೇ 10ರಂದು ಜೈಲಿನಿಂದ ಬಿಡುಗಡೆಯಾಗಿದ್ದರು. ನ್ಯಾಯಾಲಯ ಅವರಿಗೆ 21 ದಿನಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದ್ದು, ಜೂನ್ 2ರಂದು ತಿಹಾರ್ ಜೈಲು ಅಧೀಕ್ಷಕರ ಮುಂದೆ ಶರಣಾಗುವಂತೆ ಸೂಚಿಸಿದೆ.

ಇದನ್ನು ಓದಿದ್ದೀರಾ?  ದೇಶ ಉಳಿಸಲು 100 ಬಾರಿ ಜೈಲಿಗೆ ಹೋಗಲು ಸಿದ್ಧ: ಅರವಿಂದ್ ಕೇಜ್ರಿವಾಲ್

ತಮ್ಮ ಆರೋಗ್ಯ ಸ್ಥಿತಿ ಹದಗೆಟ್ಟಿರುವ ಕಾರಣದಿಂದ ಮಧ್ಯಂತರ ಜಾಮೀನಿನ ಅವಧಿಯನ್ನು ಏಳು ದಿನಗಳ ಕಾಲ ವಿಸ್ತರಿಸುವಂತೆ ಕೋರಿ ಕೇಜ್ರಿವಾಲ್ ಈ ಹಿಂದೆ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಜಾಮೀನು ವಿಸ್ತರಣೆ ಕೋರಿ ಸಲ್ಲಿಸಿರುವ ಮನವಿಯಲ್ಲಿ, ತಮ್ಮ ತೂಕ ಕಡಿಮೆಯಾಗುತ್ತಿದ್ದು ಕೆಲವು ವೈದ್ಯಕೀಯ ಪರೀಕ್ಷೆಗಳನ್ನು ನಡೆಸಲಿದೆ ಎಂದು ಮನವಿ ಮಾಡಿದ್ದಾರೆ.

ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ನಿರಾಕರಿಸಿದೆ. ನಂತರ ಅವರು ವೈದ್ಯಕೀಯ ಕಾರಣಗಳಿಗಾಗಿ ಜಾಮೀನು ಕೋರಿ ವಿಶೇಷ ಸಿಬಿಐ-ಇಡಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದರು. ವಿಶೇಷ ನ್ಯಾಯಾಧೀಶರಾದ ಕಾವೇರಿ ಬವೇಜಾ ಅವರು ತಮ್ಮ ಅರ್ಜಿಯ ಆದೇಶವನ್ನು ಜೂನ್ 5ಕ್ಕೆ ಕಾಯ್ದಿರಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಬಿಐ ಅಧಿಕಾರಿಗಳಂತೆ ನಟಿಸಿ 2.3 ಕೋಟಿ ರೂ. ದೋಚಿದ್ದ ಗ್ಯಾಂಗ್: ಇಬ್ಬರ ಬಂಧನ

ಕೇಂದ್ರ ತನಿಖಾ ದಳ (ಸಿಬಿಐ) ಅಧಿಕಾರಿಗಳಂತೆ ನಟಿಸಿ ಉದ್ಯಮಿಯೊಬ್ಬರ ಕಚೇರಿಯಿಂದ ಗ್ಯಾಂಗ್...

ಬೀದಿ ನಾಯಿಗಳಿಗೆ ಲಸಿಕೆ ಹಾಕಿದ ನಂತರ ಅದೇ ಸ್ಥಳಕ್ಕೆ ತಂದು ಬಿಡಬೇಕು: ಸುಪ್ರೀಂ ಕೋರ್ಟ್‌

ಬೀದಿ ನಾಯಿಗಳಿಗೆ ಸಂಬಂಧಿಸಿದ್ದಂತೆ ಆಗಸ್ಟ್ 11ರ ಆದೇಶವನ್ನು ಮಾರ್ಪಡಿಸಿದ ಸುಪ್ರೀಂ...

ವಿವಾದಾತ್ಮಕ ಯೂಟ್ಯೂಬರ್ ಎಲ್ವಿಶ್ ಮನೆ ಮೇಲೆ ಗುಂಡಿನ ದಾಳಿ: ಎನ್‌ಕೌಂಟರ್ ಮಾಡಿ ಆರೋಪಿ ಬಂಧನ

ಬಲಪಂಥೀಯ, ವಿವಾದಾತ್ಮಕ ಯೂಟ್ಯೂಬರ್ ಮತ್ತು ಬಿಗ್ ಬಾಸ್ ವಿಜೇತ ಎಲ್ವಿಶ್ ಯಾದವ್‌...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

Download Eedina App Android / iOS

X