ಧಾರವಾಡ | ಸ್ಮರಣ ಶಕ್ತಿ ಹಾಗೂ ಮೌಖಿಕ ಪರಂಪರೆಯೇ ಜಾನಪದ ಕಲಾವಿದರ ಆಸ್ತಿ: ಮಾಲತಿ ಪಟ್ಟಣಶೆಟ್ಟಿ

Date:

Advertisements

ಉತ್ತರ ಕರ್ನಾಟಕದ ಕಲಾವಿದರು ಕೃಷ್ಣ ಪಾರಿಜಾತ ಜಾನಪದ ಕಲೆಯನ್ನು ಅಂತಾರಾಷ್ಟ್ರೀಯ ಮಟ್ಟಕ್ಕೆ ಬೆಳೆಸಿದ್ದಾರೆ. ಈ ಜಾನಪದ ಕಲೆಗೆ ಸುಮಾರು 150 ವರ್ಷಗಳ ಇತಿಹಾಸವಿದೆ. ಸಂಗೀತವೇ ಕೃಷ್ಣ ಪಾರಿಜಾತದ ಜೀವಾಳ. ಇದೊಂದು ರಮ್ಯವಾದ ಗೀತರೂಪಕವಾಗಿದ್ದು, ಸ್ಮರಣ ಶಕ್ತಿ ಹಾಗೂ ಮೌಖಿಕ ಪರಂಪರೆಯೇ ಜಾನಪದ ಕಲಾವಿದರ ಆಸ್ತಿಯಾಗಿದೆ ಎಂದು ವಿದ್ಯಾವರ್ಧಕ ಸಂಘದ ಉಪಾಧ್ಯಕ್ಷೆ ಪ್ರೊ. ಮಾಲತಿ ಪಟ್ಟಣಶೆಟ್ಟಿ ಅಭಿಪ್ರಾಯಪಟ್ಟರು.

ಧಾರವಾಡ ನಗರದ ಕರ್ನಾಟಕ ವಿದ್ಯಾವರ್ಧಕ ಸಂಘದ ಕಲಾ ಮಂಟಪವು ಕೃಷ್ಣ ಪಾರಿಜಾತದಲ್ಲಿ ಭಗವದ್ಗೀತೆ ಉಪನ್ಯಾಸ ಹಾಗೂ ಕೃಷ್ಣ ಪಾರಿಜಾತದ ಕೊರವಂಜಿ ಭಾಗ ಪ್ರದರ್ಶನದ ನಡೆಸಿದ ವೇಳೆ ಮಾತನಾಡಿದರು.

“ಕೃಷ್ಣನು ಪಾರಿಜಾತದ ಪುಷ್ಪವನ್ನು ರುಕ್ಮಿಣಿಗೆ ನೀಡಿದಾಗ ಅದನ್ನು ತಿಳಿದ ಸತ್ಯಭಾಮೆ ಕೋಪಿಸಿಕೊಂಡಾಗ ಕೃಷ್ಣನು ಸತ್ಯಭಾಮೆಯನ್ನು ಸಂತೈಸುವ ಪರಿ, ಅವನಾಡಿದ ನಾಟಕ ಪ್ರಸಂಗ ಕೃಷ್ಣ ಪಾರಿಜಾತದಲ್ಲಿ ಮನೋಜ್ಞವಾಗಿ ಮೂಡಿಬಂದಿದೆ. ಇದು ಕೃಷ್ಣನ ಲೀಲೆಯನ್ನೊಳಗೊಂಡ ಒಂದು ಬಯಲಾಟವಾಗಿದೆ” ಎಂದರು.

Advertisements

ಮಲ್ಲಿಕಾರ್ಜುನ ದಾದನಟ್ಟಿ ಅವರು ಕೃಷ್ಣ ಪಾರಿಜಾತದ ಭಗವದ್ಗೀತೆಯ ಆಯ್ದ ಪ್ರಸಂಗಗಳು ಮತ್ತು ಸಾರವನ್ನು ಉಪನ್ಯಾಸದಲ್ಲಿ ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಧಾರವಾಡ | ತಂಬಾಕು ಸೇವನೆ ಹಲವು ರೋಗಗಳಿಗೆ ಆಹ್ವಾನ ಕೊಟ್ಟಂತೆ: ವೀಣಾ ಎನ್

ಸಂಘದ ಪ್ರಧಾನ ಕಾರ್ಯದರ್ಶಿ ಶಂಕರ ಹಲಗತ್ತಿ, ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಲಿಂಗರಾಜ ಅಂಗಡಿ, ಧನವಂತ ಹಾಜವಗೋಳ, ವಿಷಯಾ ಜೇವೂರ, ಆಶಾ ಸಯ್ಯದ್, ಸುನಿತಾ ವಾಸರದ, ಮಲ್ಲಿಕಾರ್ಜುನ ಹಿರೇಮಠ, ನಿಂಗಣ್ಣ ಕುಂಟಿ, ಎಂ ಎಸ್ ನರೇಗಲ್, ಸಂಗಮೇಶ ಮೆಣಸಿನಕಾಯಿ ಇದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಳ್ಳಾರಿ | ನಶಿಸಿ ಹೋಗುತ್ತಿರುವ ತೊಗಲುಗೊಂಬೆ ಪ್ರದರ್ಶನ ಉಳಿಸಿ ಬೆಳೆಸಬೇಕು: ಜೋಳದರಾಶಿ ತಿಮ್ಮಪ್ಪ

ನಶಿಸಿ ಹೋಗುತ್ತಿರುವ ತೊಗಲು ಗೊಂಬೆ ಪ್ರದರ್ಶನ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ...

ಭಟ್ಕಳ | ಮಗಳ ಅಶ್ಲೀಲ ವಿಡಿಯೊ ವೈರಲ್ ಮಾಡುವುದಾಗಿ ಬೆದರಿಕೆ: ಮೂವರ ಬಂಧನ

ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ನಗರದ ಕಿದ್ವಾಯಿ ರಸ್ತೆಯೊಂದರ ತರಕಾರಿ ವ್ಯಾಪಾರಿಯನ್ನು...

ಮಂಗಳೂರು | ಸ್ನಾತಕೋತ್ತರದತ್ತ ಮುಖಮಾಡದ ಪದವೀಧರರು: ಪ್ರವೇಶಾತಿ ಗಡುವು ವಿಸ್ತರಣೆ

ನಾಲ್ಕು ದಶಕಗಳಷ್ಟು ಹಳೆಯದಾದ ಮಂಗಳೂರು ವಿಶ್ವವಿದ್ಯಾಲಯ(MU), ನಿರೀಕ್ಷಿತ ಸಂಖ್ಯೆಯ ಪ್ರವೇಶಗಳನ್ನು ಪಡೆಯಲು...

ತುಮಕೂರು | ಅಧಿವೇಶನದಲ್ಲಿ ಆರ್‌ಎಸ್ಎಸ್ ಗೀತೆ : ಡಿಕೆಶಿ ವಿರುದ್ಧ ಕೆ. ಎನ್ ರಾಜಣ್ಣ ವಾಗ್ದಾಳಿ

ಡಿ.ಕೆ.ಶಿವಕುಮಾ‌ರ್ ಅಧಿವೇಶನದಲ್ಲಿ ಆರ್‌ಎಸ್ಎಸ್ ಗೀತೆ ಹಾಡಿದ ಬಗ್ಗೆ  ಮಾಜಿ ಸಚಿವ ಕೆ...

Download Eedina App Android / iOS

X